Homeಮುಖಪುಟದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

ದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವಿನ ಮುಸಕಿನ ಗುದ್ದಾಟ ಸೋಮವಾರ ಸ್ಪೋಟಗೊಂಡಿದೆ. ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಬಜೆಟ್‌ನ್ನು ತಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಬಜೆಟ್ ನಿಲ್ಲಿಸಬೇಡಿ” ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಬಜೆಟ್‌ನ್ನು ನಿಲ್ಲಿಸಲಾಗಿದೆ, ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ?” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಅವರು ಪ್ರಧಾನಿಗೆ ಪ್ರಶ್ನೆ ಮಾಡಿದ್ದಾರೆ.

”ದೆಹಲಿಯ ಜನರು ಬಜೆಟ್‌ನ್ನು ಅಂಗೀಕರಿಸಬೇಕು ಎಂದು ಕೈ ಜೋಡಿಸಿ ನಿಮ್ಮನ್ನು ಒತ್ತಾಯಿಸುತ್ತಾರೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇಂದು (ಮಾ.21) ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್‌ನ್ನು ಘೋಷಿಸಬೇಕಿತ್ತು. ಆದರೆ ಅದನ್ನು ಕೇಂದ್ರವು ನಿರ್ಬಂಧಿಸಿದೆ ಎಂದು ಹೇಳಿದ ಅರವಿಂದ್ ಕೇಜ್ರಿವಾಲ್ ಇದನ್ನು ಕೇಂದ್ರದ ”ಗೂಂಡಾಗಿರಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

ಎಎಪಿ ಸರ್ಕಾರದ ಬಜೆಟ್‌ನ್ನು ಕೇಂದ್ರ ಸರ್ಕಾರ ತಡೆದಿದೆ ಹಾಗಾಗಿ ಕೇಂದ್ರವನ್ನು ಪ್ರತಿನಿಧಿಸುವ ದೆಹಲಿಯ ರಾಜ್ಯಪಾಲ ವಿಕೆ ಸಕ್ಸೇನಾ ಅವರು, ಬಜೆಟ್‌ನ್ನು ಮರುಪರಿಶೀಲಿಸುವಂತೆ ಕೇಳಿದೆ ಎಂದು ಆರೋಪಿಸಲಾಗಿದೆ.

ಎಎಪಿ ಸರ್ಕಾರ ಜಾಹೀರಾತುಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿದ್ದು, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಕಡಿಮೆ ಹಣವನ್ನು ನಿಗದಿಪಡಿಸಿದೆ ಅದರ ವಿವರಣೆಯನ್ನು ಕೇಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿದೆ.

ಈ ಬಗ್ಗೆ ಆಡಳಿತ ಪಕ್ಷ ಪ್ರತಿಕ್ರಿಯಿಸಿದ್ದು, ”ಜಾಹೀರಾತುಗಳ ಮೇಲಿನ ಹಂಚಿಕೆಯನ್ನು ಹೆಚ್ಚಿಸಲಾಗಿಲ್ಲ ಮತ್ತು ಕಳೆದ ವರ್ಷದಂತೆಯೇ ಇದೆ ಎಂದು ಹೇಳಿದೆ. 78,800 ಕೋಟಿ ರೂ. ಮೊತ್ತದ ಬಜೆಟ್‌ನಲ್ಲಿ ಮೂಲಸೌಕರ್ಯ ವೆಚ್ಚಕ್ಕೆ 22,000 ಕೋಟಿ ರೂ. ಮತ್ತು ಜಾಹೀರಾತುಗಳಿಗಾಗಿ 550 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದು ಎಎಪಿ ವಿವರಿಸಿದೆ.

”ದೆಹಲಿಯ ಬಜೆಟ್ ಮಂಗಳವಾರ ಬೆಳಿಗ್ಗೆ ಬರಬೇಕಿತ್ತು, ಆದರೆ ಕೇಂದ್ರ ಸರ್ಕಾರ ನಮ್ಮ ಬಜೆಟ್‌ಗೆ ತಡೆ ನೀಡಿದೆ. ದೆಹಲಿಯ ಬಜೆಟ್ ಮಂಗಳವಾರ ಬರುವುದಿಲ್ಲ. ದೇಶದ ಇತಿಹಾಸದಲ್ಲೆ ರಾಜ್ಯವೊಂದರ ಬಜೆಟ್‌ನ್ನು ಕೇಂದ್ರ ತಡೆದಿದೆ” ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

”ಇಂದಿನಿಂದ ದೆಹಲಿ ಸರ್ಕಾರಿ ನೌಕರರು, ವೈದ್ಯರು ಮತ್ತು ಶಿಕ್ಷಕರು ತಮ್ಮ ಸಂಬಳವನ್ನು ಪಡೆಯುವುದಿಲ್ಲ… ಇದು ಕೇಂದ್ರದ ಬಹಿರಂವಾಗಿಯೇ ಗೂಂಡಾಗಿರಿ ನಡೆಸುವ ಕ್ರಮವಾಗಿದೆ” ಎಂದು ಕೇಜ್ರೀವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...