Homeಮುಖಪುಟದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ಪೊಲೀಸರ, ಕೇಂದ್ರದ ಈ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನವೆಂಬರ್ 26-27 ರಂದು ದೆಹಲಿ ಚಲೋ ಹೋರಾಟ ನಡೆದೆ ನಡೆಯುತ್ತದೆ. ಈ ಹೋರಾಟಕ್ಕೆ ದೇಶಾದ್ಯಂತದ ಪ್ರಜ್ಞಾವಂತರು, ಸಾಮಾನ್ಯ ಜನ ಬೆಂಬಲಿಸಬೇಕು

- Advertisement -
- Advertisement -

ಕೇಂದ್ರದ ಮೂರು ಕೃಷಿ ಕಾಯ್ದೆಗಳು ಮತ್ತು ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ನವೆಂಬರ್ 26-27 ರಂದು ದೆಹಲಿ ಚಲೋ ನಡೆಯುತ್ತಿದ್ದು, ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಷ್ಕರ ವಿಫಲಗೊಳಿಸಲು ಹರಿಯಾಣದ ಡಜನ್‌ಗಟ್ಟಲೇ ರೈತ ಮುಂಡರನ್ನು ಅಕ್ರಮವಾಗಿ ಬಂಧಿಸಲಾಗುತ್ತಿದೆ ಎಂದು ಸ್ವರಾಜ್ ಇಂಡಿಯಾ ಪಕ್ಷದ ಅಧ್ಯಕ್ಷ ಯೋಗೇಂದ್ರ ಯಾದವ್ ಆರೋಪಿಸಿದ್ದಾರೆ.

ಇಂದು ಬೆಳಿಗ್ಗೆ ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಯೋಗೇಂದ್ರ ಯಾದವ್ “ನವೆಂಬರ್ 26-27ರ ದೆಹಲಿ ಚಲೋಗೆ ದೇಶಾದ್ಯಂತ ಸಿದ್ಧತೆಗಳು ನಡೆದಿವೆ. ಆದರೆ ನಿನ್ನೆ ರಾತ್ರಿ 12 ಗಂಟೆಯಿಂದ ಬೆಳಿಗ್ಗೆ 5 ಗಂಟೆ ನಡುವಿನ ಸಮಯದಲ್ಲಿ ಹರಿಯಾಣದಲ್ಲಿ ಡಜನ್‌ಗಟ್ಟಲೇ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ” ಎಂದಿದ್ದಾರೆ.

ರೈತ ಮುಖಂಡರ ಮೇಲೆ ಯಾವುದೇ ಗುರುತರ ಆರೋಪಗಳಿಲ್ಲದಿದ್ದರೂ ಬಂಧಿಸಲಾಗಿದೆ. ಸರ್ಕಾರ ಕೃಷಿ ಕಾಯ್ದೆಗಳ ವಿರುದ್ಧದ ಪ್ರತಿರೋಧವನ್ನು ತಡೆಗಟ್ಟಲು ಇಂತಹ ನೀಚಮಟ್ಟಕ್ಕೆ ಇಳಿದಿದೆ ಎಂದು ಯಾದವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸರ, ಕೇಂದ್ರದ ಈ ಬೆದರಿಕೆಗೆ ನಾವು ಬಗ್ಗುವುದಿಲ್ಲ. ನವೆಂಬರ್ 26-27 ರಂದು ದೆಹಲಿ ಚಲೋ ಹೋರಾಟ ನಡೆದೆ ನಡೆಯುತ್ತದೆ. ಈ ಹೋರಾಟಕ್ಕೆ ದೇಶಾದ್ಯಂತದ ಪ್ರಜ್ಞಾವಂತರು, ಸಾಮಾನ್ಯ ಜನ ಬೆಂಬಲಿಸಬೇಕು ಎಂದು ಯಾದವ್ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಾಗರಿಕರ ಹತ್ಯೆ, ಹೊಸ ಯುದ್ದವನ್ನು ಅಮೆರಿಕ ಜನತೆ ಬಯಸುವುದಿಲ್ಲ’ : ಇರಾನ್‌ ಮೇಲಿನ ದಾಳಿಯನ್ನು ಖಂಡಿಸಿದ ನ್ಯೂಯಾರ್ಕ್ ಮೇಯರ್‌ ಝೊಹ್ರಾನ್ ಮಮ್ದಾನಿ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲಿ ಮಿಲಿಟರಿ ನಡೆಸಿದ ದಾಳಿಗಳನ್ನು ನ್ಯೂಯಾರ್ಕ್ ನಗರದ ಮೇಯರ್ ಝೊಹ್ರಾನ್ ಮಮ್ದಾನಿ ಖಂಡಿಸಿದ್ದು, "ಅಕ್ರಮ ಆಕ್ರಮಣಕಾರಿ ಯುದ್ಧದಲ್ಲಿ ದುರಂತದ ಉಲ್ಬಣ" ಎಂದು ಹೇಳಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಇರಾನ್‌ನ ಶಾಲೆಗಳ ಮೇಲೆ ಇಸ್ರೇಲ್ ದಾಳಿ : ಮಕ್ಕಳು ಸೇರಿ 100ಕ್ಕೂ ಹೆಚ್ಚು ಜನರು ಸಾವು

ದಕ್ಷಿಣ ಇರಾನ್‌ನ ಹಾರ್ಮೋಜ್ಗನ್ ಪ್ರಾಂತ್ಯದ ಮಿನಾಬ್ ನಗರದ ಪ್ರಾಥಮಿಕ ಬಾಲಕಿಯರ ಶಾಲೆಯ ಮೇಲೆ ಶನಿವಾರ (ಫೆ.28) ಇಸ್ರೇಲ್ ನಡೆಸಿದ ದಾಳಿಯಲ್ಲಿ 108 ಜನರು ಸಾವನ್ನಪ್ಪಿದ್ದಾರೆ ಎಂದು ಅಲ್‌-ಜಝೀರಾ ವರದಿ ಮಾಡಿದೆ. ಮಿನಾಬ್‌ನಲ್ಲಿರುವ ಶಜರೆಹ್...

ಅಮೆರಿಕ- ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಪರಮೋಚ್ಚ ನಾಯಕ ಆಯತುಲ್ಲಾ ಅಲಿ ಖಮೇನಿ ಸಾವು : ದೃಢಪಡಿಸಿದ ಇರಾನ್

ಇಸ್ರೇಲ್- ಅಮೆರಿಕ ಶನಿವಾರ (ಫೆ.28) ಇರಾನ್‌ ಮೇಲೆ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್‌ನ ಪರಮೋಚ್ಚ ನಾಯಕ ಆಯಾತುಲ್ಲಾ ಅಲಿ ಖಮೇನಿ ಸಾವಿಗೀಡಾಗಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮ ದೃಢಪಡಿಸಿರುವುದಾಗಿ Al Jazeera...

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...