Homeಮುಖಪುಟ21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 15.3 ಸೆಂ.ಮಿ, ದಾಖಲೆ ಮಳೆ ಸುರಿದ ಪರಿಣಾಮ ಅಕ್ಷರಶಃ ನಲುಗಿಹೋಗಿದೆ. ಕಳೆದ 21 ವರ್ಷಗಳ ಅವಧಿಯಲ್ಲಿ ಭಾರೀ ಮಳೆಯಾಗಿದೆ.

ವರುಣನ ಆರ್ಭಟಕ್ಕೆ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಅವ್ಯವಸ್ಥೆಯನ್ನು ತಂದಿದೆ. ಹೀಗಾಗಿ ಹವಾಮಾನ ಇಲಾಖೆ ಶನಿವಾರ ಮಧ್ಯಾಹ್ನ ರೆಡ್ ಅಲರ್ಟ್ ನೀಡಿತ್ತು.

ಶನಿವಾರದಂತೆಯೇ, ಭಾನುವಾರ ಬೆಳಗ್ಗೆ ದೆಹಲಿಯು ಮಯೂರ್ ವಿಹಾರ್ ಹಂತ ಸೇರಿದಂತೆ ನಗರದ ಹಲವಾರು ಭಾಗಗಳಲ್ಲಿ ಜನರು ಮಳೆಯಿಂದ ಎಚ್ಚರವಾಗಿದ್ದಾರೆ. ಶನಿವಾರದ ಮಳೆಯನ್ನು ‘ಅತಿ ಭಾರೀ’ ವರ್ಗದಲ್ಲಿ ವರ್ಗೀಕರಿಸಲಾಗಿದೆ. ಶನಿವಾರ ಸಂಚಾರ ವಿಭಾಗಕ್ಕೆ ರಸ್ತೆ ಜಲಾವೃತ ಸಂಬಂಧ 56 ಮರಗಳು ಬಿದ್ದಿರುವ ಕುರಿತು 6 ಹಾಗೂ ಗುಂಡಿಗಳಿಗೆ ಸಂಬಂಧಿಸಿದ 5 ದೂರುಗಳು ಬಂದಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಜಲಾವೃತವಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಿಂದಲೂ ಭಾರಿ ನೀರು ನಿಂತಿದೆ. ಪಾಂಡವನಗರ ಅಂಡರ್‌ಪಾಸ್, ಪುರಾಣ ಕ್ವಿಲಾ ರಸ್ತೆ, ದ್ವಾರಕಾ ಲಿಂಕ್ ರಸ್ತೆ, ಶಿವಮೂರ್ತಿ ಬಳಿಯ NH-48, ರೋಹ್ಟಕ್ ರಸ್ತೆ, ವಿಕಾಸ್ ಮಾರ್ಗ, ಏಮ್ಸ್ ಮೇಲ್ಸೇತುವೆ ಅಡಿಯಲ್ಲಿ, ಮೂಲ್‌ಚಂದ್ ಮೇಲ್ಸೇತುವೆ ಅಡಿಯಲ್ಲಿ, ಮದರ್ ತೆರೇಸಾ ಕ್ರೆಸೆಂಟ್-ಸರ್ದಾರ್ ಪಟೇಲ್ ಮಾರ್ಗ ಮತ್ತು ತಿಲಕ್ ಅಡಿಯಲ್ಲಿ ನೀರು ನಿಂತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಜುಲೈನಲ್ಲಿ, ವಾಯುವ್ಯ ಭಾರತದಲ್ಲಿ ಪ್ರಸ್ತುತ ಸಾಮಾನ್ಯ ಮಾನ್ಸೂನ್ ಮಳೆ ದಾಖಲಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ”ವಾಯುವ್ಯ ಭಾರತದ ಬಹುತೇಕ ಭಾಗಗಳು ಈಗಾಗಲೇ ತಿಂಗಳ ಸಾಮಾನ್ಯ ಮಳೆಯ ಮಾರ್ಕ್ ಅನ್ನು ದಾಟಿವೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕಾಣಿಸುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

1982ರ ನಂತರ ದೆಹಲಿ ಕಂಡ ಅತ್ಯಂತ ದೊಡ್ಡ ಮಳೆ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 1982ರಲ್ಲಿ 16.9 ಸೆಂ.ಮೀ. ಮಳೆಯಾಗಿತ್ತು. 2003ರ ಜುಲೈ 10ರಂದು 13.34 ಸೆಂ.ಮೀ ಮಳೆಯಾಗಿತ್ತು. 1958ರ ಜುಲೈ 21ರಂದು 26.6 ಸೆಂ.ಮೀ.ನಷ್ಟು ಮಳೆಯಾದ ಕುರಿತು. ಐಎಂಡಿ ಮಾಹಿತಿ ನೀಡಿದೆ.

ಮುಂಗಾರಿಗೆ ಪಶ್ಚಿಮದಲ್ಲಿ ಆಗಿರುವ ಅಡಚಣೆ ಮತ್ತು ಮಾನ್ಸೂನ್ ಗಾಳಿ ಬೀಸಿದ ಪರಿಣಾಮ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದೆ, ದೆಹಲಿಯಲ್ಲಿ ಋತುಮಾನದ ಮೊದಲ ಭಾರೀ ಮಳೆ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

ದೆಹಲಿಯೊಂದಿಗೆ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ದಕ್ಷಿಣದಲ್ಲಿ ಕರ್ನಾಟಕ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...