Homeಮುಖಪುಟದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

ದೆಹಲಿ: ಸುಪ್ರೀಂ ಕೋರ್ಟ್ ತಡೆಯಾಜ್ಞೆ ನಡುವೆಯೂ ತೆರವು ಕಾರ್ಯಾಚರಣೆ!

- Advertisement -
- Advertisement -

ತೆರವು ಕಾರ್ಯಾಚರಣೆಯನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ ನಂತರವೂ ಏಪ್ರಿಲ್ 20ರಂದು ಬುಧವಾರ ಬೆಳಿಗ್ಗೆ ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಕಾರ್ಯಾಚರಣೆ ನಡೆದಿದೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌.ವಿ.ರಮಣ ಅವರು, “ಯಥಾಸ್ಥಿತಿ ಆದೇಶವನ್ನು ಅನುಸರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕು” ಎಂದು ಕೋರ್ಟ್ ರಿಜಿಸ್ಟ್ರಿಗೆ ತಿಳಿಸಿದ್ದಾರೆ.

“ನಾವು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವೀಕರಿಸಿದ ತಕ್ಷಣ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯನ್ನು ನಿಲ್ಲಿಸಲಾಗುವುದು” ಎಂದು ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (ಎನ್‌ಡಿಎಂಸಿ) ಮೇಯರ್ ರಾಜಾ ಇಕ್ಬಾಲ್ ಸಿಂಗ್ ಅವರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೆಲವು ನಿಮಿಷಗಳ ಹಿಂದೆ, “ನಾವು ನಮ್ಮ ಕೆಲಸವನ್ನು (ಜಹಾಂಗೀರ್‌ಪುರಿಯಲ್ಲಿ ಅತಿಕ್ರಮಣ ವಿರೋಧಿ ಕಾರ್ಯಾಚರಣೆ) ನಿಲ್ಲಿಸಿದ್ದೇವೆ” ಎಂದು ಸಿಂಗ್ ಹೇಳಿದ್ದಾರೆ. ನ್ಯಾಯಾಲಯದ ಆದೇಶದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಜಹಾಂಗೀರ್‌ಪುರಿಯಲ್ಲಿರುವ ವಿಶೇಷ ಪೊಲೀಸ್ ಕಮಿಷನರ್ ದೇಪೇಂದ್ರ ಪಾಠಕ್, “ನಾಗರಿಕ ಸಂಸ್ಥೆ (ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್) ನಿರ್ಧಾರ ತೆಗೆದುಕೊಳ್ಳಲಿ. ನಾವು ನಾಗರಿಕ ಸಂಸ್ಥೆಗೆ ಬೆಂಬಲ ಮತ್ತು ರಕ್ಷಣೆ ನೀಡಲು ಇಲ್ಲಿದ್ದೇವೆ” ಎಂದು ಹೇಳಿದ್ದರು.

ಬುಧವಾರ ನಡೆದ ಅತಿಕ್ರಮಣ ವಿರೋಧಿ ಕಾರ್ಯಾಚರಣೆಯಲ್ಲಿ ಕೆಲವು ಬುಲ್ಡೋಜರ್‌ಗಳನ್ನು ಬಳಸಲಾಯಿತು. ಕೆಲವು ಮಾರಾಟದ ಬಂಡಿಗಳು, ಅಂಗಡಿಗಳು ಮತ್ತು ಇತರ ಕಟ್ಟಗಳನ್ನು ನಾಶಪಡಿಸಲಾಯಿತು.

ಹನುಮ ಜಯಂತಿ ಮೆರವಣಿಗೆಯ ಸಂದರ್ಭದಲ್ಲಿ ವಾಯುವ್ಯ ದೆಹಲಿಯಲ್ಲಿ ಘರ್ಷಣೆ ಸಂಭವಿಸಿದ ನಂತರ ಅತಿಕ್ರಮಣ ವಿರೋಧಿ ಅಭಿಯಾನದ ಹೆಸರಲ್ಲಿ ಮುಸ್ಲಿಂ ಸಮುದಾಯವನ್ನು ಇಕ್ಕಟ್ಟಿಗೆ ಸಿಲುಕಿಸಲು ಯತ್ನಿಸಲಾಗುತ್ತಿದೆ.

