Homeಚಳವಳಿದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಾನಿಲ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರೈತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ ಶ್ರೀನಿವಾಸ್ ಪ್ರಸಾದ್- ಪಕ್ಷದಲ್ಲಿ ಬಿಕ್ಕಟ್ಟು?

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್‌ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.


ಇದನ್ನೂ ಓದಿ: ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...