Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...