Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...