Homeಚಳವಳಿದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

ದೆಹಲಿ ಚಲೋ: ರೈತರ ಮೇಲೆ ಅಶ್ರುವಾಯು ದಾಳಿ ಮಾಡಿದ ಪೊಲೀಸರು; ಇಲ್ಲಿದೆ ವೀಡಿಯೋ!

- Advertisement -
- Advertisement -

ಕೇಂದ್ರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಹಮ್ಮಿಕೊಂಡಿದ್ದ ದೆಹಲಿ ಚಲೋ ಪ್ರತಿಭಟನೆಗೆ ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ಅಶ್ರುವಾಯು ಮತ್ತು ಜಲಾನಿಲ ದಾಳಿ ನಡೆಸಿ ಅವರನ್ನು ಗಡಿಯಲ್ಲಿಯೇ ತಡೆಯುತ್ತಿದ್ದಾರೆ. ಈಗಾಗಲೇ ಹಲವಾರು ರೈತರನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

ಇಂದು ದೇಶದಾದ್ಯಂತ ರೈತ-ಕಾರ್ಮಿಕ ಸಂಘಟನೆಗಳು ದೆಹಲಿ ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ. ಇದನ್ನು ಎದುರಿಸಲಾಗದೇ ಹರಿಯಾಣ ಸರ್ಕಾರ ತನ್ನೆಲ್ಲಾ ಗಡಿಗಳನ್ನು ಸೀಲ್ ಮಾಡಿಕೊಂಡಿದ್ದು, ರೈತರು ದೆಹಲಿಗೆ ತೆರಳದಂತೆ ತಡೆಯುತ್ತಿದೆ. ಮಧ್ಯಪ್ರದೇಶದಿಂದ ದೆಹಲಿಗೆ ರೈತರೊಂದಿಗೆ ತೆರಳುತ್ತಿದ್ದ ಸಾಮಾಜಿಕ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನೂ ಸಹ ಬಂಧಿಸಲಾಗಿದೆ.

ಇದನ್ನೂ ಓದಿ: ಯಡಿಯೂರಪ್ಪ ವಿರುದ್ದ ಅಸಮಾಧಾನ ಹೊರಹಾಕಿದ ಶ್ರೀನಿವಾಸ್ ಪ್ರಸಾದ್- ಪಕ್ಷದಲ್ಲಿ ಬಿಕ್ಕಟ್ಟು?

ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ್, ರಾಜಸ್ಥಾನ, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳಿಂದ ಸಾವಿರಾರು ರೈತರು ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ, ಕಾಲ್ನಡಿಗೆಯ ಮೂಲಕ ಮತ್ತು ವಿವಿಧ ವಾಹನಗಳ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಇವರನ್ನು ತಡೆಯುವ ಸಲುವಾಗಿ ಹರಿಯಾಣ ಮತ್ತು ದೆಹಲಿ ಗಡಿಗಳಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸ್‌ ಪಡೆಯನ್ನು ನೇಮಿಸಲಾಗಿದೆ. ದೆಹಲಿಯ ಗುರುಗ್ರಾಂ ಮತ್ತು ಫರೀದಾಬಾದ್‌ ಗಡಿಗಳಿಗೆ ಸೀಲ್ ಹಾಕಲಾಗಿದೆ. ಕೊರೊನಾ ಸೋಂಕಿನ ಹೆಚ್ಚಳದ ಕಾರಣ ನೀಡಿ ರಾಜಧಾನಿಯಲ್ಲಿ ಯಾವುದೆ ರ್ಯಾಲಿಗಳು ನಡೆಯಲು ಅವಕಾಶ ನೀಡುತ್ತಿಲ್ಲ ಎಂದು ಸರ್ಕಾರ ಹೇಳುತ್ತಿದೆ.

ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಆದೇಶದ ಮೇರೆಗೆ ಪಂಜಾಬ್ ಮತ್ತು ಹರಿಯಾಣ ಗಡಿಯನ್ನು 2 ದಿನಗಳವರೆಗೆ ಸೀಲ್ ಮಾಡಲಾಗಿದೆ. ನಿನ್ನೆ ರಾತ್ರಿ ಮೆರವಣಿಗೆ ಹೊರಟಿದ್ದ ರೈತರ ಮೇಲೆ ಜಲಫಿರಂಗಿಯನ್ನು ಬಳಸಿ ಅವರನ್ನು ತಡೆಯಲು ಪ್ರಯತ್ನಿಸಿದರು. ಆದರೂ ರೈತರು ತಮ್ಮ ಪ್ರತಿಭಟನೆ ಕೈಬಿಡಲಿಲ್ಲ.


ಇದನ್ನೂ ಓದಿ: ಟೊಯೋಟಾ ಕಿರ್ಲೋಸ್ಕರ್‌ ಕಾರ್ಮಿಕರ ಪ್ರತಿಭಟನೆ 17 ನೇ ದಿನಕ್ಕೆ; ಅಖಿಲ ಭಾರತ ಮುಷ್ಕರಕ್ಕೆ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...