Homeಮುಖಪುಟದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ದೆಹಲಿ ವಿಧಾನಸಭೆ ಚುನಾವಣೆ : ಇಂದು ಮತದಾನ

ಈ ಬಾರಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ

- Advertisement -
- Advertisement -

ದೆಹಲಿಯ 70 ಸದಸ್ಯ ಬಲದ ವಿಧಾನಸಭೆಗೆ ಇಂದು (ಫೆ.5) ಮತದಾನ ನಡೆಯುತ್ತಿದೆ. ಮುಂದಿನ ಐದು ವರ್ಷಗಳ ಕಾಲ ಕೇಂದ್ರಾಡಳಿತ ಪ್ರದೇಶವಾದ ರಾಷ್ಟ್ರ ರಾಜಧಾನಿಯನ್ನು ಯಾರು ಮುನ್ನಡೆಸುತ್ತಾರೆ ಎಂಬುವುದನ್ನು ಈ ಚುನಾವಣೆ ನಿರ್ಧರಿಸಲಿದೆ. ಒಂದೇ ಹಂತದಲ್ಲಿ ನಡೆಯುವ ಚುನಾವಣೆಗೆ 13,033 ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದೆ.

ಈ ಬಾರಿಯ ಚುನಾವಣೆಯಲ್ಲಿ ಆಡಳಿತರೂಢ ಆಮ್ ಆದ್ಮಿ ಪಕ್ಷ (ಎಎಪಿ), ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಫೆಬ್ರವರಿ 8ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.

ಒಟ್ಟು 1.5 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸುವ ಅರ್ಹತೆ ಹೊಂದಿದ್ದು, 699 ಅಭ್ಯರ್ಥಿಗಳ ಭವಿಷ್ಯ ಬರೆಯಲಿದ್ದಾರೆ. ಅಭ್ಯರ್ಥಿಗಳಲ್ಲಿ 603 ಪುರುಷರು, 95 ಮಹಿಳೆಯರು ಮತ್ತು ಒಬ್ಬರು ತೃತೀಯ ಲಿಂಗಿ ಇದ್ದಾರೆ.

ಕಳೆದ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಎಎಪಿಯೇ ಪ್ರಾಬಲ್ಯ ಹೊಂದಿತ್ತು. ಚುನಾವಣಾ ಪೂರ್ವದ ನಿರೀಕ್ಷೆಯಂತೆ ಗೆದ್ದು ಸರ್ಕಾರ ರಚಿಸಿತ್ತು. ಬಿಜೆಪಿ ಸಂಪೂರ್ಣ ನೆಲ ಕಚ್ಚಿತ್ತು, ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿತ್ತು.

2015ರ ಚುನಾವಣೆಯಲ್ಲಿ ಎಎಪಿ ಶೇಖಡ 54.6ರಷ್ಟು ಮತಗಳನ್ನು ಪಡೆದು ದಾಖಲೆಯ 67 ಸ್ಥಾನಗಳೊಂದಿಗೆ ಭರ್ಜರಿ ಜಯ ಸಾಧಿಸಿತ್ತು. ಉಳಿದ ಮೂರು ಸ್ಥಾನಗಳನ್ನು ಬಿಜೆಪಿ ಗೆದ್ದಿತ್ತು. 2020ರ ಚುನಾವಣೆಯಲ್ಲಿ ಎಎಪಿಯ ಮತ ಹಂಚಿಕೆ ಮತ್ತು ಸ್ಥಾನಗಳು ಕ್ರಮವಾಗಿ ಶೇಖಡ 53.6 ಮತ್ತು 62ಕ್ಕೆ ಅಲ್ಪ ಕುಸಿತ ಕಂಡಿತ್ತು. ಬಿಜೆಪಿ ಉಳಿದ ಎಂಟು ಸ್ಥಾನಗಳನ್ನು ಗೆದ್ದಿತ್ತು. ಕಾಂಗ್ರೆಸ್ ಮತ್ತೆ ತನ್ನ ಖಾತೆ ತೆರೆಯಲು ವಿಫಲವಾಗಿತ್ತು.

