Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...