Homeಮುಖಪುಟದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

ದೆಹಲಿ ಹೀನಾಯ ಸೋಲು | ಪಂಜಾಬ್‌ ಮೂಲಕ ರಾಜ್ಯಸಭೆಗೆ ಪ್ರವೇಶಿಸಲಿರುವ ಕೇಜ್ರಿವಾಲ್?

- Advertisement -
- Advertisement -

ರಾಷ್ಟ್ರ ರಾಜಧಾನಿಯ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಂಜಾಬ್ ಎಎಪಿ ಘಟಕವು ವಿಭಜನೆಯಾಗಲಿದೆ ಎಂಬ ತೀವ್ರ ಊಹಾಪೋಹಗಳ ನಡುವೆ, ಪಕ್ಷ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮಂಗಳವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಸಂಪುಟದ ಸಚಿವರು ಮತ್ತು ಶಾಸಕರೊಂದಿಗೆ ಸಭೆ ಕರೆದಿದ್ದಾರೆ. ದೆಹಲಿ ಹಿನಾಯ ಸೋಲು

ಈ ನಡುವೆ, ಕನಿಷ್ಠ 30 ಎಎಪಿ ಸದಸ್ಯರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ಪಂಜಾಬ್ ಕಾಂಗ್ರೆಸ್ ಹೇಳಿಕೊಂಡಿದೆ. ಜೊತೆಗೆ ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಲಿಸಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ ಮತ್ತು ಪಂಜಾಬ್‌ನಿಂದ ರಾಜ್ಯಸಭೆಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ, ಪಕ್ಷದ ಕಾರ್ಯತಂತ್ರವನ್ನು ಚರ್ಚಿಸಲು ಈ ಸಭೆಯನ್ನು ಕರೆಯಲಾಗಿದೆ ಎಎಪಿ ಸ್ಪಷ್ಟಪಡಿಸಿದೆ.

ಈ ಎಲ್ಲಾ ಊಹಾಪೋಹಗಳ ನಡುವೆ, ಪಂಜಾಬ್‌ನ ಏಳು ಸಂಸದರಲ್ಲಿ ಒಬ್ಬರು ರಾಜೀನಾಮೆ ನೀಡಿ ಕೇಜ್ರಿವಾಲ್ ರಾಜ್ಯಸಭೆ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಹರಡಿವೆ. ದೆಹಲಿ ಹಿನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮಂಗಳವಾರ ತಮ್ಮ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಪಂಜಾಬ್ ಮುಖ್ಯಮಂತ್ರಿಯ ಅಧಿಕೃತ ನಿವಾಸವಾದ ಕಪುರ್ತಲಾ ಹೌಸ್‌ನಲ್ಲಿ ನಡೆಯುವ ಸಭೆಯಲ್ಲಿ ಭಾಗವಹಿಸುವಂತೆ ಪಂಜಾಬ್ ಶಾಸಕರಿಗೆ ಸೂಚಿಸಲಾಗಿದೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಮಾನ್ ಭಾನುವಾರ ಮಧ್ಯಾಹ್ನ ಚಂಡೀಗಢಕ್ಕೆ ಬಂದಿದ್ದಾರೆ. ಸೋಮವಾರ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಫೆಬ್ರವರಿ 13 ಕ್ಕೆ ಮುಂದೂಡಲಾಗಿದೆ.