ಆದರೆ, ಈ ಬಾರಿ ಸಂಪೂರ್ಣ ಚಿತ್ರಣ ಬದಲಾಗಿದೆ. ಎಎಪಿಯ ಪ್ರಾಬಲ್ಯ ಕಳೆಗುಂದಿದಂತೆ ಕಾಣುತ್ತಿದೆ. ಬಿಜೆಪಿ ಮತ್ತೆ ಪುಟಿದೆದ್ದಿದೆ. ಕಾಂಗ್ರೆಸ್ ಕೂಡ ಗೆಲ್ಲುವ ಉತ್ಸಾಹದಲ್ಲಿದೆ. ಹಾಗಾಗಿ, ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಮೂರೂ ಪಕ್ಷಗಳು ಆರೋಪ-ಪ್ರತ್ಯಾರೋಪ, ದೂರು-ಪ್ರತಿದೂರು, ನೂರಾರು ಭರವಸೆಗಳೊಂದಿಗೆ ಮತದಾರರ ಮನವೊಲಿಸಲು ಶತ ಪ್ರಯತ್ನ ಮಾಡಿವೆ. ಅಂತಿಮವಾಗಿ ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

ಕೆಲವೊಂದು ಕ್ಷೇತ್ರಗಳಲ್ಲಿ ಘಟಾನುಘಟಿಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ. ನವ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಎಎಪಿ ಸಂಚಾಲಕ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತೊಮ್ಮೆ ಅಗ್ನಿ ಪರೀಕ್ಷೆಗೆ ಇಳಿದಿದ್ದಾರೆ. ಇವರ ವಿರುದ್ದ ಬಿಜೆಪಿಯಿಂದ ಪರ್ವೇಶ್ ವರ್ಮಾ ಮತ್ತು ಕಾಂಗ್ರೆಸ್‌ನಿಂದ ಸಂದೀಪ್ ದೀಕ್ಷಿತ್ ಸ್ಪರ್ಧಿಸಿದ್ದಾರೆ. ಈ ಇಬ್ಬರೂ ಮಾಜಿ ಸಂಸದರು. ವಿಶೇಷವಾಗಿ ಸಂದೀಪ್ ದೀಕ್ಷಿತ್ ಅವರು ಮಾಜಿ ಸಿಎಂ, ಹಿರಿಯ ಕಾಂಗ್ರೆಸ್‌ ನಾಯಕಿ ದಿವಂಗತ ಶೀಲಾ ದೀಕ್ಷಿತ್ ಅವರ ಮಗನೂ ಹೌದು.

ಕಲ್ಕಾಜಿ ಕ್ಷೇತ್ರದಲ್ಲಿ ದೆಹಲಿಯ ಹಾಲಿ ಸಿಎಂ ಅತಿಶಿ ಮರ್ಲೇನಾ ಎಎಪಿಯಿಂದ ಮತ್ತೆ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿ ಮಾಜಿ ಸಂಸದ, ವಿವಾದಾತ್ಮಕ ಹೇಳಿಕೆಗಳಿಂದ ಕುಖ್ಯಾತಿ ಪಡೆದಿರುವ ರಮೇಶ್ ಬಿಧುರಿ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಅಲ್ಕಾ ಲಂಬಾ ಸ್ಪರ್ಧೆ ಮಾಡಿದ್ದಾರೆ.

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಹಾಗೂ ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರು ಈ ಬಾರಿ ಪತ್ಪರ್‌ಗಂಜ್‌ ಬದಲಾಗಿ ಜಂಗ್‌ಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇವರ ವಿರುದ್ದ ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಮತ್ತು ಕಾಂಗ್ರೆಸ್‌ನ ಫರ್ಹಾದ್ ಸೂರಿ ಕಣಕ್ಕಿಳಿದಿದ್ದಾರೆ.

ಬಲ್ಲಿಮಾರನ್‌ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕ ಮತ್ತು ಮಾಜಿ ಸಚಿವ ಹಾರೂನ್ ಯೂಸುಫ್ ಮತ್ತು ಹಾಲಿ ಎಎಪಿ ಸಚಿವ ಇಮ್ರಾನ್ ಹುಸೇನ್ ನಡುವೆ ತೀವ್ರ ಸ್ಪರ್ಧೆ ಏರ್ಪಟ್ಟಿದೆ.

ಗ್ರೇಟರ್ ಕೈಲಾಶ್, ಮಾಳವೀಯ ನಗರ, ಗಾಂಧಿ ನಗರ, ಮಂಗೋಲ್‌ಪುರಿ, ಪತ್ಪರ್‌ಗಂಜ್ ಮತ್ತು ಮಾಟಿಯಾ ಮಹಲ್ ಈ ಬಾರಿಯ ಚುನಾವಣೆಯಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಧಾನಸಭಾ ಕ್ಷೇತ್ರಗಳಾಗಿವೆ.

ವಿಪಕ್ಷ ನಾಯಕರದ್ದು ‘ಅರ್ಬನ್ ನಕ್ಸಲರ ಭಾಷೆ’ ಎಂದ ಪ್ರಧಾನಿ ನರೇಂದ್ರ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...