Homeರಾಷ್ಟ್ರದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ...

ದೆಹಲಿ ಕಾರ್ ಸ್ಫೋಟ: ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದಿದ್ದ ಉಮರ್ ನಬಿ ವಿಡಿಯೋ ವೈರಲ್

- Advertisement -
- Advertisement -

ದೆಹಲಿ ಕಾರ್ ಸ್ಫೋಟಕ್ಕೂ ಮೊದಲು ಉಗ್ರ ಡಾ. ಉಮರ್-ಉನ್-ನಬಿ ಆತ್ಮಾಹುತಿ ಬಾಂಬ್ ದಾಳಿಯ ಬಗ್ಗೆ ಮಾತನಾಡಿದ್ದ ವಿಡಿಯೋವೊಂದು ಹೊರಬಿದ್ದಿದೆ. 

ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಬಳಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಜನ ಸಾವನ್ನಪ್ಪಿದ ಒಂದು ವಾರದ ನಂತರ, ಬಾಂಬರ್ ಡಾ. ಉಮರ್ ಮೊಹಮ್ಮದ್ ಅಲಿಯಾಸ್ ಉಮರ್-ಉನ್-ನಬಿ ಸ್ವತಃ ಮಾತನಾಡಿದ ಮತ್ತು ದಿನಾಂಕವಿಲ್ಲದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ. 

ಈ ವಿಡಿಯೋದಲ್ಲಿ, ಭಯೋತ್ಪಾದಕ ಉಮರ್ ಆತ್ಮಹುತಿ ಬಾಂಬ್ ದಾಳಿಯನ್ನು ನೀವು ಸರಿಯಾಗಿ ಅರ್ಥಮಾಡಿಕೊಂಡಿಲ್ಲ ಎಂದು ಹೇಳುತ್ತಾನೆ. ಜನರು ಮಾಡುವ ದೊಡ್ಡ ತಪ್ಪು ಎಂದರೆ ಬಾಂಬ್ ದಾಳಿ ಅಥವಾ ಆತ್ಮಹುತಿ ಬಾಂಬ್ ದಾಳಿಯ ಕಲ್ಪನೆ ನಿಜವಾಗಿಯೂ ಏನೆಂದು ಅರ್ಥಮಾಡಿಕೊಳ್ಳಲು ವಿಫಲವಾಗಿರುವುದು ಎಂದು ಹೇಳುತ್ತಾನೆ. ಜೊತೆಗೆ ಆತ್ಮಾಹುತಿ ಬಾಂಬ್ ದಾಳಿಯನ್ನು ಹುತಾತ್ಮ ಕಾರ್ಯಾಚರಣೆ ಎಂದು ಕರೆದಿದ್ದಾರೆ. 

ಈ ಬಗ್ಗೆ ವಿವರಿಸುತ್ತಾ ಆತ್ಮಾಹತ್ಯಾ ಬಾಂಬ್ ದಾಳಿಯನ್ನು ಬಹಳ ತಪ್ಪಾಗಿ ಅರ್ಥೈಸಿಕೊಳ್ಳಲಾಗಿದೆ. ಆತ್ಮಹತ್ಯಾ ಬಾಂಬ್ ದಾಳಿ ಪರಿಕಲ್ಪನೆಯನ್ನು ಸರಿಯಾಗಿ ಅರ್ಥೈಸಿಕೊಳ್ಳದ ಕಾರಣ ಆತ್ಮಹತ್ಯೆಗೆ ಇಸ್ಲಾಂನಲ್ಲಿ ವಿರೋಧವಿದೆ ಎನ್ನುತ್ತಾರೆ. ಆದರೆ ಇದು ಇಸ್ಲಾಂನಲ್ಲಿ ತಿಳಿದಿರುವ ಹುತಾತ್ಮ ಕಾರ್ಯಾಚರಣೆಯಾಗಿದೆ. ಈಗ, ಬಹು ವಿರೋಧಾಭಾಸಗಳಿವೆ; ಅದರ ವಿರುದ್ಧ ಹಲವಾರು ವಾದಗಳನ್ನು ತರಲಾಗಿದೆ” ಎಂದು ಯುವ ವೈದ್ಯ ವಿಡಿಯೋದಲ್ಲಿ ಹೇಳಿದ್ದಾನೆ.

“ಹುತಾತ್ಮತೆ” ಕಾರ್ಯಾಚರಣೆ ಎಂದರೆ ಒಬ್ಬ ವ್ಯಕ್ತಿಯು ಒಂದು ನಿರ್ದಿಷ್ಟ ಸ್ಥಳ ಮತ್ತು ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಗೊತ್ತಿರುತ್ತದೆ. ಆದರೆ ಯಾರೂ ಯಾವಾಗ ಅಥವಾ ಎಲ್ಲಿ ಸಾಯುತ್ತಾರೆ ಎಂಬುದನ್ನು ನಿಖರವಾಗಿ ಊಹಿಸಲು ಸಾಧ್ಯವಿಲ್ಲ ಮತ್ತು ಅದು ಯಾವಾಗ ಬೇಕಾದರೂ ಸಂಭವಿಸುತ್ತದೆ ಎಂದು ಉಮರ್ ಹೇಳುತ್ತಾನೆ. ಅಲ್ಲದೆ “ಸಾವಿಗೆ ಭಯಪಡಬೇಡಿ” ಎಂದು ಸಹ ವೈದ್ಯ ಹೇಳುತ್ತಾನೆ. 

ಇಸ್ಲಾಂನಲ್ಲಿ ಆತ್ಮಹತ್ಯೆಯನ್ನು ನಿಷೇಧಿಸಲಾಗಿದೆ. ಆದರೆ ಆತ್ಮಹತ್ಯಾ ಬಾಂಬ್ ದಾಳಿಯನ್ನು “ಹುತಾತ್ಮತೆ”ಯ ಕೃತ್ಯವೆಂದು ಉಮರ್ ವಿಡಿಯೋದಲ್ಲಿ ಸಮರ್ಥಿಸುತ್ತಿರುವಂತೆ ತೋರುತ್ತದೆ.

ಈ ವಿಡಿಯೋದಲ್ಲಿ, ಉಮರ್ ಇಂಗ್ಲಿಷ್‌ನಲ್ಲಿ ಮಾತನಾಡಿದ್ದು, ಸಾಕಷ್ಟು ಸ್ಪಷ್ಟವಾಗಿ ಹೇಳುವುದರಿಂದ ಉಮರ್ ಆತ್ಮಹತ್ಯಾ ಬಾಂಬ್ ದಾಳಿ ಮತ್ತು “ಹುತಾತ್ಮತೆ” ಯಂತಹ ವಿಷಯಗಳ ಬಗ್ಗೆ ಆಳವಾಗಿ ಯೋಚಿಸಿದ್ದನೆಂದು ತಿಳಿಯುತ್ತದೆ.ದಲ್ಲಿ

ಅಲ್ಲದೆ ಆಥ ಸಂಪೂರ್ಣವಾಗಿ ಮೂಲಭೂತವಾದಿಯಾಗಿದ್ದನೆಂಬುದನ್ನು ಸೂಚಿಸುತ್ತದೆ. ವಿಡಿಯೋದಲ್ಲಿ ಶಾಂತ, ಸಂಯಮದ ವ್ಯಕ್ತಿಯಂತೆ ಕಾಣಿಸುಕೊಂಡಿರುವ ಉಮರ್ ನಬಿ, ಆ ಮೂಲಕ ಘೋರ ಕೃತ್ಯವನ್ನು ಸಮರ್ಥಿಸಿಕೊಳ್ಳುವುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...