Homeಮುಖಪುಟ'ಅತ್ಯಂತ ಗಂಭೀರ' ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ...

‘ಅತ್ಯಂತ ಗಂಭೀರ’ ಮಟ್ಟ ತಲುಪಿದ ದೆಹಲಿಯ ವಾಯುಮಾಲಿನ್ಯ : ಟ್ರಕ್‌ಗಳ ನಗರ ಪ್ರವೇಶ ನಿಷೇಧ, ಶಾಲಾ ಮಕ್ಕಳಿಗೆ ಅನ್‌ಲೈನ್‌ ತರಗತಿ

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ‘ಅತ್ಯಂತ ಗಂಭೀರ’ ಮಟ್ಟಕ್ಕೆ ತಲುಪಿದ್ದು, ಜನರು ವಾಸಿಸಲು ಯೋಗ್ಯವಲ್ಲದ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆ, ಭಾನುವಾರದಿಂದ (ನ.17) ಟ್ರಕ್‌ಗಳು ನಗರ ಪ್ರವೇಶಿಸುವುದನ್ನು ಮತ್ತು ಸಾರ್ವಜನಿಕ ನಿರ್ಮಾಣ ಕಾಮಗಾರಿಗಳನ್ನು ತಾತ್ಕಾಲಿಕ ನಿಷೇಧಿಸಲಾಗಿದೆ.

10 ಮತ್ತು 12ನೇ ಶಾಲಾ ತರಗತಿಗಳನ್ನು ಹೊರತುಪಡಿಸಿ, ಇತರ ಎಲ್ಲಾ ತರಗತಿಗಳು ಮುಂದಿನ ಆದೇಶದವರೆಗೆ ಆನ್‌ಲೈನ್‌ ಮೂಲಕ ನಡೆಯಲಿದೆ ಎಂದು ಮುಖ್ಯಮಂತ್ರಿ ಅತಿಶಿ ಮರ್ಲೆನಾ ಅವರು ಸಾಮಾಜಿಕ ಮಾಧ್ಯಮಗಳ ಮೂಲಕ ತಿಳಿಸಿದ್ದಾರೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿ ಅಂಶಗಳ ಪ್ರಕಾರ, ಇಂದು (ಸೋಮವಾರ) ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೈನಂದಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ ಅಥವಾ ಎಕ್ಯೂಐ 484 ರಷ್ಟಿತ್ತು. ಭಾನುವಾರ ಸಂಜೆ 4 ಗಂಟೆ ಹೊತ್ತಿಗೆ ಈ ಮಟ್ಟ 441 ಮತ್ತು 7 ಗಂಟೆಯ ಹೊತ್ತಿಗೆ 457 ಆಗಿತ್ತು.

ಅಂತಾರಾಷ್ಟ್ರೀಯ ಮಾನದಂಡಗಳ ಪ್ರಕಾರ, ಗಾಳಿಯ ಸೂಚ್ಯಂಕ 0 ಯಿಂದ 50 ರ ನಡುವೆ ಇದ್ದರೆ ‘ಉತ್ತಮ ಗುಣಮಟ್ಟ’, 51 ರಿಂದ 100ರ ನಡುವೆ ಇದ್ದರೆ ‘ತೃಪ್ತಿದಾಯಕ ಗುಣಮಟ್ಟ’, 101 ರಿಂದ 200ರ ನಡುವೆ ಇದ್ದರೆ ‘ಮಧ್ಯಮ ಗುಣಮಟ್ಟ’, 201 ರಿಂದ 300 ರ ನಡುವೆಯಿದ್ದರೆ ‘ಕಳಪೆ ಗುಣಮಟ್ಟ’, 301 ರಿಂದ 400ರ ನಡುವೆಯಿದ್ದರೆ ‘ಅತ್ಯಂತ ಕಳಪೆ ಗುಣಮಟ್ಟ. ಆದರೆ, ದೆಹಲಿಯ ಗಾಳಿಯ ಸೂಚ್ಯಂಕ 500ರ ಸನಿಹ ತಲುಪಿದೆ. ಇದರಿಂದ ಮಾಲಿನ್ಯದ ಪ್ರಮಾಣ ಅರ್ಥೈಸಬಹುದು.

ಗಾಳಿಯ ಸೂಚ್ಯಂಕ 401 ರಿಂದ 450ರ ನಡುವೆಯಿದ್ದರೆ ‘ತೀವ್ರ ಕಳಪೆ ಗುಣಮಟ್ಟ’ವನ್ನು ಸೂಚಿಸುತ್ತದೆ. ಇನ್ನು 450ರ ಮಿತಿಗಿಂತ ಹೆಚ್ಚಿದ್ದರೆ, ‘ತೀವ್ರ ಪ್ಲಸ್’ ಎಂದು ಕರೆಯಲಾಗುತ್ತದೆ. ಈ ಹಂತಗಳಲ್ಲಿ, ಆರೋಗ್ಯವಂತ ಜನರು ವಾಯು ಮಾಲಿನ್ಯಕ್ಕೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಉಸಿರಾಟದ ಕಾಯಿಲೆಗಳನ್ನು ಉಂಟಾಗುತ್ತದೆ.

