Homeಮುಖಪುಟದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ದೆಹಲಿ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಈ ಮಸೂದೆ ಏನು ಹೇಳುತ್ತದೆ?

ಇದು ಪ್ರಜಾಪ್ರಭುತ್ವದ ಕಗ್ಗೋಲೆ ಎಂದ ದೆಹಲಿ ಸಿಎಂ ಕೇಜ್ರಿವಾಲ್

- Advertisement -
- Advertisement -

ದೆಹಲಿಯ ಚುನಾಯಿತ ಸರ್ಕಾರಕ್ಕಿಂತಲೂ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಲೆಫ್ಟಿನೆಂಟ್‌ ಗವರ್ನರ್‌ಗೆ ಹೆಚ್ಚಿನ ಅಧಿಕಾರ ನೀಡುವ ‘ರಾಷ್ಟ್ರ ರಾಜಧಾನಿ ವಲಯ ದೆಹಲಿ ತಿದ್ದುಪಡಿ ಮಸೂದೆಗೆ(ಎನ್‌ಸಿಟಿ)’ ರಾಷ್ಟ್ರಪತಿ  ಅಂಕಿತ ಹಾಕಿದ್ದಾರೆ. ಭಾನುವಾರ ಗೆಜೆಟ್‌ ನೋಟಿಫಿಕೇಷನ್‌ ಹೊರಡಿಸಿರುವ ಕೇಂದ್ರ ಸರ್ಕಾರ, ಎನ್‌ಸಿಟಿ ಮಸೂದೆ 2021ಕ್ಕೆ ರಾಷ್ಟ್ರಪತಿ ಒಪ್ಪಿಗೆ ದೊರೆತಿದೆ ಎಂದು ಹೇಳಿದೆ.

ದೆಹಲಿಯಲ್ಲಿ ಇನ್ನುಮುಂದೆ “ಸರ್ಕಾರ” ಎಂಬ ಪದವು ಲೆಫ್ಟಿನೆಂಟ್ ಗವರ್ನರ್ ಎಂದರ್ಥವಾಗುತ್ತದೆ. ದೆಹಲಿ ಸರ್ಕಾರವು ಯಾವುದೇ ಕಾರ್ಯಾಂಗೀಯ ಕ್ರಮ ತೆಗೆದುಕೊಳ್ಳುವ ಮೊದಲು ಲೆಫ್ಟಿನೆಂಟ್ ಗವರ್ನರ್‌‌ ಅಭಿಪ್ರಾಯವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ರಾಷ್ಟ್ರೀಯ ರಾಜಧಾನಿ (ತಿದ್ದುಪಡಿ) ಮಸೂದೆ ಸ್ಪಷ್ಟಪಡಿಸುತ್ತದೆ.

ರಾಜ್ಯಸಭೆಯಲ್ಲಿ ಈ ಶಾಸನವನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು. ಸರ್ಕಾರವು ಮಸೂದೆ ಪರಿಗಣನೆಗೆ ಮುಂದಾದಾಗ ಪ್ರತಿಪಕ್ಷಗಳು ವಿಭಜನೆ (ಡಿವಿಜನ್ ಆಫ್ ವೋಟ್ಸ್) ಕೋರಿದವು. ಮತದಾನದ ವೇಳೆ 83 ಸದಸ್ಯರು ಪರವಾಗಿದ್ದರೆ, 45 ಮಂದಿ ಮಸೂದೆಯನ್ನು ವಿರೋಧಿಸಿದರು. ಕಾಂಗ್ರೆಸ್ ಮತ್ತು ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಸೇರಿದಂತೆ ಹಲವಾರು ವಿರೋಧ ಪಕ್ಷಗಳು ಸದಸನದಿಂದ ಹೊರ ನಡೆದಿದ್ದವು.

ಮೇಲ್ಮನೆಯಲ್ಲಿ ಎರಡು ದಿನಗಳ ಗದ್ದಲಗಳ ನಂತರ ಮಸೂದೆಯನ್ನು ಅಂಗೀಕರಿಸಲಾಯಿತು. ಪ್ರತಿಪಕ್ಷದ ಸಂಸದರು ಈ ಮಸೂದೆ ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತದೆ ಎಂದು ಪದೇ ಪದೇ ಹೇಳಿದರು. ಮಸೂದೆಯನ್ನು ಆಯ್ಕೆ ಸಮಿತಿಗೆ (ಸೆಲೆಕ್ಟ್ ಕಮೀಟಿಗೆ) ಕಳುಹಿಸಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದವು.

