Homeಮುಖಪುಟವಕೀಲ ಪ್ರಶಾಂತ್ ಭೂಷಣ್‌ಗೆ ದೆಹಲಿ ಬಾರ್ ಕೌನ್ಸಿಲ್ ನೋಟಿಸ್

ವಕೀಲ ಪ್ರಶಾಂತ್ ಭೂಷಣ್‌ಗೆ ದೆಹಲಿ ಬಾರ್ ಕೌನ್ಸಿಲ್ ನೋಟಿಸ್

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಿಕ್ಷೆ ನೀಡಿದ ಹಿನ್ನೆಲೆ ದೆಹಲಿ ಬಾರ್‌ ಕೌನ್ಸಿಲ್ ಪ್ರಶಾಂತ್ ಭೂಷಣ್‌ಗೆ ಅಕ್ಟೋಬರ್ 23 ರಂದು ಕೌನ್ಸಿಲ್ ಮುಂದೆ ಹಾಜರಾಗುವಂತೆ ಕೋರಿ ನೋಟಿಸ್ ನೀಡಿದೆ.

- Advertisement -
- Advertisement -

ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳ ಕುರಿತಾಗಿ ವಕೀಲ ಪ್ರಶಾಂತ್‌ ಭೂಷಣ್ ಮಾಡಿರುವ ಟೀಕೆಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಶಿಕ್ಷೆ ನೀಡಿದ ಹಿನ್ನೆಲೆ ದೆಹಲಿ ಬಾರ್‌ ಕೌನ್ಸಿಲ್ ವಕೀಲ ಪ್ರಶಾಂತ್ ಭೂಷಣ್‌ಗೆ ಅಕ್ಟೋಬರ್ 23 ರಂದು ಕೌನ್ಸಿಲ್ ಮುಂದೆ ಹಾಜರಾಗುವಂತೆ ಕೋರಿ ನೋಟಿಸ್ ನೀಡಿದೆ. ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ಕೌನ್ಸಿಲ್‌ಗೆ ಪ್ರತಿಕ್ರಿಯಿಸಬೇಕಾಗುತ್ತದೆ. ಅಕ್ಟೋಬರ್ 23 ರಂದು ವೈಯಕ್ತಿಕವಾಗಿ ಅಥವಾ ವಿಡಿಯೋ ಸಂವಾದದ ಮೂಲಕ ಹಾಜರಾಗಲು ಬಿಸಿಡಿ ಸೂಚಿಸಿದೆ.

ಇದನ್ನೂ ಓದಿ: ನಾನು ಟ್ವೀಟ್‌ ಮಾಡಿದ್ದು, ನಾಗರಿಕನ ಕರ್ತವ್ಯವಾಗಿತ್ತು. ಆದರೆ ಕೋರ್ಟನ್ನು ಗೌರವಿಸಿ 1 ರೂ ದಂಡ ಕಟ್ಟುತ್ತೇನೆ: ಪ್ರಶಾಂತ್ ಭೂಷಣ್

ದೆಹಲಿ ವಕೀಲರ ಪರಿಷತ್ತು ನೀಡಿರುವ ನೋಟಿಸ್ ಅನ್ನು ಪ್ರಶಾಂತ್ ಭೂಷಣ್ ಟ್ವೀಟ್ ಮಾಡಿದ್ದಾರೆ.

“ನೀವು ವೈಯಕ್ತಿಕವಾಗಿ ಅಥವಾ ನಿಮ್ಮ ಪರವಾಗಿ ಅಧಿಕೃತ ವಕೀಲರ ಮೂಲಕ ಅಕ್ಟೋಬರ್ 23 ರಂದು ಸಂಜೆ 4.00 ಗಂಟೆಗೆ ಪರಿಷತ್ತಿನ ಕಚೇರಿಯಲ್ಲಿ ಹಾಜರಾಗಬೇಕು… ನಿಮಗೆ ಸೂಕ್ತವಾದಂತೆ ನೀವು ದೈಹಿಕವಾಗಿ ಅಥವಾ ವರ್ಚುವಲ್ ಕಾನ್ಫರೆನ್ಸಿಂಗ್ ಮೂಲಕ ಕಾಣಿಸಿಕೊಳ್ಳಬಹುದು ”ಎಂದು ಬಿಸಿಡಿ ನೋಟಿಸ್‌ನಲ್ಲಿ ತಿಳಿಸಿದೆ.

ಈ ನೋಟಿಸ್ ಸ್ವೀಕರಿಸಿದ 15 ದಿನಗಳಲ್ಲಿ ನಿಮ್ಮ ಪ್ರತಿಕ್ರಿಯೆಯನ್ನು ಕೌನ್ಸಿಲ್‌ಗೆ ಕಳುಹಿಸುವ ಅವಶ್ಯಕತೆಯಿದೆ, ಸೆಕ್ಷನ್ 24 ಎ (ದಾಖಲಾತಿಗೆ ಅನರ್ಹತೆ) ಮತ್ತು ವಕೀಲರ ಕಾಯ್ದೆಯ ಸೆಕ್ಷನ್ 35 ರ ಅಡಿಯಲ್ಲಿ ನಿಮ್ಮ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು? ಎಂದು ಪ್ರಶ್ನಿಸಿದೆ.

ವಕೀಲರ ಕಾಯ್ದೆ ಸೆಕ್ಷನ್ 24Aರ ಅನ್ವಯ ನೋಂದಣಿ ರದ್ದುಪಡಿಸಲಾಗುತ್ತದೆ. ಸೆಕ್ಷನ್ 35 ದುರ್ನಡತೆ ತೋರುವ ವಕೀಲರಿಗೆ ಶಿಕ್ಷೆ ವಿಧಿಸಲು ಅವಕಾಶ ಕಲ್ಪಿಸಿದೆ. ಸೆಕ್ಷನ್ 35ರ ಅನ್ವಯ ರಾಜ್ಯ ವಕೀಲರ ಪರಿಷತ್ತಿನ ಶಿಸ್ತುಪಾಲನಾ ಸಮಿತಿಯು ವೃತ್ತಿಪರ ವಿಚಾರದಲ್ಲಿ ವಕೀಲರು ದೋಷಿ ಎಂದು ಸಾಬೀತಾದರೆ ವಕೀಲರ ಪರಿಷತ್ತಿನಿಂದ ಅಂಥವರನ್ನು ಅಮಾನತುಗೊಳಿಸಲಾಗುತ್ತದೆ.


ಇದನ್ನೂ ಓದಿ: ಒಂದು ರೂ. ದಂಡ ಕಟ್ಟಿ ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿದ ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...