Homeಮುಖಪುಟ21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

21 ವರ್ಷಗಳಲ್ಲಿ ಸುರಿದ ದಾಖಲೆ ಮಳೆಗೆ ದೆಹಲಿ ತತ್ತರ; ರೆಡ್ ಅಲರ್ಟ್ ಘೋಷಣೆ

- Advertisement -
- Advertisement -

ದೆಹಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 15.3 ಸೆಂ.ಮಿ, ದಾಖಲೆ ಮಳೆ ಸುರಿದ ಪರಿಣಾಮ ಅಕ್ಷರಶಃ ನಲುಗಿಹೋಗಿದೆ. ಕಳೆದ 21 ವರ್ಷಗಳ ಅವಧಿಯಲ್ಲಿ ಭಾರೀ ಮಳೆಯಾಗಿದೆ.

ವರುಣನ ಆರ್ಭಟಕ್ಕೆ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಅವ್ಯವಸ್ಥೆಯನ್ನು ತಂದಿದೆ. ಹೀಗಾಗಿ ಹವಾಮಾನ ಇಲಾಖೆ ಶನಿವಾರ ಮಧ್ಯಾಹ್ನ ರೆಡ್ ಅಲರ್ಟ್ ನೀಡಿತ್ತು.

ಶನಿವಾರದಂತೆಯೇ, ಭಾನುವಾರ ಬೆಳಗ್ಗೆ ದೆಹಲಿಯು ಮಯೂರ್ ವಿಹಾರ್ ಹಂತ ಸೇರಿದಂತೆ ನಗರದ ಹಲವಾರು ಭಾಗಗಳಲ್ಲಿ ಜನರು ಮಳೆಯಿಂದ ಎಚ್ಚರವಾಗಿದ್ದಾರೆ. ಶನಿವಾರದ ಮಳೆಯನ್ನು ‘ಅತಿ ಭಾರೀ’ ವರ್ಗದಲ್ಲಿ ವರ್ಗೀಕರಿಸಲಾಗಿದೆ. ಶನಿವಾರ ಸಂಚಾರ ವಿಭಾಗಕ್ಕೆ ರಸ್ತೆ ಜಲಾವೃತ ಸಂಬಂಧ 56 ಮರಗಳು ಬಿದ್ದಿರುವ ಕುರಿತು 6 ಹಾಗೂ ಗುಂಡಿಗಳಿಗೆ ಸಂಬಂಧಿಸಿದ 5 ದೂರುಗಳು ಬಂದಿವೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಮಿಂಟೋ ಸೇತುವೆಯ ಅಂಡರ್‌ಪಾಸ್‌ನಲ್ಲಿ ವಾಹನ ಸಂಚಾರ ಬಂದ್‌ ಆಗಿದ್ದು, ಜಲಾವೃತವಾಗಿದೆ. ತಿಲಕ್ ಬ್ರಿಡ್ಜ್ ಅಂಡರ್‌ಪಾಸ್‌ನಿಂದಲೂ ಭಾರಿ ನೀರು ನಿಂತಿದೆ. ಪಾಂಡವನಗರ ಅಂಡರ್‌ಪಾಸ್, ಪುರಾಣ ಕ್ವಿಲಾ ರಸ್ತೆ, ದ್ವಾರಕಾ ಲಿಂಕ್ ರಸ್ತೆ, ಶಿವಮೂರ್ತಿ ಬಳಿಯ NH-48, ರೋಹ್ಟಕ್ ರಸ್ತೆ, ವಿಕಾಸ್ ಮಾರ್ಗ, ಏಮ್ಸ್ ಮೇಲ್ಸೇತುವೆ ಅಡಿಯಲ್ಲಿ, ಮೂಲ್‌ಚಂದ್ ಮೇಲ್ಸೇತುವೆ ಅಡಿಯಲ್ಲಿ, ಮದರ್ ತೆರೇಸಾ ಕ್ರೆಸೆಂಟ್-ಸರ್ದಾರ್ ಪಟೇಲ್ ಮಾರ್ಗ ಮತ್ತು ತಿಲಕ್ ಅಡಿಯಲ್ಲಿ ನೀರು ನಿಂತಿದೆ ಎಂದು ಸಂಚಾರ ಪೊಲೀಸರು ಹೇಳಿದ್ದಾರೆ.

ಜುಲೈನಲ್ಲಿ, ವಾಯುವ್ಯ ಭಾರತದಲ್ಲಿ ಪ್ರಸ್ತುತ ಸಾಮಾನ್ಯ ಮಾನ್ಸೂನ್ ಮಳೆ ದಾಖಲಾಗುವ ಲಕ್ಷಣಗಳು ಕಾಣುತ್ತಿವೆ ಎಂದು ಅಧಿಕಾರಿಗಳು ಸುಳಿವು ನೀಡಿದ್ದಾರೆ. ”ವಾಯುವ್ಯ ಭಾರತದ ಬಹುತೇಕ ಭಾಗಗಳು ಈಗಾಗಲೇ ತಿಂಗಳ ಸಾಮಾನ್ಯ ಮಳೆಯ ಮಾರ್ಕ್ ಅನ್ನು ದಾಟಿವೆ. ಇದೇ ರೀತಿಯ ತೀವ್ರತೆಯ ಮಳೆ ಇನ್ನೂ ಎರಡು ಮೂರು ದಿನಗಳವರೆಗೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ಕಾಣಿಸುತ್ತಿದೆ” ಎಂದು ಅಧಿಕಾರಿ ತಿಳಿಸಿದ್ದಾರೆ.

1982ರ ನಂತರ ದೆಹಲಿ ಕಂಡ ಅತ್ಯಂತ ದೊಡ್ಡ ಮಳೆ ಇದಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. 1982ರಲ್ಲಿ 16.9 ಸೆಂ.ಮೀ. ಮಳೆಯಾಗಿತ್ತು. 2003ರ ಜುಲೈ 10ರಂದು 13.34 ಸೆಂ.ಮೀ ಮಳೆಯಾಗಿತ್ತು. 1958ರ ಜುಲೈ 21ರಂದು 26.6 ಸೆಂ.ಮೀ.ನಷ್ಟು ಮಳೆಯಾದ ಕುರಿತು. ಐಎಂಡಿ ಮಾಹಿತಿ ನೀಡಿದೆ.

ಮುಂಗಾರಿಗೆ ಪಶ್ಚಿಮದಲ್ಲಿ ಆಗಿರುವ ಅಡಚಣೆ ಮತ್ತು ಮಾನ್ಸೂನ್ ಗಾಳಿ ಬೀಸಿದ ಪರಿಣಾಮ ದೆಹಲಿ ಸೇರಿದಂತೆ ಉತ್ತರ ಭಾರತದಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಸುರಿದಿದೆ, ದೆಹಲಿಯಲ್ಲಿ ಋತುಮಾನದ ಮೊದಲ ಭಾರೀ ಮಳೆ ಇದಾಗಿದೆ ಎಂದು ಇಲಾಖೆ ತಿಳಿಸಿದೆ.

ದೆಹಲಿಯೊಂದಿಗೆ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

ದಕ್ಷಿಣದಲ್ಲಿ ಕರ್ನಾಟಕ ಹಾಗೂ ಕೇರಳದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...