Homeಚಳವಳಿದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ದೆಹಲಿ ಚಲೋ: ರೈತ ಹೋರಾಟಕ್ಕೆ ಇಂಗ್ಲೇಂಡ್‌‌‌‌ನ 36 ಸಂಸದರ ಬೆಂಬಲ

ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು ಡಿಸೆಂಬರ್ 8 ರಂದು ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ.

- Advertisement -
- Advertisement -

ಇಂಗ್ಲೇಂಡ್‌‌ನ‌ ಲೇಬರ್ ಪಕ್ಷದ ತನ್ಮಂಜಿತ್ ಸಿಂಗ್ ಧೇಸಿ ನೇತೃತ್ವದ 36 ಸಂಸದರ ಬಣವು ಭಾರತದಲ್ಲಿ ನಡೆಯುತ್ತಿರುವ ರೈತರ ಆಂದೋಲನವನ್ನು ಬೆಂಬಲಿಸಿದ್ದು, ಇಂಗ್ಲೇಂಡ್‌ ವಿದೇಶಾಂಗ ಕಾರ್ಯದರ್ಶಿ ಡೊಮಿನಿಕ್ ರಾಬ್ ಅವರನ್ನು ಭಾರತದೊಂದಿಗೆ ಚರ್ಚಿಸುವಂತೆ ಪತ್ರ ಬರೆದಿದ್ದಾರೆ.

ಭಾರತದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ರೈತರು ಮತ್ತು ಕೃಷಿಯನ್ನು ಅವಲಂಬಿಸಿರುವವರನ್ನು ಶೋಷಿಸುತ್ತದೆ ಎಂದಿರುವ ಸಂಸದರ ತಂಡವು, ಕಾನೂನಿನ ವಿರುದ್ಧ ಭಾರತದ ಮೇಲೆ ಒತ್ತಡ ಹೇರಲು ಡೊಮಿನಿಕ್ ರಾಬ್ ಅವರನ್ನು ಕೇಳಿಕೊಂಡಿದ್ದಾರೆ.

ಇದನ್ನೂ ಓದಿ: ’ಐಕ್ಯ ಹೋರಾಟ ವೇದಿಕೆ’ಯಿಂದ ರೈತರ ಮೇಲಿನ ದೌರ್ಜನ್ಯ ವಿರೋಧಿಸಿ ರಾಜ್ಯವ್ಯಾಪಿ ಜನಾಂದೋಲನ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆ

ಕಳೆದ ತಿಂಗಳು ಹಲವಾರು ಸಂಸದರು ಮೂರು ಹೊಸ ಕೃಷಿ ಕಾನೂನುಗಳ ಪರಿಣಾಮಗಳ ಬಗ್ಗೆ ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ಗೆ ಪತ್ರ ಬರೆದಿದ್ದಾರೆ ಎಂದು ಸಂಸದ ತನ್ಮಂಜಿತ್ ಸಿಂಗ್ ಧೇಸಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

“ಕಾನೂನು ಭಾರತದ ರಾಜ್ಯಗಳ ಮೇಲೆ ಭಾರಿ ಪರಿಣಾಮ ಬೀರಲಿದೆ. ಅಲ್ಲದೆ ಇದು ಇಂಗ್ಲೇಂಡಿನಲ್ಲಿರುವ ಸಿಖ್‌ ಮತ್ತು ಪಂಜಾಬ್‌ಗೆ ಸಂಬಂಧಿಸಿರುವವರಿಗೆ ನಿರ್ದಿಷ್ಟ ಕಾಳಜಿಯ ವಿಷಯವಾಗಿದೆ” ಎಂದು ಅವರು ಹೇಳಿದ್ದಾರೆ.

“ಪಂಜಾಬಿ ಸಮುದಾಯವು ರಾಜ್ಯದ ಆರ್ಥಿಕ ರಚನೆಯ ಬೆನ್ನೆಲುಬಾಗಿ ವ್ಯಾಪಕವಾಗಿ ಗುರುತಿಸಲ್ಪಟ್ಟಿದ್ದು, ರೈತರ ಕಳವಳಗಳು ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯದಲ್ಲಿ ಪ್ರಬಲ ವಿಷಯವಾಗಿದೆ. ಕಾನೂನಿಂದಾಗಿ ಪಂಜಾಬ್‌ನಲ್ಲಿ ಪರಿಸ್ಥಿತಿ ಹದಗೆಡುತ್ತಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ತುರ್ತಾಗಿ ಚರ್ಚಿಸಬೇಕು” ಎಂದು ಡೊಮಿನಿಕ್ ರಾಬ್ ಅವರೊಂದಿಗೆ ಪತ್ರವು ಒತ್ತಾಯಿಸಿದೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ದೆಹಲಿಯ ಗಡಿಯಲ್ಲಿ ಕಳೆದ 10 ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರ ನಡೆಸಿರುವ ನಾಲ್ಕು ಸುತ್ತಿನ ಮಾತುಕತೆ ಮುರಿದು ಬಿದ್ದಿದ್ದು, ಆಕ್ರೋಶ ಭರಿತ ರೈತರು ಇನ್ನು ಮುಂದೆ ಕೇಂದ್ರ ಸರ್ಕಾರದೊಂದಿಗೆ ಮಾತುಕತೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈತರು ತಮ್ಮ ಹೋರಾಟವನ್ನು ತೀವ್ರಗೊಳಿಸಲು ತೀರ್ಮಾನಿಸಿದ್ದು ಡಿಸೆಂಬರ್ 8 ರಂದು ಮಂಗಳವಾರ ಭಾರತ್‌ ಬಂದ್‌ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: ರೈತರನ್ನು ರಾಷ್ಟ್ರ ವಿರೋಧಿಗಳಂತೆ ಬಿಂಬಿಸಬೇಡಿ: ಮಾಧ್ಯಮಗಳಿಗೆ ಎಡಿಟರ್ಸ್ ಗಿಲ್ಡ್ ಸಲಹೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...