Homeಚಳವಳಿದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಾನಿಲ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರೈತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ ಶ್ರೀನಿವಾಸ್ ಪ್ರಸಾದ್- ಪಕ್ಷದಲ್ಲಿ ಬಿಕ್ಕಟ್ಟು?

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್‌ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.


ಇದನ್ನೂ ಓದಿ: ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...