Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...