Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ

- Advertisement -
- Advertisement -

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಇಂದು (ಫೆ.5) ಮತದಾನ ನಡೆಯುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯನ್ನು ಯಾರು ಮುನ್ನಡೆಸುತ್ತಾರೆ ಎಂಬುವುದನ್ನು ಈ ಚುನಾವಣೆ ನಿರ್ಧರಿಸಲಿದೆ. ಒಂದೇ ಹಂತದಲ್ಲಿ ನಡೆಯುವ ಚುನಾವಣೆಗೆ 13,033 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಒಟ್ಟು 1.5 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸುವ ಅರ್ಹತೆ ಹೊಂದಿದ್ದು, 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳಲ್ಲಿ 603 ಪುರುಷರು, 95 ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿ ಇದ್ದಾರೆ.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯೇ ಪ್ರಾಬಲ್ಯ ಹೊಂದಿತ್ತು. ಚುನಾವಣಾ ಪೂರ್ವದ ನಿರೀಕ್ಷೆಯಂತೆ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಸಂಪೂರ್ಣ ನೆಲ ಕಚ್ಚಿತ್ತು, ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿತ್ತು.

2015ರ ಚುನಾವಣೆಯಲ್ಲಿ ಎಎಪಿ ಶೇಖಡ 54.6ರಷ್ಟು ಮತಗಳನ್ನು ಪಡೆದು ದಾಖಲೆಯ 67 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. 2020ರ ಚುನಾವಣೆಯಲ್ಲಿ ಎಎಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಕ್ರಮವಾಗಿ ಶೇಖಡ 53.6 ಮತ್ತು 62ಕ್ಕೆ ಅಲ್ಪ ಕುಸಿತ ಕಂಡಿತ್ತು. ಬಿಜೆಪಿ ಉಳಿದ ಎಂಟು ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತೆ ತನ್ನ ಖಾತೆ ತೆರೆಯಲು ವಿಫಲವಾಗಿತ್ತು.

ಆದರೆ, ಈ ಬಾರಿ ಸಂಪೂರ್ಣ ಚಿತ್ರಣ ಬದಲಾಗಿದೆ. ಎಎಪಿಯ ಪ್ರಾಬಲ್ಯ ಕಳೆಗುಂದಿದಂತೆ ಕಾಣುತ್ತಿದೆ. ಬಿಜೆಪಿ ಮತ್ತೆ ಪುಟಿದೆದ್ದಿದೆ. ಕಾಂಗ್ರೆಸ್ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಹಾಗಾಗಿ, ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂರೂ ಪಕ್ಷಗಳು ಆರೋಪ-ಪ್ರತ್ಯಾರೋಪ, ದೂರು-ಪ್ರತಿದೂರು, ನೂರಾರು ಭರವಸೆಗಳೊಂದಿಗೆ ಮತದಾರರ ಮನವೊಲಿಸಲು ಶತ ಪ್ರಯತ್ನ ಮಾಡಿವೆ. ಅಂತಿಮವಾಗಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

ಕೆಲವೊಂದು ಕ್ಷೇತ್ರಗಳಲ್ಲಿ ಘಟಾನುಘಟಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ನವ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇವರ ವಿರುದ್ದ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸಿದ್ದಾರೆ. ಈ ಇಬ್ಬರೂ ಮಾಜಿ ಸಂಸದರು. ವಿಶೇಷವಾಗಿ ಸಂದೀಪ್ ದೀಕ್ಷಿತ್ ಅವರು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ದೀಕ್ಷಿತ್ ಅವರ ಮಗನೂ ಹೌದು.

ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿಯ ಹಾಲಿ ಸಿಎಂ ಅತಿಶಿ ಮರ್ಲೇನಾ ಎಎಪಿಯಿಂದ ಮತ್ತೆ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿ ಮಾಜಿ ಸಂಸದ, ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಅಲ್ಕಾ ಲಂಬಾ ಸ್ಪರ್ಧೆ ಮಾಡಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಈ ಬಾರಿ ಪತ್ಪರ್‌ಗಂಜ್‌ ಬದಲಾಗಿ ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್‌ನ ಫರ್ಹಾದ್ ಸೂರಿ ಕಣಕ್ಕಿಳಿದಿದ್ದಾರೆ.

ಬಲ್ಲಿಮಾರನ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಹಾರೂನ್ ಯೂಸುಫ್ ಮತ್ತು ಹಾಲಿ ಎಎಪಿ ಸಚಿವ ಇಮ್ರಾನ್ ಹುಸೇನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಗ್ರೇಟರ್ ಕೈಲಾಶ್, ಮಾಳವೀಯ ನಗರ, ಗಾಂಧಿ ನಗರ, ಮಂಗೋಲ್‌ಪುರಿ, ಪತ್ಪರ್‌ಗಂಜ್ ಮತ್ತು ಮಾಟಿಯಾ ಮಹಲ್ ಈ ಬಾರಿಯ ಚುನಾವಣೆಯಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಧಾನಸಭಾ ಕ್ಷೇತ್ರಗಳಾಗಿವೆ.

ವಿಪಕ್ಷ ನಾಯಕರದ್ದು ‘ಅರ್ಬನ್ ನಕ್ಸಲರ ಭಾಷೆ’ ಎಂದ ಪ್ರಧಾನಿ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...