Homeಮುಖಪುಟದೆಹಲಿ ಸ್ಪೋಟ : ಯುಎಪಿಎ, ಸ್ಪೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲು

ದೆಹಲಿ ಸ್ಪೋಟ : ಯುಎಪಿಎ, ಸ್ಪೋಟಕ ಕಾಯ್ದೆಯಡಿ ಎಫ್‌ಐಆರ್ ದಾಖಲು

- Advertisement -
- Advertisement -

ಒಂಭತ್ತು ಜನರ ಸಾವಿಗೆ ಕಾರಣವಾದ ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸಂಭವಿಸಿದ ಕಾರು ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಭಾರತೀಯ ನ್ಯಾಯ ಸಂಹಿತೆ ಮತ್ತು ಸ್ಫೋಟಕ ಕಾಯ್ದೆಯ ಸೆಕ್ಷನ್‌ಗಳನ್ನು ಕೂಡ ಅನ್ವಯಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ರಾಜಾ ಬಂಥಿಯಾ ತಿಳಿಸಿದ್ದಾರೆ.

ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್‌ಜಿ) ದೆಹಲಿ ಪೊಲೀಸರು ಮತ್ತು ವಿಧಿವಿಜ್ಞಾನ ಪ್ರಯೋಗಾಲಯದ ತಂಡಗಳು ಘಟನಾ ಸ್ಥಳದಲ್ಲಿ ತನಿಖೆ ಕೈಗೊಂಡಿವೆ ಎಂದು ಹೇಳಿದ್ದಾರೆ.

ಸ್ಪೋಟ ಸಂಭವಿಸಿದ ಸ್ಥಳದಲ್ಲಿ ಕಾರಿನೊಳಗೆ ಕೆಲವು ದೇಹದ ಭಾಗಗಳು ಕಂಡು ಬಂದಿವೆ. ಎಫ್‌ಎಸ್‌ಎಲ್ ತಂಡ ಅವುಗಳನ್ನು ಸಂಗ್ರಹಿಸಿವೆ. ಅದರ ಮೂಲಕ ಯಾವ ಮಾಹಿತಿಗಳು ಸಿಗಲಿವೆ ಎಂದು ಪರಿಶೀಲಿಸುತ್ತಿದ್ದೇವೆ ಎಂದು ಬಂಥಿಯಾ ಮಾಹಿತಿ ನೀಡಿದ್ದಾರೆ.

ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ನಂಬರ್ ಒಂದರ ಬಳಿ ಹುಂಡೈ ಐ20 ಕಾರಿನಲ್ಲಿ ಸಂಭವಿಸಿದ ಸ್ಫೋಟಕ್ಕೆ ಕಾರಣವೇನೆಂದು ಪೊಲೀಸರು ಇನ್ನೂ ತಿಳಿಸಿಲ್ಲ.

ಸೋಮವಾರ (ನ.10) ಸಂಜೆ 6.52ರ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸತೀಶ್ ಗೋಲ್ಚಾ ತಿಳಿಸಿದ್ದಾರೆ.

“ನಿಧಾನವಾಗಿ ಚಲಿಸುತ್ತಿದ್ದ ಕಾರೊಂದು ರೆಡ್‌ ಸಿಗ್ನಲ್ ಬಿದ್ದಾಗ ನಿಂತಿದೆ. ಈ ವೇಳೆ ಅದರಲ್ಲಿ ಸ್ಪೋಟ ಸಂಭವಿಸಿದೆ. ಪರಿಣಾಮ ಜನರ ಜೀವ ಹೋಗಿದೆ ಮತ್ತು ಗಾಯಗೊಂಡಿದ್ದಾರೆ. ಸುತ್ತಮುತ್ತಲಿನ ವಾಹನಗಳಿಗೆ ಹಾನಿಯಾಗಿದೆ” ಎಂದು ಗೋಲ್ಚಾ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. “ಪೊಲೀಸರು ಎಲ್ಲಾ ಆಯಾಮಗಳಿಂದ ತನಿಖೆ ಕೈಗೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ದೆಹಲಿ ಸ್ಫೋಟದಲ್ಲಿ ಬಳಸಲಾದ ಡಿಟೋನೇಟರ್‌ಗಳು ಫರಿದಾಬಾದ್‌ನ ಭಯೋತ್ಪಾದಕ ಘಟಕದೊಂದಿಗೆ ಸಂಬಂಧ ಹೊಂದಿವೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂಬುವುದಾಗಿ ಮೂಲಗಳನ್ನು ಉಲ್ಲೇಖಿಸಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ಪೊಲೀಸರು 100ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲನೆ ಮಾಡುವ ಮೂಲಕ ಐ20 ಕಾರನ್ನು ಅನ್ನು ಪತ್ತೆಹಚ್ಚಿದ್ದಾರೆ. ಕೆಂಪು ಕೋಟೆ ಬಳಿ ಸ್ಫೋಟಕ್ಕೆ 20 ನಿಮಿಷಗಳ ಮೊದಲು ಮುಸುಕುಧಾರಿ ವ್ಯಕ್ತಿ ಹುಂಡೈ ಐ20 ಕಾರು ಚಲಾಯಿಸುತ್ತಿದ್ದದ್ದು ಕಂಡು ಬಂದಿದೆ ಎಂದು ವರದಿ ಹೇಳಿದೆ.

ಭದ್ರತಾ ಕಾರಣಗಳಿಗಾಗಿ ಕೆಂಪು ಕೋಟೆ (ಲಾಲ್ ಕಿಲಾ) ಮೆಟ್ರೋ ನಿಲ್ದಾಣವನ್ನು ಮುಚ್ಚಲಾಗಿದೆ. ಮೆಟ್ರೋ ಸಂಚಾರ ಎಂದಿನಂತೆ ಇರಲಿದೆ ಎಂದು ಡೆಲ್ಲಿ ಮೆಟ್ರೋ ರೈಲ್ ಕಾರ್ಪೋರೇಶನ್ ತಿಳಿಸಿದೆ. ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಕೆಂಪು ಕೋಟೆಯನ್ನು ಮೂರು ದಿನಗಳ ಕಾಲ ಮುಚ್ಚಲಿದೆ ಎಂದು ವರದಿಗಳು ಹೇಳಿವೆ.

ಕೆಂಪು ಕೋಟೆ ಬಳಿ ಸ್ಫೋಟದ ನಂತರ, ದೆಹಲಿ ಪೊಲೀಸರು ರಾತ್ರಿಯಿಡೀ ಘಟನಾ ಸ್ಥಳದ ಸುತ್ತಮುತ್ತಲಿನ ಹೋಟೆಲ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ದೆಹಲಿ ಸ್ಪೋಟದ ಬಳಿಕ ಮಹಾರಾಷ್ಟ್ರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಮುಂಬೈ ಸೇರಿದಂತೆ ಪ್ರಮುಖ ರೈಲು ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ನವದೆಹಲಿ| ಕೆಂಪು ಕೋಟೆ ಬಳಿ ಕಾರು ಸ್ಫೋಟ; 8 ಸಾವು, ಹಲವರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...