Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...