ಕಳೆದ ವಾರದ ಕೋಮು ಘರ್ಷಣೆಯ ನಂತರ ಉದ್ವಿಗ್ನಗೊಂಡ ದೆಹಲಿಯ ಜಹಾಂಗೀರಪುರಿಯಲ್ಲಿ ಅತಿಕ್ರಮಣ ವಿರೋಧಿ ಅಭಿಯಾನವನ್ನು ಆರಂಭಿಸಲಾಗಿದ್ದು ಇಂದು ಸುಪ್ರೀಂ ಕೋರ್ಟ್ ಆದೇಶದ ನಂತರ ನಿಲ್ಲಿಸಲಾಗಿದೆ. ಆದರೆ ಮಸೀದಿಯ ಬಳಿ ಇರುವ ಕಟ್ಟಡಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ ನ್ಯಾಯಾಲಯದ ಆದೇಶದ ನಂತರವೂ ಕೆಡವುವ ಕಾರ್ಯ ಮುಂದುವರಿದಿತ್ತು. ಉತ್ತರ ದೆಹಲಿ ಮುನ್ಸಿಪಲ್ ಕಾರ್ಪೊರೇಶನ್‌ನ ಮೇಯರ್ ರಾಜಾ ಇಕ್ಬಾಲ್ ಸಿಂಗ್, ಕೋರ್ಟ್ ‌ಆದೇಶ ಇನ್ನೂ ಸ್ವೀಕರಿಸಲಾಗಿಲ್ಲ. ಹೀಗಾಗಿ ಅಕ್ರಮ ಕಟ್ಟಡಗಳನ್ನು ತೆಗೆದುಹಾಕುವ ಕೆಲಸವನ್ನು ಮುಂದುವರಿಸಲಾಗುವುದು” ಎಂದಿದ್ದರು.

ಇದನ್ನೂ ಓದಿರಿ: ಲವ್‌ ಜಿಹಾದ್ ಆರೋಪಕ್ಕೆ ಟ್ವಿಸ್ಟ್‌: ಒಪ್ಪಿತ ಮದುವೆಯಲ್ಲಿ ಮಧ್ಯಪ್ರವೇಶ ಅಸಾಧ್ಯ ಎಂದ ಕೇರಳ ಹೈಕೋರ್ಟ್

ತೆರವು ಕಾರ್ಯಾಚರಣೆ ಚಾಲನೆಗೆ ಮುನ್ನ ಯಾವುದೇ ಸೂಚನೆ ನೀಡಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ. ಎರಡು ದಿನಗಳ ಅತಿಕ್ರಮಣ ವಿರೋಧಿ ಅಭಿಯಾನಕ್ಕೆ ಕನಿಷ್ಠ 400 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವಂತೆ ಮುನ್ಸಿಪಲ್ ಕೇಳಿಕೊಂಡಿತ್ತು.

ಅನುಮತಿ ಪಡೆಯದೆ ಹನುಮ ಜಯಂತಿ ಮೆರವಣಿಗೆಯನ್ನು ಮಸೀದಿಯೊಂದರ ಪಕ್ಕದಲ್ಲಿ ನಡೆಸಿದಾಗ ಶನಿವಾರ ಗಲಭೆ ನಡೆಯಿತು. ಕೋಮು ಘರ್ಷಣೆಯಿಂದ ಜಹಾಂಗೀರ್ಪುರಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿದವು. ಗುಂಡು ಹಾರಿಸಲಾಯಿತು. ಎಂಟು ಪೊಲೀಸರು ಸೇರಿದಂತೆ ಒಂಬತ್ತು ಜನರು ಗಾಯಗೊಂಡಿದ್ದಾರೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ 25 ಜನರನ್ನು ಬಂಧಿಸಲಾಗಿದೆ. ಅವರಲ್ಲಿ ಐವರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯಿದೆಯಡಿ ಆರೋಪ ಹೊರಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...