Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ

- Advertisement -
- Advertisement -

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಇಂದು (ಫೆ.5) ಮತದಾನ ನಡೆಯುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯನ್ನು ಯಾರು ಮುನ್ನಡೆಸುತ್ತಾರೆ ಎಂಬುವುದನ್ನು ಈ ಚುನಾವಣೆ ನಿರ್ಧರಿಸಲಿದೆ. ಒಂದೇ ಹಂತದಲ್ಲಿ ನಡೆಯುವ ಚುನಾವಣೆಗೆ 13,033 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಒಟ್ಟು 1.5 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸುವ ಅರ್ಹತೆ ಹೊಂದಿದ್ದು, 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳಲ್ಲಿ 603 ಪುರುಷರು, 95 ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿ ಇದ್ದಾರೆ.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯೇ ಪ್ರಾಬಲ್ಯ ಹೊಂದಿತ್ತು. ಚುನಾವಣಾ ಪೂರ್ವದ ನಿರೀಕ್ಷೆಯಂತೆ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಸಂಪೂರ್ಣ ನೆಲ ಕಚ್ಚಿತ್ತು, ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿತ್ತು.

2015ರ ಚುನಾವಣೆಯಲ್ಲಿ ಎಎಪಿ ಶೇಖಡ 54.6ರಷ್ಟು ಮತಗಳನ್ನು ಪಡೆದು ದಾಖಲೆಯ 67 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. 2020ರ ಚುನಾವಣೆಯಲ್ಲಿ ಎಎಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಕ್ರಮವಾಗಿ ಶೇಖಡ 53.6 ಮತ್ತು 62ಕ್ಕೆ ಅಲ್ಪ ಕುಸಿತ ಕಂಡಿತ್ತು. ಬಿಜೆಪಿ ಉಳಿದ ಎಂಟು ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತೆ ತನ್ನ ಖಾತೆ ತೆರೆಯಲು ವಿಫಲವಾಗಿತ್ತು.

ಆದರೆ, ಈ ಬಾರಿ ಸಂಪೂರ್ಣ ಚಿತ್ರಣ ಬದಲಾಗಿದೆ. ಎಎಪಿಯ ಪ್ರಾಬಲ್ಯ ಕಳೆಗುಂದಿದಂತೆ ಕಾಣುತ್ತಿದೆ. ಬಿಜೆಪಿ ಮತ್ತೆ ಪುಟಿದೆದ್ದಿದೆ. ಕಾಂಗ್ರೆಸ್ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಹಾಗಾಗಿ, ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂರೂ ಪಕ್ಷಗಳು ಆರೋಪ-ಪ್ರತ್ಯಾರೋಪ, ದೂರು-ಪ್ರತಿದೂರು, ನೂರಾರು ಭರವಸೆಗಳೊಂದಿಗೆ ಮತದಾರರ ಮನವೊಲಿಸಲು ಶತ ಪ್ರಯತ್ನ ಮಾಡಿವೆ. ಅಂತಿಮವಾಗಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

ಕೆಲವೊಂದು ಕ್ಷೇತ್ರಗಳಲ್ಲಿ ಘಟಾನುಘಟಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ನವ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇವರ ವಿರುದ್ದ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸಿದ್ದಾರೆ. ಈ ಇಬ್ಬರೂ ಮಾಜಿ ಸಂಸದರು. ವಿಶೇಷವಾಗಿ ಸಂದೀಪ್ ದೀಕ್ಷಿತ್ ಅವರು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ದೀಕ್ಷಿತ್ ಅವರ ಮಗನೂ ಹೌದು.

ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿಯ ಹಾಲಿ ಸಿಎಂ ಅತಿಶಿ ಮರ್ಲೇನಾ ಎಎಪಿಯಿಂದ ಮತ್ತೆ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿ ಮಾಜಿ ಸಂಸದ, ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಅಲ್ಕಾ ಲಂಬಾ ಸ್ಪರ್ಧೆ ಮಾಡಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಈ ಬಾರಿ ಪತ್ಪರ್‌ಗಂಜ್‌ ಬದಲಾಗಿ ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್‌ನ ಫರ್ಹಾದ್ ಸೂರಿ ಕಣಕ್ಕಿಳಿದಿದ್ದಾರೆ.

ಬಲ್ಲಿಮಾರನ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಹಾರೂನ್ ಯೂಸುಫ್ ಮತ್ತು ಹಾಲಿ ಎಎಪಿ ಸಚಿವ ಇಮ್ರಾನ್ ಹುಸೇನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಗ್ರೇಟರ್ ಕೈಲಾಶ್, ಮಾಳವೀಯ ನಗರ, ಗಾಂಧಿ ನಗರ, ಮಂಗೋಲ್‌ಪುರಿ, ಪತ್ಪರ್‌ಗಂಜ್ ಮತ್ತು ಮಾಟಿಯಾ ಮಹಲ್ ಈ ಬಾರಿಯ ಚುನಾವಣೆಯಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಧಾನಸಭಾ ಕ್ಷೇತ್ರಗಳಾಗಿವೆ.

ವಿಪಕ್ಷ ನಾಯಕರದ್ದು ‘ಅರ್ಬನ್ ನಕ್ಸಲರ ಭಾಷೆ’ ಎಂದ ಪ್ರಧಾನಿ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...