Homeಮುಖಪುಟದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

ದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವಿನ ಮುಸಕಿನ ಗುದ್ದಾಟ ಸೋಮವಾರ ಸ್ಪೋಟಗೊಂಡಿದೆ. ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಬಜೆಟ್‌ನ್ನು ತಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಬಜೆಟ್ ನಿಲ್ಲಿಸಬೇಡಿ” ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಬಜೆಟ್‌ನ್ನು ನಿಲ್ಲಿಸಲಾಗಿದೆ, ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ?” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಅವರು ಪ್ರಧಾನಿಗೆ ಪ್ರಶ್ನೆ ಮಾಡಿದ್ದಾರೆ.

”ದೆಹಲಿಯ ಜನರು ಬಜೆಟ್‌ನ್ನು ಅಂಗೀಕರಿಸಬೇಕು ಎಂದು ಕೈ ಜೋಡಿಸಿ ನಿಮ್ಮನ್ನು ಒತ್ತಾಯಿಸುತ್ತಾರೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇಂದು (ಮಾ.21) ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್‌ನ್ನು ಘೋಷಿಸಬೇಕಿತ್ತು. ಆದರೆ ಅದನ್ನು ಕೇಂದ್ರವು ನಿರ್ಬಂಧಿಸಿದೆ ಎಂದು ಹೇಳಿದ ಅರವಿಂದ್ ಕೇಜ್ರಿವಾಲ್ ಇದನ್ನು ಕೇಂದ್ರದ ”ಗೂಂಡಾಗಿರಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

ಎಎಪಿ ಸರ್ಕಾರದ ಬಜೆಟ್‌ನ್ನು ಕೇಂದ್ರ ಸರ್ಕಾರ ತಡೆದಿದೆ ಹಾಗಾಗಿ ಕೇಂದ್ರವನ್ನು ಪ್ರತಿನಿಧಿಸುವ ದೆಹಲಿಯ ರಾಜ್ಯಪಾಲ ವಿಕೆ ಸಕ್ಸೇನಾ ಅವರು, ಬಜೆಟ್‌ನ್ನು ಮರುಪರಿಶೀಲಿಸುವಂತೆ ಕೇಳಿದೆ ಎಂದು ಆರೋಪಿಸಲಾಗಿದೆ.

ಎಎಪಿ ಸರ್ಕಾರ ಜಾಹೀರಾತುಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿದ್ದು, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಕಡಿಮೆ ಹಣವನ್ನು ನಿಗದಿಪಡಿಸಿದೆ ಅದರ ವಿವರಣೆಯನ್ನು ಕೇಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿದೆ.

ಈ ಬಗ್ಗೆ ಆಡಳಿತ ಪಕ್ಷ ಪ್ರತಿಕ್ರಿಯಿಸಿದ್ದು, ”ಜಾಹೀರಾತುಗಳ ಮೇಲಿನ ಹಂಚಿಕೆಯನ್ನು ಹೆಚ್ಚಿಸಲಾಗಿಲ್ಲ ಮತ್ತು ಕಳೆದ ವರ್ಷದಂತೆಯೇ ಇದೆ ಎಂದು ಹೇಳಿದೆ. 78,800 ಕೋಟಿ ರೂ. ಮೊತ್ತದ ಬಜೆಟ್‌ನಲ್ಲಿ ಮೂಲಸೌಕರ್ಯ ವೆಚ್ಚಕ್ಕೆ 22,000 ಕೋಟಿ ರೂ. ಮತ್ತು ಜಾಹೀರಾತುಗಳಿಗಾಗಿ 550 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದು ಎಎಪಿ ವಿವರಿಸಿದೆ.

”ದೆಹಲಿಯ ಬಜೆಟ್ ಮಂಗಳವಾರ ಬೆಳಿಗ್ಗೆ ಬರಬೇಕಿತ್ತು, ಆದರೆ ಕೇಂದ್ರ ಸರ್ಕಾರ ನಮ್ಮ ಬಜೆಟ್‌ಗೆ ತಡೆ ನೀಡಿದೆ. ದೆಹಲಿಯ ಬಜೆಟ್ ಮಂಗಳವಾರ ಬರುವುದಿಲ್ಲ. ದೇಶದ ಇತಿಹಾಸದಲ್ಲೆ ರಾಜ್ಯವೊಂದರ ಬಜೆಟ್‌ನ್ನು ಕೇಂದ್ರ ತಡೆದಿದೆ” ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

”ಇಂದಿನಿಂದ ದೆಹಲಿ ಸರ್ಕಾರಿ ನೌಕರರು, ವೈದ್ಯರು ಮತ್ತು ಶಿಕ್ಷಕರು ತಮ್ಮ ಸಂಬಳವನ್ನು ಪಡೆಯುವುದಿಲ್ಲ… ಇದು ಕೇಂದ್ರದ ಬಹಿರಂವಾಗಿಯೇ ಗೂಂಡಾಗಿರಿ ನಡೆಸುವ ಕ್ರಮವಾಗಿದೆ” ಎಂದು ಕೇಜ್ರೀವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...