Homeಮುಖಪುಟದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದ ದೆಹಲಿ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ‘ರಾಷ್ಟ್ರ ರಾಜಧಾನಿ ವಲಯ ದೆಹಲಿ ತಿದ್ದುಪಡಿ ಮಸೂದೆಗೆ(ಎನ್‌ಸಿಟಿ)’ ರಾಷ್ಟ್ರಪತಿ  ಅಂಕಿತ ಹಾಕಿದ್ದಾರೆ. ಭಾನುವಾರ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿರುವ ಕೇಂದ್ರ ಸರ್ಕಾರ, ಎನ್‌ಸಿಟಿ ಮಸೂದೆ 2021ಕ್ಕೆ ರಾಷ್ಟ್ರಪತಿ ಒಪ್ಪಿಗೆ ದೊರೆತಿದೆ ಎಂದು ಹೇಳಿದೆ.

ದೆಹಲಿಯಲ್ಲಿ ಇನ್ನುಮುಂದೆ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಂದ ಹೊರ ನಡೆದಿದ್ದವು.

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

ಈ ಮಸೂದೆಯ ಅಂಗೀಕಾರ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದನ್ನು ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಕುರಿತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ ಎಂದು ಹೇಳಿದ್ದಾರೆ.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು. ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ, ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

ಇದನ್ನು ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ತಿದ್ದುಪಡಿ ಮಸೂದೆಯಿಂದಾಗಿ ರಾಷ್ಟ್ರ ರಾಜಧಾನಿ ವಲಯದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ಸಿಗಲಿದೆ. ಮಸೂದೆಯಲ್ಲಿನ ದ್ವಂದ್ವಗಳನ್ನು ತೆಗೆಯುವ ನಿಟ್ಟಿನಲ್ಲಿ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.


ಇದನ್ನು ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...