Homeಚಳವಳಿದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ದೆಹಲಿ ಚಲೋ: ತಾತ್ಕಾಲಿಕ ಜೈಲು ಮಾಡಲು ಕ್ರೀಡಾಂಗಣ ನೀಡುವುದಿಲ್ಲ ಎಂದ AAP ಸರ್ಕಾರ

ದೆಹಲಿ ಪೊಲೀಸರು ನಗರದ ಒಂಬತ್ತು ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಸಲು ಸರ್ಕಾರದಿಂದ ಅನುಮತಿ ಕೋರಿದ್ದರು.

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ‘ದೆಹಲಿ ಚಲೋ’ ಜಾಥಾ ದೆಹಲಿಯತ್ತ ಸಾಗುತ್ತಿದ್ದು ನಗರದ ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಪರಿವರ್ತಿಸಲು ದೆಹಲಿ ಪೊಲೀಸರಿಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್‌ ಆದ್ಮಿ ಸರ್ಕಾರ ಅನುಮತಿ ನಿರಾಕರಿಸಿದೆ.

ಬೆಳಿಗ್ಗೆಯಿಂದಲೇ ದೆಹಲಿಗೆ ಪ್ರವೇಶಿಸಲು ಯತ್ನಿಸುತ್ತಿದ್ದ ಪ್ರತಿಭಟನಾಕಾರ ರೈತರನ್ನು ಚದುರಿಸಲು ದೆಹಲಿ ಪೊಲೀಸರು ಅಶ್ರುವಾಯು ಬಳಸಿದ್ದಾರೆ.

ದೆಹಲಿ ಪೊಲೀಸರ ಮನವಿಯನ್ನು ತಿರಸ್ಕರಿಸಿದ ದೆಹಲಿ ಗೃಹ ಸಚಿವ ಸತ್ಯೇಂದರ್ ಜೈನ್, “ಪ್ರತಿ ಭಾರತೀಯ ಪ್ರಜೆಗೆ ಶಾಂತಿಯುತವಾಗಿ ಪ್ರತಿಭಟಿಸುವ ಸಾಂವಿಧಾನಿಕ ಹಕ್ಕಿದೆ. ಪ್ರತಿಭಟನಾಕಾರರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು, ರೈತರನ್ನು ಜೈಲುಗಳಲ್ಲಿ ಇಡುವುದು ಪರಿಹಾರವಲ್ಲ” ಎಂದು ಪ್ರಧಾನ ಗೃಹ ಕಾರ್ಯದರ್ಶಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರೈತರ ಪ್ರತಿಭಟನೆಗೆ ಮಣಿದ ಸರ್ಕಾರ: ಕೊನೆಗೂ ದೆಹಲಿ ಪ್ರವೇಶಿಸಲು ರೈತರಿಗೆ ಅನುಮತಿ

ಈ ಹಿಂದೆ ದೆಹಲಿ ಪೊಲೀಸರು ನಗರದ ಒಂಬತ್ತು ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಸಲು ಸರ್ಕಾರದಿಂದ ಅನುಮತಿ ಕೋರಿದ್ದರು.

“ರೈತರ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಬಂಧಿತ ರೈತರನ್ನು ಉಳಿಸಿಕೊಳ್ಳಲು ಒಂಬತ್ತು ಕ್ರೀಡಾಂಗಣಗಳನ್ನು ತಾತ್ಕಾಲಿಕ ಜೈಲುಗಳಾಗಿ ಬಳಸಲು ದೆಹಲಿ ಪೊಲೀಸರು ದೆಹಲಿ ಸರ್ಕಾರವನ್ನು ಕೇಳಿದ್ದಾರೆ” ಎಂದು ಮಾಧ್ಯಮಳು ನಿನ್ನೆ ವರದಿ ಮಾಡಿತ್ತು.

ಈತನ್ಮಧ್ಯೆ, ದೆಹಲಿ ಪೊಲೀಸರು ಭದ್ರತಾ ಸಿಬ್ಬಂದಿಯ ನಿಯೋಜನೆಯನ್ನು ಹೆಚ್ಚಿಸಿದ್ದು, ನೀರಿನ ಫಿರಂಗಿಗಳು ಸೇರಿದಂತೆ ಪ್ರತಿಭಟನಾಕಾರರು ನಗರಕ್ಕೆ ಪ್ರವೇಶಿಸದಂತೆ ದೆಹಲಿ-ಹರಿಯಾಣ ಗಡಿ ಬೇಲಿ ಹಾಕಲು ಮುಳ್ಳುತಂತಿಯನ್ನು ಬಳಸಿದ್ದಾರೆ. ಆಂದೋಲನ ನಡೆಸುತ್ತಿರುವ ರೈತರನ್ನು ದೆಹಲಿಗೆ ಪ್ರವೇಶಿಸಲು ಅವಕಾಶ ನೀಡುವುದಿಲ್ಲ ಎಂದು ಪೊಲೀಸರು ತಿಳಿಸಿದ್ದರಾದರೂ ಅದನ್ನೂ ಮೀರಿ ರೈತರು ದೆಹಲಿಯನ್ನು ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...