Homeಚಳವಳಿದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

ದೆಹಲಿ ಚಲೋ: ‌ಅನ್ನದಾತರಿಗೆ ಆತಿಥ್ಯ ನೀಡಿದ ರಾಷ್ಟ್ರ ರಾಜಧಾನಿಯ 25 ಮಸೀದಿಗಳು

- Advertisement -
- Advertisement -

ಕೇಂದ್ರದ ರೈತ ವಿರೋಧಿ ಕಾಯ್ದೆಗಳ ವಿರುದ್ದ ’ದೆಹಲಿ ಚಲೋ’ ಆಂದೋಲನದ ಮೂಲಕ ರಾಜಧಾನಿಗೆ ಹೊರಟ ರೈತರಿಗೆ ದೆಹಲಿಯ 25 ಮಸೀದಿಗಳು ಆಹಾರ ಸೇರಿದಂತೆ ರಾತ್ರಿಯ ತಂಗುವಿಕೆಗೆ ಬೇಕಾದ ವ್ಯವಸ್ಥೆ ಮಾಡಿ ಅನ್ನದಾತರಿಗೆ ಆತಿಥ್ಯ ನೀಡಿತು.

ಯುನೈಟೆಡ್ ಎಗೇನ್ಸ್ಟ್ ಹೇಟ್ (UAH) ನ ನದೀಮ್ ಖಾನ್‌ ನೇತೃತ್ವದ ತಂಡ ಈ ವ್ಯವಸ್ಥೆಯನ್ನು ಮಾಡಿದ್ದು, ಹೌಜ್ ಖಾಸ್, ಓಖ್ಲಾ, ಓಲ್ಡ್ ರೋಹ್ಟಕ್ ರಸ್ತೆ ಮತ್ತು ಓಲ್ಡ್ ದೆಹಲಿ ಎಂಬ ನಾಲ್ಕು ಸ್ಥಳಗಳಲ್ಲಿ ಆಹಾರ ತಯಾರಿಸಲಾಗಿತ್ತು.

“ನಮಗೆ ಎಲ್ಲಿಂದ ವಿನಂತಿಗಳು ಬಂದರೂ ನಾವು ಆಹಾರ ಪ್ಯಾಕೆಟ್‌ಗಳನ್ನು ಸ್ಥಳಗಳಿಗೆ ತಲುಪಿಸುತ್ತಿದ್ದೇವೆ. ಇದಲ್ಲದೆ, ಆಹಾರ ಪ್ಯಾಕೆಟ್‌ಗಳನ್ನು ಹೊಂದಿರುವ ನಮ್ಮ ವ್ಯಾನ್‌ಗಳು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುವ ಸ್ಥಳಗಳಿಗೆ ಹೋಗುತ್ತಿವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವಾಟರ್ ಜೆಟ್ ನಿಲ್ಲಿಸಿದ ರೈತ ಹೋರಾಟದ ‘ಹೀರೋ’ ಮೇಲೆ ಕೊಲೆಯತ್ನದ ಕೇಸು!

“ನಾವು ಬೇರೆ ಬೇರೆ ಸ್ಥಳಗಳಿಂದ ಕರೆಗಳನ್ನು ಸ್ವೀಕರಿಸುತ್ತಿದ್ದೇವೆ. ಯಾರೂ ಹಸಿವಾಗದಂತೆ ನೋಡಿಕೊಳ್ಳುವುದು ನಮ್ಮ ಉದ್ದೇಶ, ರೈತರಿಗೆ ಕಂಬಳಿ ಮತ್ತು ರಾತ್ರಿ ತಂಗಲು ಸಹ ಅವಕಾಶ ಕಲ್ಪಿಸಿದೆ. ದೆಹಲಿಯಾದ್ಯಂತ 25 ಮಸೀದಿಗಳು ಇದಕ್ಕಾಗಿ ಸಜ್ಜಾಗಿದೆ, ಅಲ್ಲಿ ರೈತರು ರಾತ್ರಿ ಕಳೆಯಬಹುದು. ನಮ್ಮ ಸ್ವಯಂಸೇವಕರು ರೈತರು ಎಲ್ಲಿ ಸಿಲುಕಿಕೊಂಡಿದ್ದಾರೋ ಅಲ್ಲಿಂದ ಅವರನ್ನು ಕರೆದುಕೊಂಡು ಹೋಗಲು ಮತ್ತು ರಾತ್ರಿ ವಾಸ್ತವ್ಯಕ್ಕಾಗಿ ಹತ್ತಿರದ ಮಸೀದಿಗೆ ಕರೆದೊಯ್ಯಲು ವಾಹನಗಳೊಂದಿಗೆ ಸಿದ್ಧರಾಗಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸುಮಾರು 500 ಕ್ಕೂ ಹೆಚ್ಚು ರೈತ ಸಂಘಟನೆಗಳ ಆಶ್ರಯದಲ್ಲಿ ರೈತ ವಿರೋಧಿ ಕಾನೂನನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26-27ರ ‘ದೆಹಲಿ ಚಲೋ’ ಮೆರವಣಿಗೆಯನ್ನು ಯೋಜಿಸಲಾಗಿತ್ತು. ದೆಹಲಿಗೆ ಪ್ರವೇಶಿಸುತ್ತಿದ್ದ ರೈತರ ಜಾಥವನ್ನು ಗಡಿಯಲ್ಲಿ ತಡೆಯಲಾಗಿತ್ತಾದರೂ, ಭಾರಿ ಪ್ರತಿಭಟನೆಗೆ ಮಣಿದ ಸರ್ಕಾರ ಅವರನ್ನು ರಾಜಧಾನಿ ಪ್ರವೇಶಿಸಲು ಅನುಮತಿ ನೀಡಿತು.

ಇದನ್ನೂ ಓದಿ: ಇದು ರೈತರ ಸಂಸ್ಕೃತಿ: ಲಾಠೀ ಚಾರ್ಜ್ ಮಾಡಿದ ಪೊಲೀಸ್‌ಗೆ ನೀರು ಕೊಟ್ಟ ರೈತನ ಫೋಟೊ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...