Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...