Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ

- Advertisement -
- Advertisement -

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಇಂದು (ಫೆ.5) ಮತದಾನ ನಡೆಯುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯನ್ನು ಯಾರು ಮುನ್ನಡೆಸುತ್ತಾರೆ ಎಂಬುವುದನ್ನು ಈ ಚುನಾವಣೆ ನಿರ್ಧರಿಸಲಿದೆ. ಒಂದೇ ಹಂತದಲ್ಲಿ ನಡೆಯುವ ಚುನಾವಣೆಗೆ 13,033 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಒಟ್ಟು 1.5 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸುವ ಅರ್ಹತೆ ಹೊಂದಿದ್ದು, 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳಲ್ಲಿ 603 ಪುರುಷರು, 95 ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿ ಇದ್ದಾರೆ.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯೇ ಪ್ರಾಬಲ್ಯ ಹೊಂದಿತ್ತು. ಚುನಾವಣಾ ಪೂರ್ವದ ನಿರೀಕ್ಷೆಯಂತೆ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಸಂಪೂರ್ಣ ನೆಲ ಕಚ್ಚಿತ್ತು, ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿತ್ತು.

2015ರ ಚುನಾವಣೆಯಲ್ಲಿ ಎಎಪಿ ಶೇಖಡ 54.6ರಷ್ಟು ಮತಗಳನ್ನು ಪಡೆದು ದಾಖಲೆಯ 67 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. 2020ರ ಚುನಾವಣೆಯಲ್ಲಿ ಎಎಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಕ್ರಮವಾಗಿ ಶೇಖಡ 53.6 ಮತ್ತು 62ಕ್ಕೆ ಅಲ್ಪ ಕುಸಿತ ಕಂಡಿತ್ತು. ಬಿಜೆಪಿ ಉಳಿದ ಎಂಟು ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತೆ ತನ್ನ ಖಾತೆ ತೆರೆಯಲು ವಿಫಲವಾಗಿತ್ತು.

ಆದರೆ, ಈ ಬಾರಿ ಸಂಪೂರ್ಣ ಚಿತ್ರಣ ಬದಲಾಗಿದೆ. ಎಎಪಿಯ ಪ್ರಾಬಲ್ಯ ಕಳೆಗುಂದಿದಂತೆ ಕಾಣುತ್ತಿದೆ. ಬಿಜೆಪಿ ಮತ್ತೆ ಪುಟಿದೆದ್ದಿದೆ. ಕಾಂಗ್ರೆಸ್ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಹಾಗಾಗಿ, ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂರೂ ಪಕ್ಷಗಳು ಆರೋಪ-ಪ್ರತ್ಯಾರೋಪ, ದೂರು-ಪ್ರತಿದೂರು, ನೂರಾರು ಭರವಸೆಗಳೊಂದಿಗೆ ಮತದಾರರ ಮನವೊಲಿಸಲು ಶತ ಪ್ರಯತ್ನ ಮಾಡಿವೆ. ಅಂತಿಮವಾಗಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

ಕೆಲವೊಂದು ಕ್ಷೇತ್ರಗಳಲ್ಲಿ ಘಟಾನುಘಟಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ನವ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇವರ ವಿರುದ್ದ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸಿದ್ದಾರೆ. ಈ ಇಬ್ಬರೂ ಮಾಜಿ ಸಂಸದರು. ವಿಶೇಷವಾಗಿ ಸಂದೀಪ್ ದೀಕ್ಷಿತ್ ಅವರು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ದೀಕ್ಷಿತ್ ಅವರ ಮಗನೂ ಹೌದು.

ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿಯ ಹಾಲಿ ಸಿಎಂ ಅತಿಶಿ ಮರ್ಲೇನಾ ಎಎಪಿಯಿಂದ ಮತ್ತೆ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿ ಮಾಜಿ ಸಂಸದ, ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಅಲ್ಕಾ ಲಂಬಾ ಸ್ಪರ್ಧೆ ಮಾಡಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಈ ಬಾರಿ ಪತ್ಪರ್‌ಗಂಜ್‌ ಬದಲಾಗಿ ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್‌ನ ಫರ್ಹಾದ್ ಸೂರಿ ಕಣಕ್ಕಿಳಿದಿದ್ದಾರೆ.

ಬಲ್ಲಿಮಾರನ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಹಾರೂನ್ ಯೂಸುಫ್ ಮತ್ತು ಹಾಲಿ ಎಎಪಿ ಸಚಿವ ಇಮ್ರಾನ್ ಹುಸೇನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಗ್ರೇಟರ್ ಕೈಲಾಶ್, ಮಾಳವೀಯ ನಗರ, ಗಾಂಧಿ ನಗರ, ಮಂಗೋಲ್‌ಪುರಿ, ಪತ್ಪರ್‌ಗಂಜ್ ಮತ್ತು ಮಾಟಿಯಾ ಮಹಲ್ ಈ ಬಾರಿಯ ಚುನಾವಣೆಯಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಧಾನಸಭಾ ಕ್ಷೇತ್ರಗಳಾಗಿವೆ.

ವಿಪಕ್ಷ ನಾಯಕರದ್ದು ‘ಅರ್ಬನ್ ನಕ್ಸಲರ ಭಾಷೆ’ ಎಂದ ಪ್ರಧಾನಿ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...