Homeಮುಖಪುಟದೆಹಲಿ ಸಚಿವೆ ಅತಿಶಿಗೆ ಮಾನನಷ್ಟ ನೋಟಿಸ್‌ ಕಳುಹಿಸಿದ ಬಿಜೆಪಿ

ದೆಹಲಿ ಸಚಿವೆ ಅತಿಶಿಗೆ ಮಾನನಷ್ಟ ನೋಟಿಸ್‌ ಕಳುಹಿಸಿದ ಬಿಜೆಪಿ

- Advertisement -
- Advertisement -

ಬಿಜೆಪಿ ಪಕ್ಷವು  ತನ್ನ ರಾಜಕೀಯ ಬದುಕನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷಕ್ಕೆ ಸೇರಿ ಅಥವಾ ಬಂಧನಕ್ಕೆ ಸಿದ್ಧರಾಗಿ ಎಂದು ತನ್ನ ಆಪ್ತರ ಮೂಲಕ ತನ್ನನ್ನು ಸಂಪರ್ಕಿಸಿದೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು. ಇದರ ಬೆನ್ನಲ್ಲಿ ಬಿಜೆಪಿಯ ದೆಹಲಿ ಘಟಕವು ಎಎಪಿ ಹಿರಿಯ ನಾಯಕಿ ಅತಿಶಿ ಅವರಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದು, ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ, ಅತಿಶಿಗೆ ಮಾನನಷ್ಟ ನೋಟಿಸ್ ಕಳುಹಿಸಿದ್ದು, ಆಕೆಯ ಹೇಳಿಕೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. ಅತಿಶಿ ತನ್ನನ್ನು ಯಾರು, ಹೇಗೆ ಮತ್ತು ಯಾವಾಗ ಸಂಪರ್ಕಿಸಿದರು ಎಂಬುವುದಕ್ಕೆ ಪುರಾವೆಗಳನ್ನು ಒದಗಿಸಲು ವಿಫಲರಾಗಿದ್ದಾರೆ. ದೆಹಲಿಯಲ್ಲಿ ಎಎಪಿ ಬಿಕ್ಕಟ್ಟಿಗೆ ಒಳಗಾಗಿದೆ, ಅದಕ್ಕಾಗಿಯೇ ಅವರು ಹತಾಶೆಯಿಂದ ಇಂತಹ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ ನಾವು ಅವರನ್ನು ಈ ಪ್ರಕರಣದಿಂದ ತಪ್ಪಿಸಿಕೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಅತಿಶಿ ತನ್ನ ಆರೋಪವನ್ನು ಸಾಬೀತುಪಡಿಸಲು ತನ್ನ ಫೋನ್‌ನ್ನು ತನಿಖಾ ಸಂಸ್ಥೆಗೆ ಸಲ್ಲಿಸುವಂತೆ ಕೇಳಿಕೊಂಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿಯ ಪರ ವಕೀಲರು, ಅತಿಶಿ ಅವರ ಹೇಳಿಕೆಯನ್ನು ಹಿಂಪಡೆಯಲು ಪಕ್ಷವು ಮಾನನಷ್ಟ ನೋಟಿಸ್ ಕಳುಹಿಸಿದೆ, ಅವರು ಸುಳ್ಳು, ಮಾನಹಾನಿಕರ ಮಾಡುವ ಸಂಚು  ಮತ್ತು ದುರುದ್ದೇಶದಿಂದ ಈ ಆರೋಪವನ್ನು ಮಾಡಿದ್ದಾರೆ. ಅವರು ತಮ್ಮ ಆರೋಪವನ್ನು ಸಾಬೀತುಪಡಿಸಲು ವಿಫಲವಾದರೆ ಹೆಚ್ಚಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಸಚಿವೆ ಅತಿಶಿ ಹೇಳಿಕೆಯಲ್ಲೇನಿತ್ತು?

ಬಿಜೆಪಿ ಪಕ್ಷವು  ತನ್ನ ರಾಜಕೀಯ ಬದುಕನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷಕ್ಕೆ ಸೇರಿ ಅಥವಾ ಬಂಧನಕ್ಕೆ ಸಿದ್ಧರಾಗಿ ಎಂದು ತನ್ನ ಆಪ್ತರ ಮೂಲಕ ತನ್ನನ್ನು ಸಂಪರ್ಕಿಸಿದೆ ಎಂದು ದೆಹಲಿ ಸಚಿವೆ ಅತಿಶಿ ನಿನ್ನೆ ಆರೋಪಿಸಿದ್ದರು.

