Homeಮುಖಪುಟದೆಹಲಿ: ಲಸಿಕಾ ಕೇಂದ್ರಗಳಾಗಲಿರುವ ಮತದಾನ ಕೇಂದ್ರಗಳು- ಹೊಸ ಯೋಜನೆ ಘೋಷಣೆ

ದೆಹಲಿ: ಲಸಿಕಾ ಕೇಂದ್ರಗಳಾಗಲಿರುವ ಮತದಾನ ಕೇಂದ್ರಗಳು- ಹೊಸ ಯೋಜನೆ ಘೋಷಣೆ

- Advertisement -
- Advertisement -

ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಪಡೆಯುವವರ ಸಂಖ್ಯೆ ಕುಸಿತವಾಗಿರುವ ಹಿನ್ನೆಲೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ತಮ್ಮ ಮತದಾನ ಕೇಂದ್ರಗಳಲ್ಲಿಯೇ ಲಸಿಕೆ ಹಾಕಲು ಮನೆ-ಮನೆಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.”

’ಜಹಾ ವೋಟ್, ವಹಾ ವ್ಯಾಕ್ಸಿನೇಷನ್’ ಎಂಬ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಕಟಿಸಿದ ಕೇಜ್ರಿವಾಲ್, ’ಲಸಿಕೆಗಳ ಕೊರತೆಯಿಲ್ಲದಿದ್ದರೆ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ನಾಲ್ಕು ವಾರಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ. ದೆಹಲಿಯಲ್ಲಿ 45 ವರ್ಷಕ್ಕಿಂತ ಮೇಲ್ಪಟ್ಟ 57 ಲಕ್ಷ ಜನರಿದ್ದು, 27 ಲಕ್ಷ ಜನರು ತಮ್ಮ ಮೊದಲ ಲಸಿಕೆ ಪಡೆದಿದ್ದಾರೆ.

’ಬೂತ್ ಮಟ್ಟದ ಅಧಿಕಾರಿಗಳು ತಮ್ಮ ವಾರ್ಡ್‌ಗಳಲ್ಲಿ ಪ್ರತಿ ಮನೆಗೆ ಹೋಗಿ ಸಮೀಕ್ಷೆ ನಡೆಸಿ, 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ತೆಗೆದುಕೊಳ್ಳಲು ದಿನಾಂಕ ಮತ್ತು ಸಮಯ ನೀಡಲಿದೆ. ದೆಹಲಿಯಲ್ಲಿ ಸುಮಾರು 280 ವಾರ್ಡ್‌ಗಳಿವೆ. ಪ್ರತಿ ವಾರ 70 ವಾರ್ಡ್‌ಗಳಲ್ಲಿ ವ್ಯಾಕ್ಸಿನೇಷನ್ ನಡೆಯಲಿದೆ. 70 ವಾರ್ಡ್‌ಗಳಲ್ಲಿ ಮಂಗಳವಾರದಿಂದ ಈ ಯೋಜನೆ ಜಾರಿಗೆ ಬರಲಿದೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಪಿಜ್ಜಾ, ಬರ್ಗರ್‌, ಸ್ಮಾರ್ಟ್‌ಫೋನ್‌ ಮನೆ ಬಾಗಿಲಿಗೆ ಬರುವುದಾದರೇ, ಪಡಿತರವೇಕೆ ಬೇಡ? ಕೇಂದ್ರಕ್ಕೆ ಕೇಜ್ರಿವಾಲ್ ಪ್ರಶ್ನೆ

“45 ವರ್ಷ ಮೇಲ್ಪಟ್ಟ ವಯಸ್ಸಿನವರು ಲಸಿಕೆ ಕೇಂದ್ರಗಳಲ್ಲಿ ಕೆಲವೇ ಜನರು ಹಾಜರಾಗುತ್ತಿದ್ದಾರೆ. ಆದ್ದರಿಂದ ಕೇಂದ್ರಗಳಲ್ಲಿ ಜನರಿಗಾಗಿ ಕಾಯುವ ಬದಲು ನಾವೇ ಅಲ್ಲಿಗೆ ಹೋಗಲು ನಿರ್ಧರಿಸಿದ್ದೇವೆ. ಮತದಾನ ಕೇಂದ್ರಗಳು ಎಲ್ಲಿವೆ ಎಂಬುದು ಎಲ್ಲರಿಗೂ ತಿಳಿದಿದೆ. ತಮ್ಮ ಮನೆಗಳಿಂದ ಹತ್ತಿರದಲ್ಲೇ ಇರುವುದರಿಂದ ಜನರು ಸುಲಭವಾಗಿ ಲಸಿಕೆ ಪಡೆಯಬಹುದು. ಜನರನ್ನು ತಮ್ಮ ಮನೆಗಳಿಂದ ಮತದಾನ ಕೇಂದ್ರಕ್ಕೆ ಕರೆದೊಯ್ಯಲು ಇ-ರಿಕ್ಷಾಗಳನ್ನು ಸಹ ಒದಗಿಸಲಾಗುವುದು” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಯಾರಾದರೂ ಲಸಿಕೆ ತೆಗೆದುಕೊಳ್ಳಲು ನಿರಾಕರಿಸಿದರೆ, ಬೂತ್ ಮಟ್ಟದ ಅಧಿಕಾರಿಗಳು ಮತ್ತು ನಾಗರಿಕ ಸ್ವಯಂಸೇವಕರು ಲಸಿಕೆ ತೆಗೆದುಕೊಳ್ಳಲು ಮನವೊಲಿಸಲು ಪ್ರಯತ್ನಿಸುತ್ತಾರೆ. ಈ ಬಗ್ಗೆ ಅಧಿಕಾರಿಗಳಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅಗತ್ಯ ಪ್ರಮಾಣದಲ್ಲಿ ಲಸಿಕೆಗಳು ಲಭ್ಯವಾದಾಗ 18 ರಿಂದ 44 ವರ್ಷ ವಯೋಮಾನದವರಿಗೂ ಕೂಡ ಲಸಿಕೆ ನೀಡಲು ಇದೇ ಯೋಜನೆಯನ್ನು ಅನುಸರಿಸಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಗಟ್ಟಿ ಮನುಷ್ಯ, ಸಿಎಂ ಹೇಳಿಕೆಯನ್ನು 2-3 ರೀತಿಯಲ್ಲಿ ವಿಶ್ಲೇಷಿಸಬಹುದು- ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...