Homeಮುಖಪುಟದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

ದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವಿನ ಮುಸಕಿನ ಗುದ್ದಾಟ ಸೋಮವಾರ ಸ್ಪೋಟಗೊಂಡಿದೆ. ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಬಜೆಟ್‌ನ್ನು ತಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಬಜೆಟ್ ನಿಲ್ಲಿಸಬೇಡಿ” ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಬಜೆಟ್‌ನ್ನು ನಿಲ್ಲಿಸಲಾಗಿದೆ, ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ?” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಅವರು ಪ್ರಧಾನಿಗೆ ಪ್ರಶ್ನೆ ಮಾಡಿದ್ದಾರೆ.

”ದೆಹಲಿಯ ಜನರು ಬಜೆಟ್‌ನ್ನು ಅಂಗೀಕರಿಸಬೇಕು ಎಂದು ಕೈ ಜೋಡಿಸಿ ನಿಮ್ಮನ್ನು ಒತ್ತಾಯಿಸುತ್ತಾರೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇಂದು (ಮಾ.21) ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್‌ನ್ನು ಘೋಷಿಸಬೇಕಿತ್ತು. ಆದರೆ ಅದನ್ನು ಕೇಂದ್ರವು ನಿರ್ಬಂಧಿಸಿದೆ ಎಂದು ಹೇಳಿದ ಅರವಿಂದ್ ಕೇಜ್ರಿವಾಲ್ ಇದನ್ನು ಕೇಂದ್ರದ ”ಗೂಂಡಾಗಿರಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

ಎಎಪಿ ಸರ್ಕಾರದ ಬಜೆಟ್‌ನ್ನು ಕೇಂದ್ರ ಸರ್ಕಾರ ತಡೆದಿದೆ ಹಾಗಾಗಿ ಕೇಂದ್ರವನ್ನು ಪ್ರತಿನಿಧಿಸುವ ದೆಹಲಿಯ ರಾಜ್ಯಪಾಲ ವಿಕೆ ಸಕ್ಸೇನಾ ಅವರು, ಬಜೆಟ್‌ನ್ನು ಮರುಪರಿಶೀಲಿಸುವಂತೆ ಕೇಳಿದೆ ಎಂದು ಆರೋಪಿಸಲಾಗಿದೆ.

ಎಎಪಿ ಸರ್ಕಾರ ಜಾಹೀರಾತುಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿದ್ದು, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಕಡಿಮೆ ಹಣವನ್ನು ನಿಗದಿಪಡಿಸಿದೆ ಅದರ ವಿವರಣೆಯನ್ನು ಕೇಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿದೆ.

ಈ ಬಗ್ಗೆ ಆಡಳಿತ ಪಕ್ಷ ಪ್ರತಿಕ್ರಿಯಿಸಿದ್ದು, ”ಜಾಹೀರಾತುಗಳ ಮೇಲಿನ ಹಂಚಿಕೆಯನ್ನು ಹೆಚ್ಚಿಸಲಾಗಿಲ್ಲ ಮತ್ತು ಕಳೆದ ವರ್ಷದಂತೆಯೇ ಇದೆ ಎಂದು ಹೇಳಿದೆ. 78,800 ಕೋಟಿ ರೂ. ಮೊತ್ತದ ಬಜೆಟ್‌ನಲ್ಲಿ ಮೂಲಸೌಕರ್ಯ ವೆಚ್ಚಕ್ಕೆ 22,000 ಕೋಟಿ ರೂ. ಮತ್ತು ಜಾಹೀರಾತುಗಳಿಗಾಗಿ 550 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದು ಎಎಪಿ ವಿವರಿಸಿದೆ.

”ದೆಹಲಿಯ ಬಜೆಟ್ ಮಂಗಳವಾರ ಬೆಳಿಗ್ಗೆ ಬರಬೇಕಿತ್ತು, ಆದರೆ ಕೇಂದ್ರ ಸರ್ಕಾರ ನಮ್ಮ ಬಜೆಟ್‌ಗೆ ತಡೆ ನೀಡಿದೆ. ದೆಹಲಿಯ ಬಜೆಟ್ ಮಂಗಳವಾರ ಬರುವುದಿಲ್ಲ. ದೇಶದ ಇತಿಹಾಸದಲ್ಲೆ ರಾಜ್ಯವೊಂದರ ಬಜೆಟ್‌ನ್ನು ಕೇಂದ್ರ ತಡೆದಿದೆ” ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

”ಇಂದಿನಿಂದ ದೆಹಲಿ ಸರ್ಕಾರಿ ನೌಕರರು, ವೈದ್ಯರು ಮತ್ತು ಶಿಕ್ಷಕರು ತಮ್ಮ ಸಂಬಳವನ್ನು ಪಡೆಯುವುದಿಲ್ಲ… ಇದು ಕೇಂದ್ರದ ಬಹಿರಂವಾಗಿಯೇ ಗೂಂಡಾಗಿರಿ ನಡೆಸುವ ಕ್ರಮವಾಗಿದೆ” ಎಂದು ಕೇಜ್ರೀವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...