ಈ ಕುರಿತು ನಿನ್ನೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಎಎಪಿಯನ್ನು ನಾಶಮಾಡಲು ಬಯಸಿದೆ ಮತ್ತು ಇನ್ನೆರಡು ತಿಂಗಳಲ್ಲಿ ನನ್ನನ್ನು, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನನ್ನ ರಾಜಕೀಯ ಬದುಕನ್ನು ಉಳಿಸಲು ಬಿಜೆಪಿ ಪಕ್ಷಕ್ಕೆ ಸೇರಲು ನನ್ನ ಆಪ್ತ ವ್ಯಕ್ತಿಯ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ. ನಾನು ಸೇರದಿದ್ದರೆ, ಜಾರಿ ನಿರ್ದೇಶನಾಲಯ ಒಂದು ತಿಂಗಳಲ್ಲಿ ನನ್ನನ್ನು ಬಂಧಿಸಲಾಗುವುದು ಎಂದು ಹೇಳಲಾಗಿದೆ ಎಂದು ಅವರು ಹೇಳಿದ್ದರು.

ತನ್ನ ಪ್ರಮುಖ ನಾಲ್ಕು ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿದ ನಂತರ ಎಎಪಿ ವಿಭಜನೆಯಾಗುತ್ತದೆ ಎಂದು ಬಿಜೆಪಿ ನಿರೀಕ್ಷಿಸುತ್ತಿದೆ. ಲೋಕಸಭೆ ಚುನಾವಣೆಯ ಇನ್ನೆರಡು ತಿಂಗಳಲ್ಲಿ ಇನ್ನೂ ನಾಲ್ವರು ನಾಯಕರನ್ನು ಬಂಧಿಸಲಾಗುವುದು, ಹಿರಿಯ ನಾಲ್ಕು ನಾಯಕರನ್ನು ಬಂಧಿಸಿದ ನಂತರ ಎಎಪಿ ಕುಸಿಯುತ್ತದೆ, ನೈತಿಕತೆ ಕುಸಿಯುತ್ತದೆ ಎಂದು ಅವರು ಭಾವಿಸಿದ್ದರು ಎಂದು ಅತಿಶಿ ಹೇಳಿದ್ದಾರೆ.

ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ರ್ಯಾಲಿ ಮತ್ತು ಕಳೆದ 10 ದಿನಗಳಲ್ಲಿ ಎಎಪಿ ನಡೆಸಿದ ಬೀದಿ ಪ್ರತಿಭಟನೆಯು ಕೇವಲ ನಾಲ್ವರು ನಾಯಕರ ಬಂಧನವು ಅವರಿಗೆ ಸಹಾಯ ಮಾಡುವುದಿಲ್ಲ ಎಂದು ಮನವರಿಕೆ ಮಾಡಿದೆ. ಇಡಿ ನನ್ನ ಖಾಸಗಿ ನಿವಾಸದ ಮೇಲೆ ಮಾತ್ರವಲ್ಲದೆ ತನ್ನ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಿದೆ, ನಂತರ ಇಡಿ ಸಮನ್ಸ್ ಜಾರಿ ಮಾಡಿ ಅವರನ್ನು ಬಂಧಿಸಲಿದೆ ಎಂದು ನನಗೆ ಬೆದರಿಸಲಾಗಿದೆ. ಅವರ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ ಎಂಬುವುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು. ನಾವು ಕೇಜ್ರಿವಾಲ್ ಅವರ ಸಿಪಾಹಿಗಳು, ಭಗತ್ ಸಿಂಗ್ ಅವರ ಅನುಯಾಯಿಗಳು. ನಮ್ಮ ಕೊನೆಯ ಉಸಿರು ಇರುವವರೆಗೂ ನಾವು ಕೇಜ್ರಿವಾಲ್ ನೇತೃತ್ವದಲ್ಲಿ ಸಂವಿಧಾನವನ್ನು ಉಳಿಸಲು ಹೋರಾಡುತ್ತೇವೆ ಎಂದು ಹೇಳಿದ್ದರು.

ಇದನ್ನು ಓದಿ: ಕೇಜ್ರಿವಾಲ್‌ನ್ನು ಜೈಲಿನಲ್ಲಿರಿಸಿ ಅವರ ಆರೋಗ್ಯವನ್ನು ಬಿಜೆಪಿ ಅಪಾಯಕ್ಕೆ ಸಿಲುಕಿಸಿದೆ: ಸಚಿವೆ ಅತಿಶಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...