Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

- Advertisement -
- Advertisement -

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ.

ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಪ್ರಕಟಿಸುತ್ತವೆ.

ಮತದಾನೋತ್ತರ ಸಮೀಕ್ಷೆಗಳು ಅಂದಾಜಿಸಿದಂತೆ ಫಲಿತಾಂಶ ಬರಲಿದೆ ಎನ್ನಲು ಸಾಧ್ಯವಿಲ್ಲ. ಅಂತಿಮ ಫಲಿತಾಂಶ ಎಲ್ಲಾ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಬಹುದು.

2020ರ ದೆಹಲಿ ವಿಧಾನಸಭೆಯ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ಫಲಿತಾಂಶ ಪ್ರಕಟಗೊಂಡಾಗ ವಿಫಲವಾಗಿತ್ತು. 2024ರ ಲೋಕಸಭಾ ಚುನಾವಣೆ ಮತ್ತು ಹರಿಯಾಣದ ವಿಧಾನಸಭಾ ಚುನಾವಣೆಗಳಲ್ಲಿಯೂ ಮತದಾನೋತ್ತರ ಸಮೀಕ್ಷೆಗಳು ತಪ್ಪಾಗಿವೆ.

ಬುಧವಾರ ಪ್ರಕಟಗೊಂಡ ಮತದಾನೋತ್ತರ ಸಮೀಕ್ಷೆಗಳು ದೂರದರ್ಶನ ಚಾನೆಲ್‌ಗಳಿಗೆ ಸಂಬಂಧಿಸಿಲ್ಲ. ಆಕ್ಸಿಸ್ ಮೈ ಇಂಡಿಯಾ ಮತ್ತು ಟುಡೇಸ್ ಚಾಣಕ್ಯದಂತಹ ಪ್ರಮುಖ ಸಮೀಕ್ಷಾ ಸಂಸ್ಥೆಗಳು ಗುರುವಾರ ತಮ್ಮ ಸಮೀಕ್ಷಾ ವರದಿ ಬಿಡುಗಡೆ ಮಾಡುವುದಾಗಿ ತಿಳಿಸಿವೆ.

ಬುಧವಾರ, ಮ್ಯಾಟ್ರಿಝ್ ಮತ್ತು ಡಿ ವಿ ರಿಸರ್ಚ್ ಪ್ರಕಟಿಸಿದ ಎರಡು ಮತದಾನೋತ್ತರ ಸಮೀಕ್ಷೆ ವರದಿಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತು ಎಎಪಿ ನಡುವೆ ಹತ್ತಿರದ ಸ್ಪರ್ಧೆ ಏರ್ಪಡಲಿದೆ ಎಂದಿವೆ. ಮ್ಯಾಟ್ರಿಝ್ ಬಿಜೆಪಿ +35-40 ಸ್ಥಾನಗಳು, ಎಎಪಿ 32-37 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಭವಿಷ್ಯ ನುಡಿದಿದೆ. ಡಿ ವಿ ರಿಸರ್ಚ್ ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ 36-44 ಸ್ಥಾನಗಳು ಮತ್ತು ಎಎಪಿಗೆ 26-34 ಸ್ಥಾನಗಳು ಸಿಗಲಿವೆ ಎಂದು ಹೇಳಿವೆ.

ಆರು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿ ಗೆಲುವಿನ ಮುನ್ಸೂಚನೆ ನೀಡಿವೆ. ಅದರಲ್ಲಿ ಕೆಲವರ ಭರ್ಜರಿ ಗೆಲುವು ಕೂಡ ಸೇರಿದೆ. ಚಾಣಕ್ಯ ಸ್ಟ್ರಾಟಜೀಸ್ ಪ್ರಕಾರ ಬಿಜೆಪಿ ಮತ್ತು ಅದರ ಮಿತ್ರ ಪಕ್ಷಗಳು 39-44 ಸ್ಥಾನಗಳನ್ನು, ಎಎಪಿ 25-28 ಮತ್ತು ಕಾಂಗ್ರೆಸ್ 2-3 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಪಿ ಮಾರ್ಕ್ ಬಿಜೆಪಿಗೆ 39-44 ಸ್ಥಾನ, ಎಎಪಿಗೆ 21-31 ಸ್ಥಾನ ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ.

