Homeಮುಖಪುಟ21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 15.3 ಸೆಂ.ಮಿ, ದಾಖಲೆ ಮಳೆ ಸುರಿದ ಪರಿಣಾಮ ಅಕ್ಷರಶಃ ನಲುಗಿಹೋಗಿದೆ. ಕಳೆದ 21 ವರ್ಷಗಳ ಅವಧಿಯಲ್ಲಿ ಭಾರೀ ಮಳೆಯಾಗಿದೆ.

ವರುಣನ ಆರ್ಭಟಕ್ಕೆ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಅವ್ಯವಸ್ಥೆಯನ್ನು ತಂದಿದೆ. ಹೀಗಾಗಿ ಹವಾಮಾನ ಇಲಾಖೆ ಶನಿವಾರ ಮಧ್ಯಾಹ್ನ ರೆಡ್ ಅಲರ್ಟ್ ನೀಡಿತ್ತು.

ಶನಿವಾರದಂತೆಯೇ, ಭಾನುವಾರ ಬೆಳಗ್ಗೆ ದೆಹಲಿಯು ಮಯೂರ್ ವಿಹಾರ್ ಹಂತ ಸೇರಿದಂತೆ ನಗರದ ಹಲವಾರು ಭಾಗಗಳಲ್ಲಿ ಜನರು ಮಳೆಯಿಂದ ಎಚ್ಚರವಾಗಿದ್ದಾರೆ. ಶನಿವಾರದ ಮಳೆಯನ್ನು ‘ಅತಿ ಭಾರೀ’ ವರ್ಗದಲ್ಲಿ ವರ್ಗೀಕರಿಸಲಾಗಿದೆ. ಶನಿವಾರ ಸಂಚಾರ ವಿಭಾಗಕ್ಕೆ ರಸ್ತೆ ಜಲಾವೃತ ಸಂಬಂಧ 56 ಮರಗಳು ಬಿದ್ದಿರುವ ಕುರಿತು 6 ಹಾಗೂ ಗುಂಡಿಗಳಿಗೆ ಸಂಬಂಧಿಸಿದ 5 ದೂರುಗಳು ಬಂದಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಜಲಾವೃತವಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಿಂದಲೂ ಭಾರಿ ನೀರು ನಿಂತಿದೆ. ಪಾಂಡವನಗರ ಅಂಡರ್‌ಪಾಸ್, ಪುರಾಣ ಕ್ವಿಲಾ ರಸ್ತೆ, ದ್ವಾರಕಾ ಲಿಂಕ್ ರಸ್ತೆ, ಶಿವಮೂರ್ತಿ ಬಳಿಯ NH-48, ರೋಹ್ಟಕ್ ರಸ್ತೆ, ವಿಕಾಸ್ ಮಾರ್ಗ, ಏಮ್ಸ್ ಮೇಲ್ಸೇತುವೆ ಅಡಿಯಲ್ಲಿ, ಮೂಲ್‌ಚಂದ್ ಮೇಲ್ಸೇತುವೆ ಅಡಿಯಲ್ಲಿ, ಮದರ್ ತೆರೇಸಾ ಕ್ರೆಸೆಂಟ್-ಸರ್ದಾರ್ ಪಟೇಲ್ ಮಾರ್ಗ ಮತ್ತು ತಿಲಕ್ ಅಡಿಯಲ್ಲಿ ನೀರು ನಿಂತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಜುಲೈನಲ್ಲಿ, ವಾಯುವ್ಯ ಭಾರತದಲ್ಲಿ ಪ್ರಸ್ತುತ ಸಾಮಾನ್ಯ ಮಾನ್ಸೂನ್ ಮಳೆ ದಾಖಲಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ”ವಾಯುವ್ಯ ಭಾರತದ ಬಹುತೇಕ ಭಾಗಗಳು ಈಗಾಗಲೇ ತಿಂಗಳ ಸಾಮಾನ್ಯ ಮಳೆಯ ಮಾರ್ಕ್ ಅನ್ನು ದಾಟಿವೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕಾಣಿಸುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

1982ರ ನಂತರ ದೆಹಲಿ ಕಂಡ ಅತ್ಯಂತ ದೊಡ್ಡ ಮಳೆ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 1982ರಲ್ಲಿ 16.9 ಸೆಂ.ಮೀ. ಮಳೆಯಾಗಿತ್ತು. 2003ರ ಜುಲೈ 10ರಂದು 13.34 ಸೆಂ.ಮೀ ಮಳೆಯಾಗಿತ್ತು. 1958ರ ಜುಲೈ 21ರಂದು 26.6 ಸೆಂ.ಮೀ.ನಷ್ಟು ಮಳೆಯಾದ ಕುರಿತು. ಐಎಂಡಿ ಮಾಹಿತಿ ನೀಡಿದೆ.

ಮುಂಗಾರಿಗೆ ಪಶ್ಚಿಮದಲ್ಲಿ ಆಗಿರುವ ಅಡಚಣೆ ಮತ್ತು ಮಾನ್ಸೂನ್ ಗಾಳಿ ಬೀಸಿದ ಪರಿಣಾಮ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದೆ, ದೆಹಲಿಯಲ್ಲಿ ಋತುಮಾನದ ಮೊದಲ ಭಾರೀ ಮಳೆ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

ದೆಹಲಿಯೊಂದಿಗೆ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ದಕ್ಷಿಣದಲ್ಲಿ ಕರ್ನಾಟಕ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...