ಈ ಮಸೂದೆಯ ಅಂಗೀಕಾರ ಅರವಿಂದ್ ಕೇಜ್ರಿವಾಲ್ ಅವರ ಸರ್ಕಾರಕ್ಕೆ ಭಾರಿ ಹಿನ್ನಡೆಯಾಗಿದೆ. ಇದು 2013 ರಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಾಗಿನಿಂದ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ ಸಂಘರ್ಷ ನಡೆಸುತ್ತಿದ್ದ ಸರ್ಕಾರಕ್ಕೆ ಈಗ ಹಿನ್ನಡೆ ಆಗಿದೆ.

ಇದನ್ನು ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಕುರಿತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್, ಇಂದು ಭಾರತೀಯ ಪ್ರಜಾಪ್ರಭುತ್ವಕ್ಕೆ ದುಃಖದ ದಿನ ಎಂದು ಹೇಳಿದ್ದಾರೆ.

“ದ್ರೌಪದಿಯ ಬಟ್ಟೆಗಳನ್ನು ಕಿತ್ತುಹಾಕಿದ ರೀತಿ ಸಂವಿಧಾನಕ್ಕೂ ಮಾಡಲಾಗುತ್ತಿದೆ” ಎಂದು ಹೇಳಿದ ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್, ದೆಹಲಿಯಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎರಡು ಬಾರಿ ಸೋತ ಕಾರಣ ಬಿಜೆಪಿ ಈ ಮಸೂದೆಯನ್ನು ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಯಾವುದೇ ಸಾಂವಿಧಾನಿಕ ತಿದ್ದುಪಡಿ ಇಲ್ಲದೆ ದೇಶದ ಸಂವಿಧಾನವನ್ನು ಬದಲಾಯಿಸಲಾಗುತ್ತಿದೆ” ಎಂದು ಸಿಂಗ್ ಹೇಳಿದರು. ದೆಹಲಿಯ ಈಗಿನ ಆಡಳಿತ ವ್ಯವಸ್ಥೆಯು 69 ಸಾಂವಿಧಾನಿಕ ತಿದ್ದುಪಡಿಗಳ ನಂತರ ಬಂದಿದೆ. ಸಾಂವಿಧಾನಿಕ ತಿದ್ದುಪಡಿಗೆ ಸಂಸತ್ತಿನಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ – ಸರಳ ಬಹುಮತವಲ್ಲ – ಇದಕ್ಕಾಗಿ ಮೇಲ್ಮನೆಯಲ್ಲಿ ಬಿಜೆಪಿಗೆ ಸಂಖ್ಯೆಗಳ ಕೊರತೆಯಿದೆ. ಆದರೆ ಸರಳ ಬಹುಮತದಲ್ಲಿ ಇದನ್ನು ಸಾಧಿಸಲಾಗುತ್ತಿದೆ ಎಂದರು.

ಲೆಫ್ಟಿನೆಂಟ್-ಗವರ್ನರ್ ಎಂಬ ಪ್ರಾಕ್ಸಿ ಮೂಲಕ ದೆಹಲಿಯನ್ನು ಆಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಎಎಪಿ ಸರ್ಕಾರ ಆರೋಪಿಸುತ್ತಲೆ ಬಂದಿದೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಆರ್‌ಜೆಡಿ, ಶಿವಸೇನೆ, ವೈಎಸ್‌ಆರ್ ಕಾಂಗ್ರೆಸ್ ಮತ್ತು ಅಕಾಲಿ ದಳ ಸೇರಿದಂತೆ ಹೆಚ್ಚಿನ ವಿರೋಧ ಪಕ್ಷಗಳು ಈ ಮಸೂದೆಯನ್ನು ವಿರೋಧಿಸಿದ್ದವು. ವೈಎಸ್‌ಆರ್ ಕಾಂಗ್ರೆಸ್ ಚರ್ಚೆಯ ಮಧ್ಯದಲ್ಲಿ ಹೊರನಡೆಯಿತು.

