Homeಮುಖಪುಟ'ಅತ್ಯಂತ ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ...

‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ‘ಅತ್ಯಂತ ಗಂಭೀರ’ ಮಟ್ಟಕ್ಕೆ ತಲುಪಿದ್ದು, ಜನರು ವಾಸಿಸಲು ಯೋಗ್ಯವಲ್ಲದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಭಾನುವಾರದಿಂದ (ನ.17) ಟ್ರಕ್‌ಗಳು ನಗರ ಪ್ರವೇಶಿಸುವುದನ್ನು ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳನ್ನು ತಾತ್ಕಾಲಿಕ ನಿಷೇಧಿಸಲಾಗಿದೆ.

10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು ಮುಂದಿನ ಆದೇಶದವರೆಗೆ ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳ ಪ್ರಕಾರ, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೈನಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಅಥವಾ ಎಕ್ಯೂಐ 484 ರಷ್ಟಿತ್ತು. ಭಾನುವಾರ ಸಂಜೆ 4 ಗಂಟೆ ಹೊತ್ತಿಗೆ ಈ ಮಟ್ಟ 441 ಮತ್ತು 7 ಗಂಟೆಯ ಹೊತ್ತಿಗೆ 457 ಆಗಿತ್ತು.

ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ, ಗಾಳಿಯ ಸೂಚ್ಯಂಕ 0 ಯಿಂದ 50 ರ ನಡುವೆ ಇದ್ದರೆ ‘ಉತ್ತಮ ಗುಣಮಟ್ಟ’, 51 ರಿಂದ 100ರ ನಡುವೆ ಇದ್ದರೆ ‘ತೃಪ್ತಿದಾಯಕ ಗುಣಮಟ್ಟ’, 101 ರಿಂದ 200ರ ನಡುವೆ ಇದ್ದರೆ ‘ಮಧ್ಯಮ ಗುಣಮಟ್ಟ’, 201 ರಿಂದ 300 ರ ನಡುವೆಯಿದ್ದರೆ ‘ಕಳಪೆ ಗುಣಮಟ್ಟ’, 301 ರಿಂದ 400ರ ನಡುವೆಯಿದ್ದರೆ ‘ಅತ್ಯಂತ ಕಳಪೆ ಗುಣಮಟ್ಟ. ಆದರೆ, ದೆಹಲಿಯ ಗಾಳಿಯ ಸೂಚ್ಯಂಕ 500ರ ಸನಿಹ ತಲುಪಿದೆ. ಇದರಿಂದ ಮಾಲಿನ್ಯದ ಪ್ರಮಾಣ ಅರ್ಥೈಸಬಹುದು.

ಗಾಳಿಯ ಸೂಚ್ಯಂಕ 401 ರಿಂದ 450ರ ನಡುವೆಯಿದ್ದರೆ ‘ತೀವ್ರ ಕಳಪೆ ಗುಣಮಟ್ಟ’ವನ್ನು ಸೂಚಿಸುತ್ತದೆ. ಇನ್ನು 450ರ ಮಿತಿಗಿಂತ ಹೆಚ್ಚಿದ್ದರೆ, ‘ತೀವ್ರ ಪ್ಲಸ್’ ಎಂದು ಕರೆಯಲಾಗುತ್ತದೆ. ಈ ಹಂತಗಳಲ್ಲಿ, ಆರೋಗ್ಯವಂತ ಜನರು ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಕಾಯಿಲೆಗಳನ್ನು ಉಂಟಾಗುತ್ತದೆ.

ಏರುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (ಎನ್‌ಸಿಆರ್‌) ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಸೋಮವಾರದಿಂದ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ ಅಥವಾ GRAPಯ ಹಂತ 4ರ ಅನುಷ್ಠಾನಕ್ಕೆ ಆದೇಶ ನೀಡಿದೆ.

GRAP ಎಂಬುವುದು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಒಂದು ಗುಂಪಾಗಿದೆ. ಇದರ ಅನುಷ್ಠಾನದ ಮೂಲಕ ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ ಮಟ್ಟವನ್ನು ಮತಷ್ಟು ಹೆಚ್ಚಾಗದಂತೆ ತಡೆಯಲು ಪ್ರಯತ್ನಿಸಲಾಗುತ್ತದೆ. ಈ ಕ್ರಮಗಳಲ್ಲಿ ಲಾಕ್‌ಡೌನ್‌ನಂತಹ ಕಠಿಣ ಆದೇಶಗಳೂ ಒಳಗೊಂಡಿವೆ.

ಗಾಳಿಯ ಗುಣಮಟ್ಟ ಕಳಪೆಯಾದರೆ, GRAPಯ 1ನೇ ಹಂತವನ್ನು ಜಾರಿಗೆ ತರಲಾಗುತ್ತದೆ. ಅತ್ಯಂತ ಕಳೆಪೆಯಾದರೆ ಮತ್ತು ತೀವ್ರ ಕಳಪೆ ಪ್ಲಸ್ ಆದರೆ, ಎರಡು, ಮೂರು ಮತ್ತು 4ನೇ ಹಂತಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ಶುದ್ಧ ಇಂಧನವನ್ನು ಬಳಸುವ ಟ್ರಕ್‌ಗಳನ್ನು ಹೊರತುಪಡಿಸಿ, ಇತರ ಟ್ರಕ್‌ಗಳ ನಗರ ಪ್ರವೇಶವನ್ನು ದೆಹಲಿ ಸರ್ಕಾರ ತಾತ್ಕಾಲಿಕ ನಿಷೇಧಿಸಿದೆ. ಶಾಲಾ ತರಗತಿಗಳು ಆನ್‌ಲೈನ್‌ ಮೂಲಕ ನಡೆಸುವಂತೆ ಮತ್ತು ಕಚೇರಿಗಳು ಶೇ.50 ಸಾಮಾರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್‌ ಅವಕಾಶ ನೀಡುವಂತೆ ಸೂಚಿಸಿದೆ.

ಎಲೆಕ್ಟ್ರಿಕ್, ಸಿಎನ್‌ಜಿ ಮತ್ತು ಬಿಎಸ್‌-VI ಹೊರತುಪಡಿಸಿ, ದೆಹಲಿಯ ಹೊರಗಿನ ನೋಂದಣಿ ಹೊಂದಿರುವ
ಅನಿವಾರ್ಯವಲ್ಲದ ಲಘು ವಾಣಿಜ್ಯ ವಾಹನಗಳ ನಗರ ಪ್ರವೇಶವನ್ನೂ ನಿಷೇಧಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟ ಅಥವಾ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಮನವಿ ಮಾಡಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...