ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓಮಿಕ್ರಾನ್ ರೂಪಾಂತರಿಯ ಆತಂಕ ಮತ್ತು ಹೆಚ್ಚುತ್ತಿರುವ ಕೊರೊನಾ ವೈರಸ್ ಪ್ರಕರಣಗಳ ಮಧ್ಯೆ, ಸೋಂಕಿಗೆ ಒಳಗಾಗುವ ಎಲ್ಲಾ ಜನರ ಮಾದರಿಗಳನ್ನು ಈಗ ಜಿನೋಮ್ ಸಿಕ್ವೆನ್ಸಿಂಗ್ಗೆ ಕಳುಹಿಸಲಾಗುವುದು ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಹೇಳಿದ್ದಾರೆ.
ಇದರ ಜೊತೆಗೆ ಸಂಪೂರ್ಣ ಲಸಿಕೆ ಪಡೆದಿರುವ ದೆಹಲಿ ನಗರ ನಿವಾಸಿಗಳಿಗೆ ಬೂಸ್ಟರ್ ಶಾಟ್ಗಳನ್ನು ನೀಡಲು ಆಡಳಿತಕ್ಕೆ ಅವಕಾಶ ನೀಡಬೇಕು ಎಂದು ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ.
“ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಇವು ಯಾವ ರೀತಿಯ ಕೋವಿಡ್ ಪ್ರಕರಣಗಳು, ಸಾಮಾನ್ಯವೇ ಅಥವಾ ಓಮಿಕ್ರಾನ್ ರೂಪಾಂತರವೇ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ, ಇದನ್ನು ಖಚಿತಪಡಿಸಿಕೊಳ್ಳಲು ನಾವು ಈಗ ಎಲ್ಲಾ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಜೀನೋಮ್ ಸಿಕ್ವೆನ್ಸಿಂಗ್ಗೆ ಕಳುಹಿಸಲು ನಿರ್ಧರಿಸಿದ್ದೇವೆ” ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ಚರ್ಚೆ: ಅಧಿಕಾರ ಶಾಶ್ವತವಲ್ಲ ಎಂದ ಬಸವರಾಜ ಬೊಮ್ಮಾಯಿ
ಈಗಾಗಲೇ ಎರಡೂ ಡೋಸ್ ಕೋವಿಡ್ ಲಸಿಕೆ ಪಡೆದಿರುವ ದೆಹಲಿ ನಿವಾಸಿಗಳಿಗೆ ಬೂಸ್ಟರ್ ಶಾಟ್ಗಳನ್ನು ನೀಡಲು ಆಡಳಿತಕ್ಕೆ ಅವಕಾಶ ನೀಡುವಂತೆ ಕೇಜ್ರಿವಾಲ್ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.
“ದೆಹಲಿ ಜನಸಂಖ್ಯೆಯ ಸುಮಾರು 99 ಪ್ರತಿಶತದಷ್ಟು ಜನರು ಮೊದಲ ಡೋಸ್ ತೆಗೆದುಕೊಂಡಿದ್ದಾರೆ, ಸುಮಾರು 70 ಪ್ರತಿಶತದಷ್ಟು ಜನರು ಎರಡೂ ಡೋಸ್ಗಳೊಂದಿಗೆ ಸಂಪೂರ್ಣ ಲಸಿಕೆ ಪಡೆದಿದ್ದಾರೆ. ಹೀಗಾಗಿ ಎರಡೂ ಡೋಸ್ ಲಸಿಕೆ ಪಡೆದಿರುವ ಎಲ್ಲರಿಗೂ ಬೂಸ್ಟರ್ ಡೋಸ್ಗಳನ್ನು ನೀಡಲು ಅನುಮತಿ ನೀಡುವಂತೆ ನಾನು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ” ಎಂದಿದ್ದಾರೆ.
“ಬೂಸ್ಟರ್ ಡೋಸ್ಗಳನ್ನು ನೀಡಲು ನಾವು ಮೂಲಸೌಕರ್ಯಗಳನ್ನು ಹೊಂದಿದ್ದೇವೆ. ನಾವು ನಮ್ಮ ಆರೋಗ್ಯ ಕಾರ್ಯಕರ್ತರಿಗೆ ಮೊದಲು ಬೂಸ್ಟರ್ ಡೋಸ್ ನೀಡುವ ಮೂಲಕ ಪ್ರಾರಂಭಿಸಿ, ನಂತರ ಉಳಿದ ಜನರಿಗು ಲಸಿಕೆ ಹಾಕಬಹುದು” ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ ದೆಹಲಿಯಲ್ಲಿ ಇದುವರೆಗೆ 24 ಓಮಿಕ್ರಾನ್ ರೂಪಾಂತರದ ಪ್ರಕರಣಗಳು ವರದಿಯಾಗಿವೆ. ಆಸ್ಪತ್ರೆಯ ಹಾಸಿಗೆಗಳು, ಆಮ್ಲಜನಕ, ಔಷಧಿಗಳು ಮತ್ತು ವೈರಸ್ ಅನ್ನು ಎದುರಿಸಲು ಅಗತ್ಯವಿರುವ ಎಲ್ಲದಕ್ಕೂ ಸರ್ಕಾರ ಸಾಕಷ್ಟು ವ್ಯವಸ್ಥೆಯನ್ನು ಮಾಡಿದೆ ಎಂದು ತಿಳಿಸಿದ್ದಾರೆ.
Why these fully vaccinated need booster dose Kejrivalji. Continue your good works, but stop promoting and in way forcing people to take this death jab!!! Do some homework on the so called pandemic. It’s Plandemic.