ಪೀಪಲ್ಸ್ ಪಲ್ಸ್ ಪ್ರಕಾರ ಬಿಜೆಪಿ +51 ರಿಂದ 60 ಸ್ಥಾನಗಳು, ಎಎಪಿ 10-19 ಸ್ಥಾನಗಳು ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು. ಪೀಪಲ್ಸ್ ಇನ್ಸೈಟ್ ಪ್ರಕಾರ ಬಿಜೆಪಿ+40-44 ಸ್ಥಾನ, ಎಎಪಿ 25-28 ಸ್ಥಾನ ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಬಹುದು ಎಂದು ಅಂದಾಜಿಸಿದೆ. ಪೋಲ್ ಡೈರಿ ಪ್ರಕಾರ ಬಿಜೆಪಿ +42-50 ಸ್ಥಾನ, ಎಎಪಿ 18-25 ಸ್ಥಾನ ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಜೆವಿಸಿ ಮತದಾನೋತ್ತರ ಸಮೀಕ್ಷೆಯ ಪ್ರಕಾರ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು 39-45 ಸ್ಥಾನಗಳನ್ನು, ಎಎಪಿ 22-31 ಸ್ಥಾನಗಳನ್ನು ಮತ್ತು ಕಾಂಗ್ರೆಸ್ 0-2 ಸ್ಥಾನಗಳನ್ನು ಪಡೆಯಲಿವೆ.

ಆದಾಗ್ಯೂ, ಇತರ ಮೂರು ಸಂಸ್ಥೆಗಳು ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿವೆ. ಮೈಂಡ್ ಬ್ರಿಂಕ್ ಮೀಡಿಯಾ ಎಎಪಿ 44-49, ಬಿಜೆಪಿ 21-25 ಮತ್ತು ಕಾಂಗ್ರೆಸ್ 0-1 ಸ್ಥಾನಗಳನ್ನು ಪಡೆಯಲಿದೆ ಎಂದು ಹೇಳಿದೆ. ವೀ ಪ್ರೆಸೈಡ್ ಎಎಪಿಗೆ 46-52, ಬಿಜೆಪಿಗೆ 18-23 ಮತ್ತು ಕಾಂಗ್ರೆಸ್‌ಗೆ 0-1 ಸ್ಥಾನಗಳನ್ನು ನೀಡಿದೆ. ಕೆಕೆ ಸರ್ವೇಸ್ ಅಂಡ್ ಸ್ಟ್ರಾಟರ್ಜೀಸ್ ಎಎಪಿಯ ಸಂಭಾವ್ಯ ಸ್ಥಾನಗಳ ಸಂಖ್ಯೆ 44 ಮತ್ತು ಬಿಜೆಪಿಯದ್ದು 26 ಎಂದು ಅಂದಾಜಿಸಿದೆ.

ಬಿಜೆಪಿ ಮತದಾನೋತ್ತರ ಸಮೀಕ್ಷಾ ವರದಿಗಳನ್ನು ಸ್ವಾಗತಿಸಿದರೆ, ಎಎಪಿ ಅವುಗಳನ್ನು ತಿರಸ್ಕರಿಸಿದೆ. “2013, 2015 ಮತ್ತು 2020ರ ಮತದಾನೋತ್ತರ ಸಮೀಕ್ಷೆಗಳು ಎಎಪಿಗೆ ಸೋಲು ಎಂದಿತ್ತು. ಆದರೂ, ಎಎಪಿ ಬೃಹತ್ ಜನಾದೇಶದೊಂದಿಗೆ ಅಧಿಕಾರಕ್ಕೆ ಬಂದಿದೆ. ಈ ಬಾರಿಯೂ ಅದು ಭಿನ್ನವಾಗಿರುವುದಿಲ್ಲ” ಎಂದು ಎಎಪಿ ಮುಖ್ಯ ವಕ್ತಾರೆ ಪ್ರಿಯಾಂಕಾ ಕಕ್ಕರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಮತದಾನೋತ್ತರ ಸಮೀಕ್ಷೆಗಳು ತೋರಿಸುತ್ತಿರುವ ಫಲಿತಾಂಶಗಳನ್ನು ನಾವು ಸ್ವಾಗತಿಸುತ್ತೇವೆ. ಆದರೆ, ಫೆಬ್ರವರಿ 8 ರಂದು ನಮ್ಮ ಗೆಲುವು ಇಂದು ಸಮೀಕ್ಷೆಗಳು ತೋರಿಸಿದ್ದಕ್ಕಿಂತ ಹೆಚ್ಚು ಅದ್ಭುತವಾಗಿರುತ್ತದೆ” ಎಂದು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಪ್ರತಿಯೊಂದು ಸಂಸ್ಥೆಯಲ್ಲಿಯೂ ದಲಿತರು-ದುರ್ಬಲ ವರ್ಗದ ನಾಯಕತ್ವ ನೋಡಲು ಬಯಸುತ್ತೇನೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...