ಏರುತ್ತಿರುವ ವಾಯು ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರಾಜಧಾನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ (ಎನ್‌ಸಿಆರ್‌) ವಾಯು ಗುಣಮಟ್ಟ ನಿರ್ವಹಣೆಯ ಆಯೋಗವು ಸೋಮವಾರದಿಂದ ‘ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್’ ಅಥವಾ GRAPಯ ಹಂತ 4ರ ಅನುಷ್ಠಾನಕ್ಕೆ ಆದೇಶ ನೀಡಿದೆ.

GRAP ಎಂಬುವುದು ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟಲು ಕೈಗೊಳ್ಳುವ ಕ್ರಮಗಳ ಒಂದು ಗುಂಪಾಗಿದೆ. ಇದರ ಅನುಷ್ಠಾನದ ಮೂಲಕ ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ ಮಟ್ಟವನ್ನು ಮತಷ್ಟು ಹೆಚ್ಚಾಗದಂತೆ ತಡೆಯಲು ಪ್ರಯತ್ನಿಸಲಾಗುತ್ತದೆ. ಈ ಕ್ರಮಗಳಲ್ಲಿ ಲಾಕ್‌ಡೌನ್‌ನಂತಹ ಕಠಿಣ ಆದೇಶಗಳೂ ಒಳಗೊಂಡಿವೆ.

ಗಾಳಿಯ ಗುಣಮಟ್ಟ ಕಳಪೆಯಾದರೆ, GRAPಯ 1ನೇ ಹಂತವನ್ನು ಜಾರಿಗೆ ತರಲಾಗುತ್ತದೆ. ಅತ್ಯಂತ ಕಳೆಪೆಯಾದರೆ ಮತ್ತು ತೀವ್ರ ಕಳಪೆ ಪ್ಲಸ್ ಆದರೆ, ಎರಡು, ಮೂರು ಮತ್ತು 4ನೇ ಹಂತಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ.

ಅಗತ್ಯ ವಸ್ತುಗಳನ್ನು ಸಾಗಿಸುವ ಮತ್ತು ಶುದ್ಧ ಇಂಧನವನ್ನು ಬಳಸುವ ಟ್ರಕ್‌ಗಳನ್ನು ಹೊರತುಪಡಿಸಿ, ಇತರ ಟ್ರಕ್‌ಗಳ ನಗರ ಪ್ರವೇಶವನ್ನು ದೆಹಲಿ ಸರ್ಕಾರ ತಾತ್ಕಾಲಿಕ ನಿಷೇಧಿಸಿದೆ. ಶಾಲಾ ತರಗತಿಗಳು ಆನ್‌ಲೈನ್‌ ಮೂಲಕ ನಡೆಸುವಂತೆ ಮತ್ತು ಕಚೇರಿಗಳು ಶೇ.50 ಸಾಮಾರ್ಥ್ಯದಲ್ಲಿ ಕಾರ್ಯನಿರ್ವಹಿಸುವಂತೆ ಆದೇಶಿಸಿದೆ. ಖಾಸಗಿ ಕಂಪನಿಗಳು ಉದ್ಯೋಗಿಗಳಿಗೆ ವರ್ಕ್‌ ಫ್ರಮ್ ಹೋಮ್‌ ಅವಕಾಶ ನೀಡುವಂತೆ ಸೂಚಿಸಿದೆ.

ಎಲೆಕ್ಟ್ರಿಕ್, ಸಿಎನ್‌ಜಿ ಮತ್ತು ಬಿಎಸ್‌-VI ಹೊರತುಪಡಿಸಿ, ದೆಹಲಿಯ ಹೊರಗಿನ ನೋಂದಣಿ ಹೊಂದಿರುವ
ಅನಿವಾರ್ಯವಲ್ಲದ ಲಘು ವಾಣಿಜ್ಯ ವಾಹನಗಳ ನಗರ ಪ್ರವೇಶವನ್ನೂ ನಿಷೇಧಿಸಲಾಗುವುದು” ಎಂದು ಸರ್ಕಾರ ಹೇಳಿದೆ.

ಮಕ್ಕಳು, ವೃದ್ಧರು ಮತ್ತು ಉಸಿರಾಟ ಅಥವಾ ಇತರ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರು ಹೊರಾಂಗಣ ಚಟುವಟಿಕೆಗಳನ್ನು ತಪ್ಪಿಸಲು ಮತ್ತು ಸಾಧ್ಯವಾದಷ್ಟು ಮನೆಯೊಳಗೆ ಇರಲು ಮನವಿ ಮಾಡಿದೆ.

ಇದನ್ನೂ ಓದಿ : ದೆಹಲಿ ಸಚಿವ ಕೈಲಾಶ್ ಗೆಹ್ಲೋಟ್ ರಾಜೀನಾಮೆ ಬೆನ್ನಿಗೆ ಬಿಜೆಪಿಯ ಪ್ರಮುಖ ನಾಯಕ ಎಎಪಿಗೆ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...