Homeಮುಖಪುಟದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

ದೆಹಲಿ ಬಜೆಟ್ ತಡೆದ ಕೇಂದ್ರ ಸರ್ಕಾರ: ಪ್ರಧಾನಿಗೆ ಕೇಜ್ರೀವಾಲ್ ಪತ್ರ

- Advertisement -
- Advertisement -

ಕೇಂದ್ರ ಸರ್ಕಾರ ಹಾಗೂ ದೆಹಲಿ ಎಎಪಿ ಸರ್ಕಾರದ ನಡುವಿನ ಮುಸಕಿನ ಗುದ್ದಾಟ ಸೋಮವಾರ ಸ್ಪೋಟಗೊಂಡಿದೆ. ಕೇಂದ್ರ ಬಿಜೆಪಿ ಸರ್ಕಾರ ದೆಹಲಿ ಬಜೆಟ್‌ನ್ನು ತಡೆದಿದೆ ಎಂದು ಆರೋಪಿಸಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ”ಬಜೆಟ್ ನಿಲ್ಲಿಸಬೇಡಿ” ಎಂದು ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜ್ಯ ಬಜೆಟ್‌ನ್ನು ನಿಲ್ಲಿಸಲಾಗಿದೆ, ನೀವು ದೆಹಲಿ ಜನರ ಮೇಲೆ ಏಕೆ ಕೋಪಗೊಂಡಿದ್ದೀರಿ?” ಎಂದು ದೆಹಲಿ ಸಿಎಂ ಕೇಜ್ರಿವಾಲ್ ಅವರು ಪ್ರಧಾನಿಗೆ ಪ್ರಶ್ನೆ ಮಾಡಿದ್ದಾರೆ.

”ದೆಹಲಿಯ ಜನರು ಬಜೆಟ್‌ನ್ನು ಅಂಗೀಕರಿಸಬೇಕು ಎಂದು ಕೈ ಜೋಡಿಸಿ ನಿಮ್ಮನ್ನು ಒತ್ತಾಯಿಸುತ್ತಾರೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಇಂದು (ಮಾ.21) ದೆಹಲಿ ವಿಧಾನಸಭೆಯಲ್ಲಿ ರಾಜ್ಯ ಬಜೆಟ್‌ನ್ನು ಘೋಷಿಸಬೇಕಿತ್ತು. ಆದರೆ ಅದನ್ನು ಕೇಂದ್ರವು ನಿರ್ಬಂಧಿಸಿದೆ ಎಂದು ಹೇಳಿದ ಅರವಿಂದ್ ಕೇಜ್ರಿವಾಲ್ ಇದನ್ನು ಕೇಂದ್ರದ ”ಗೂಂಡಾಗಿರಿ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

ಎಎಪಿ ಸರ್ಕಾರದ ಬಜೆಟ್‌ನ್ನು ಕೇಂದ್ರ ಸರ್ಕಾರ ತಡೆದಿದೆ ಹಾಗಾಗಿ ಕೇಂದ್ರವನ್ನು ಪ್ರತಿನಿಧಿಸುವ ದೆಹಲಿಯ ರಾಜ್ಯಪಾಲ ವಿಕೆ ಸಕ್ಸೇನಾ ಅವರು, ಬಜೆಟ್‌ನ್ನು ಮರುಪರಿಶೀಲಿಸುವಂತೆ ಕೇಳಿದೆ ಎಂದು ಆರೋಪಿಸಲಾಗಿದೆ.

ಎಎಪಿ ಸರ್ಕಾರ ಜಾಹೀರಾತುಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡಿದ್ದು, ಮೂಲಸೌಕರ್ಯ ಮತ್ತು ಇತರ ಅಭಿವೃದ್ಧಿ ಕೆಲಸಗಳಿಗೆ ಕಡಿಮೆ ಹಣವನ್ನು ನಿಗದಿಪಡಿಸಿದೆ ಅದರ ವಿವರಣೆಯನ್ನು ಕೇಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ಹೇಳಿದೆ.

ಈ ಬಗ್ಗೆ ಆಡಳಿತ ಪಕ್ಷ ಪ್ರತಿಕ್ರಿಯಿಸಿದ್ದು, ”ಜಾಹೀರಾತುಗಳ ಮೇಲಿನ ಹಂಚಿಕೆಯನ್ನು ಹೆಚ್ಚಿಸಲಾಗಿಲ್ಲ ಮತ್ತು ಕಳೆದ ವರ್ಷದಂತೆಯೇ ಇದೆ ಎಂದು ಹೇಳಿದೆ. 78,800 ಕೋಟಿ ರೂ. ಮೊತ್ತದ ಬಜೆಟ್‌ನಲ್ಲಿ ಮೂಲಸೌಕರ್ಯ ವೆಚ್ಚಕ್ಕೆ 22,000 ಕೋಟಿ ರೂ. ಮತ್ತು ಜಾಹೀರಾತುಗಳಿಗಾಗಿ 550 ಕೋಟಿ ರೂ. ನಿಗದಿಪಡಿಸಲಾಗಿದೆ ಎಂದು ಎಎಪಿ ವಿವರಿಸಿದೆ.

”ದೆಹಲಿಯ ಬಜೆಟ್ ಮಂಗಳವಾರ ಬೆಳಿಗ್ಗೆ ಬರಬೇಕಿತ್ತು, ಆದರೆ ಕೇಂದ್ರ ಸರ್ಕಾರ ನಮ್ಮ ಬಜೆಟ್‌ಗೆ ತಡೆ ನೀಡಿದೆ. ದೆಹಲಿಯ ಬಜೆಟ್ ಮಂಗಳವಾರ ಬರುವುದಿಲ್ಲ. ದೇಶದ ಇತಿಹಾಸದಲ್ಲೆ ರಾಜ್ಯವೊಂದರ ಬಜೆಟ್‌ನ್ನು ಕೇಂದ್ರ ತಡೆದಿದೆ” ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

”ಇಂದಿನಿಂದ ದೆಹಲಿ ಸರ್ಕಾರಿ ನೌಕರರು, ವೈದ್ಯರು ಮತ್ತು ಶಿಕ್ಷಕರು ತಮ್ಮ ಸಂಬಳವನ್ನು ಪಡೆಯುವುದಿಲ್ಲ… ಇದು ಕೇಂದ್ರದ ಬಹಿರಂವಾಗಿಯೇ ಗೂಂಡಾಗಿರಿ ನಡೆಸುವ ಕ್ರಮವಾಗಿದೆ” ಎಂದು ಕೇಜ್ರೀವಾಲ್ ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...