Homeರಾಷ್ಟ್ರದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ...

ದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ ವೈರಲ್

- Advertisement -
- Advertisement -

ದೆಹಲಿ ಕಾರ್ ಸ್ಫೋಟಕ್ಕೂ ಮೊದಲು ಉಗ್ರ ಡಾ. ಉಮರ್-ಉನ್-ನಬಿ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾತನಾಡಿದ್ದ ವಿಡಿಯೋವೊಂದು ಹೊರಬಿದ್ದಿದೆ. 

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳುತ್ತಾನೆ. ಜೊತೆಗೆ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ಕರೆದಿದ್ದಾರೆ. 

ಈ ಬಗ್ಗೆ ವಿವರಿಸುತ್ತಾ ಆತ್ಮಾಹತ್ಯಾ ಬಾಂಬ್ ದಾಳಿಯನ್ನು ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬ್ ದಾಳಿ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಆತ್ಮಹತ್ಯೆಗೆ ಇಸ್ಲಾಂನಲ್ಲಿ ವಿರೋಧವಿದೆ ಎನ್ನುತ್ತಾರೆ. ಆದರೆ ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ” ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾನೆ.

“ಹುತಾತ್ಮತೆ” ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾನೆ. ಅಲ್ಲದೆ “ಸಾವಿಗೆ ಭಯಪಡಬೇಡಿ” ಎಂದು ಸಹ ವೈದ್ಯ ಹೇಳುತ್ತಾನೆ. 

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು “ಹುತಾತ್ಮತೆ”ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಉಮರ್ ಆತ್ಮಹತ್ಯಾ ಬಾಂಬ್ ದಾಳಿ ಮತ್ತು “ಹುತಾತ್ಮತೆ” ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದನೆಂದು ತಿಳಿಯುತ್ತದೆ.ದಲ್ಲಿ

ಅಲ್ಲದೆ ಆಥ ಸಂಪೂರ್ಣವಾಗಿ ಮೂಲಭೂತವಾದಿಯಾಗಿದ್ದನೆಂಬುದನ್ನು ಸೂಚಿಸುತ್ತದೆ. ವಿಡಿಯೋದಲ್ಲಿ ಶಾಂತ, ಸಂಯಮದ ವ್ಯಕ್ತಿಯಂತೆ ಕಾಣಿಸುಕೊಂಡಿರುವ ಉಮರ್ ನಬಿ, ಆ ಮೂಲಕ ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...