Homeಮುಖಪುಟದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

ದೆಹಲಿ: 8 ವರ್ಷದ ಬಾಲಕಿ ಮೇಲೆ ಇಬ್ಬರು ಅಪ್ರಾಪ್ತರಿಂದ ಅತ್ಯಾಚಾರ; ಬಾಲಕಿ ಸ್ಥಿತಿ ಗಂಭೀರ

- Advertisement -
- Advertisement -

ದೆಹಲಿ: ಎಂಟು ವರ್ಷದ ಬಾಲಕಿಯ ಮೇಲೆ ಇಬ್ಬರು ಅಪ್ರಾಪ್ತರು ಅತ್ಯಾಚಾರವೆಸಗಿದ್ದು, ಬಾಲಕಿಯನ್ನು ಐಸಿಯುಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಗಂಭೀರವಾಗಿದೆ.

ಈಶಾನ್ಯ ದೆಹಲಿಯಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ 11 ಮತ್ತು 12 ವರ್ಷದ ಇಬ್ಬರು ಬಾಲಕರು ಅತ್ಯಾಚಾರವೆಸಗಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ಮಂಗಳವಾರ ವರದಿ ಮಾಡಿದೆ.

ಬಾಲಕಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ. ಬಾಲಕಿಗೆ ತೀವ್ರ ರಕ್ತಸ್ರಾವವಾಗಿದೆ ಎಂದು ವರದಿಗಳಾಗಿವೆ.

ಎಂಟು ವರ್ಷದ ಬಾಲಕಿ ಸೋಮವಾರ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ 12 ವರ್ಷದ ಬಾಲಕ ಬಾಲಕಿಯನ್ನು ತನ್ನ ಮನೆಗೆ ಕರೆದಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವನು ಮತ್ತು ಅವನ ಸ್ನೇಹಿತ ಸೇರೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬಾಲಕಿ ಮನೆಗೆ ಹಿಂದಿರುಗಿದಾಗ,  ತೀವ್ರ ಹೊಟ್ಟೆ ನೋಯುತ್ತಿರುವುದಾಗಿ ತಿಳಿಸಿದ್ದು, ಮರ್ಮಾಂಗಗಳಿಗೆ ಗಂಭೀರ ಗಾಯಗಳಾಗಿರುವುದು ತಿಳಿದುಬಂದಿದೆ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ.

“ಆರಂಭದಲ್ಲಿ ನನ್ನ ಮಗಳು ಏನು ಹೇಳುತ್ತಿದ್ದಾಳೆಂದು ತನಗೆ ಅರ್ಥವಾಗಲಿಲ್ಲ” ಎಂದು ಬಾಲಕಿಯ ತಾಯಿ ದಿ ಹಿಂದೂಗೆ ತಿಳಿಸಿದ್ದಾರೆ. “ನಾನು ಅವಳ ಬಟ್ಟೆಗಳನ್ನು ನೋಡಿದಾಗ, ಅವಳು ಅತ್ಯಾಚಾರಕ್ಕೊಳಗಾಗಿದ್ದಾಳೆಂದು ಅರಿವಾಯಿತು” ಎಂದು ಹೇಳಿದ್ದಾರೆ. “ಆ ಹುಡುಗ ನನ್ನ ಮಗಳನ್ನು ಸುಟ್ಟು ಹಾಕುವುದಾಗಿ ಬೆದರಿಕೆ ಹಾಕಿದ್ದಾನೆಂದು ನಂತರ ನನಗೆ ಅರ್ಥವಾಯಿತು” ಎಂದಿದ್ದಾರೆ.

ಆಯೋಗವು ಬುಧವಾರ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದು, ಪ್ರಥಮ ಮಾಹಿತಿ ವರದಿಯ ಪ್ರತಿಯನ್ನು ನೀಡುವಂತೆ ಸೂಚಿಸಿದೆ. ಪ್ರಕರಣದಲ್ಲಿ ಬಂಧಿತರಾಗಿರುವವರ ವಿವರಗಳನ್ನು ಸಮಿತಿ ಕೇಳಿದೆ.

ಜನವರಿ 28ರೊಳಗೆ ಕ್ರಮ ಕೈಗೊಂಡಿರುವ ವರದಿ ಸಲ್ಲಿಸುವಂತೆ ಸಮಿತಿಯು ಪೊಲೀಸರಿಗೆ ಸೂಚಿಸಿದೆ. ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 363 (ಅಪಹರಣ) ಮತ್ತು 376 ಎಬಿ (ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇಬ್ಬರು ಬಾಲಕರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಈಶಾನ್ಯ) ಸಂಜಯ್ ಸೈನ್ ತಿಳಿಸಿದ್ದಾರೆ. “ಅತ್ಯಾಚಾರವೆಸಗಿರುವ ಹುಡುಗರು ಬಾಲಕಿಯ ನೆರೆಹೊರೆಯವರಾಗಿದ್ದಾರೆಂಬುದು ಸ್ಥಳೀಯರ ವಿಚಾರಣೆ ಮತ್ತು ಮನೆಯ ಸಮೀಪವಿರುವ ಸಿಸಿಟಿವಿಗಳ ಸಹಾಯದಿಂದ ತಿಳಿದುಬಂದಿದೆ” ಎಂದು ಪೊಲೀಸರು ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಬೇಕಾಗಿದೆ” ಎಂದು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ಆಗ್ರಹಿಸಿದ್ದಾರೆ.


ಇದನ್ನೂ ಓದಿರಿ: ಒಡಿಶಾದಲ್ಲಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ ಜೀವಾವಧಿ ಶಿಕ್ಷೆ, ಆತನ ಪತ್ನಿಗೆ 20 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...