ಎಎಪಿ, ಈ ಮಸೂದೆಯನ್ನು ಜನರು ಒಪ್ಪುವುದಿಲ್ಲ ಮತ್ತು ರೈತರ ಪ್ರತಿಭಟನೆಯಂತೆಯೇ ಪ್ರತಿಭಟನೆಗಳು ನಡೆಯಲಿವೆ ಎಂದು ಹೇಳಿತು. ಮಸೂದೆಯನ್ನು ತರಲು ಒಂದು ಪ್ರಮುಖ ಕಾರಣವೆಂದರೆ ಪ್ರತಿಭಟನಾ ನಿರತ ರೈತರಿಗೆ ಕೇಜ್ರಿವಾಲ್ ಅವರು ಬೆಂಬಲ ನೀಡಿದ್ದು ಎನ್ನಲಾಗಿದೆ.

ಇದನ್ನು ಓದಿ: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ: ಮಹಾನಾಯಕ ಪದ ಬಳಕೆಗೆ ಪ್ರಜ್ಞಾವಂತರ ವಿರೋಧ

“ಎರಡು ಕೋಟಿ ಜನರು ಸರ್ಕಾರವನ್ನು ಆಯ್ಕೆ ಮಾಡಿದರು. ನಮ್ಮ ಅಪರಾಧವೇನು? ಕೇಜ್ರಿವಾಲ್ ಅವರು ದೆಹಲಿಗೆ ಬಂದಾಗ ರೈತರನ್ನು ಜೈಲಿಗೆ ಹಾಕದ ಕಾರಣ ಇದನ್ನು ಮಾಡಲಾಗಿದೆ. ಮಸೂದೆಯನ್ನು ರದ್ದುಗೊಳಿಸಬೇಕು” ಎಂದು ಸಿಂಗ್ ಹೇಳಿದರು.

’ಇಲ್ಲಿ ಚುನಾಯಿತ ಸರ್ಕಾರದ ಅಧಿಕಾರವನ್ನು ಕಿತ್ತುಕೊಂಡು ಅದನ್ನು ಲೆಫ್ಟಿನೆಂಟ್‌‌ ಗವರ್ನರ್‌ಗೆ ನೀಡಲಾಗುತ್ತಿದೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದು ಕಾನೂನಾಗಬಾರದು” ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.

ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹಖಾತೆ ರಾಜ್ಯ ಸಚಿವ ಜಿ. ಕಿಶನ್ ರೆಡ್ಡಿ ಅವರು ಪ್ರತಿಪಕ್ಷಗಳ ಕಳವಳಗಳಿಗೆ ಸ್ಪಂದಿಸಲು ಪ್ರಯತ್ನಿಸಿದರು. 1991 ರ ಕಾಯಿದೆಯಲ್ಲಿನ ಅಸ್ಪಷ್ಟತೆಗಳನ್ನು ತೆಗೆದುಹಾಕಲು ತಿದ್ದುಪಡಿಗಳನ್ನು ತರಲಾಗಿದ್ದು, ಸುಪ್ರೀಂಕೋರ್ಟ್ ತೀರ್ಪಿನ ಆಧಾರದಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು.

ದಿನನಿತ್ಯದ ಆಡಳಿತದ ಪ್ರತಿಯೊಂದು ವಿಷಯದ ಬಗ್ಗೆ ದೆಹಲಿ ಸರ್ಕಾರವು ಲೆಫ್ಟಿನೆಂಟ್ ಗವರ್ನರ್ ಅವರ “ಸಮ್ಮತಿಯನ್ನು” ಪಡೆಯುವ ಅಗತ್ಯವಿಲ್ಲ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಕಾಯ್ದೆಯಲ್ಲಿನ ತಿದ್ದುಪಡಿಗಳು ದೆಹಲಿಯಲ್ಲಿ ಉತ್ತಮ ಸರ್ಕಾರಿ ಕಾರ್ಯವಿಧಾನವನ್ನು ಸೃಷ್ಟಿಸುತ್ತವೆ ಎಂದು ಅವರು ಹೇಳಿದರು.

ತಿದ್ದುಪಡಿ ಮಸೂದೆಯಿಂದಾಗಿ ರಾಷ್ಟ್ರ ರಾಜಧಾನಿ ವಲಯದ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಸ್ಪಷ್ಟತೆ ಸಿಗಲಿದೆ. ಮಸೂದೆಯಲ್ಲಿನ ದ್ವಂದ್ವಗಳನ್ನು ತೆಗೆಯುವ ನಿಟ್ಟಿನಲ್ಲಿ ತಿದ್ದುಪಡಿ ತರಲಾಗಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್‌ ರೆಡ್ಡಿ ಹೇಳಿದ್ದಾರೆ.


ಇದನ್ನು ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...