ಈ ಸಭೆಯ ಕಾರ್ಯಸೂಚಿ ತಿಳಿದಿಲ್ಲ, ಆದರೆ ಕೇಜ್ರಿವಾಲ್ ಶಾಸಕರಿಗೆ “ಆಮ್ ಆದ್ಮಿ” ಜೊತೆ ಮತ್ತೆ ಸಂಪರ್ಕ ಸಾಧಿಸಲು “ಆತ್ಮ ಸಮಾಲೋಚನಾ ಸಭೆ” ಮಾಡುವ ಸಾಧ್ಯತೆ ಇದೆ. ಪಂಜಾಬ್‌ನ ಕೆಲವು ಶಾಸಕರು ನಾಯಕತ್ವದ ಬಗ್ಗೆ ಅತೃಪ್ತರಾಗಿದ್ದು, ಪಕ್ಷ ಬದಲಾಯಿಸುವುದನ್ನು ಪರಿಗಣಿಸಲಿದ್ದಾರೆ ಎಂಬ ವರದಿಗಳ ನಡುವೆ ದೆಹಲಿಯಲ್ಲಿ ನಡೆಯಲಿರುವ ಸಭೆಯೂ ಮಹತ್ವ ಬಂದಿದೆ.

ಈ ನಡುವೆ, ಪಂಜಾಬ್‌ ರಾಜಕೀಯದಲ್ಲಿ ಕೇಜ್ರಿವಾಲ್ ನೇರವಾಗಿ ಪಾತ್ರ ವಹಿಸಲಿದ್ದಾರೆ ಎಂಬ ಊಹಾಪೋಹಗಳು ಹರಡಿವೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಸ್ಥಾನ ಖಾಲಿಯಾಗಿರುವುದರಿಂದ, ಕೇಜ್ರಿವಾಲ್ ಅಲ್ಲಿಂದ ಸ್ಪರ್ಧಿಸಿ ಪಂಜಾಬ್ ಸರ್ಕಾರದ ಭಾಗವಾಗುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ, ಪಂಜಾಬ್‌ನಲ್ಲಿ ಎಎಪಿ ಮೇಲೆ ಬಿಜೆಪಿ ತನ್ನ ದಾಳಿಯನ್ನು ತೀವ್ರಗೊಳಿಸಿದ್ದು, “ಮಾನ್ ಅವರ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ” ಎಂದು ಪಕ್ಷದ ನಾಯಕರೊಬ್ಬರು ಹೇಳಿಕೊಂಡಿದ್ದಾರೆ. ರಾಜೌರಿ ಗಾರ್ಡನ್‌ನ ಬಿಜೆಪಿ ಶಾಸಕ ಮಂಜಿಂದರ್ ಸಿಂಗ್ ಸಿರ್ಸಾ ಇದೇ ರೀತಿಯ ಹೇಳಿಕೆ ನಿಡಿದ್ದು, ಕೇಜ್ರಿವಾಲ್ ಅವರು ಪಂಜಾಬ್ ಸಿಎಂ ಮಾನ್ ಅವರನ್ನು ಬದಿಗಿಡಲಿದ್ದಾರೆ ಎಂದು ಸೂಚಿಸಿದರು.

“ಚುನಾವಣೆಯಲ್ಲಿ ಸೋತ ನಂತರ, ಕೇಜ್ರಿವಾಲ್  ಅವರು ದೆಹಲಿಯಲ್ಲಿ ಪಂಜಾಬ್ ಶಾಸಕರ ಸಭೆಯನ್ನು ಕರೆದಿದ್ದಾರೆ. ಸಿಎಂ ಮಾನ್ ಅವರನ್ನು ಅಸಮರ್ಥ ಎಂದು ಹಣೆಪಟ್ಟಿ ಕಟ್ಟುವ ಮೂಲಕ ಅವರು ಮಾನ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ತೆಗೆದುಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಗಳು ಸೂಚಿಸುತ್ತವೆ” ಎಂದು ಅವರು ಹೇಳಿದ್ದಾರೆ.

ಇದನ್ನೂಓದಿ:  ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ಸ್ಲಂ ಜನರಿಗೆ ಶುದ್ಧ ನೀರಿನ ಕೊರತೆ ಇದೆ, ನೀವು ಸೈಕಲ್ ಟ್ರ್ಯಾಕ್‌ಗಳ ಬಗ್ಗೆ ಹಗಲುಗನಸು ಕಾಣುತ್ತಿದ್ದೀರಿ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...