Homeಮುಖಪುಟ'ದೆಹಲಿ ಚಲೋ' ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

‘ದೆಹಲಿ ಚಲೋ’ ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

- Advertisement -
- Advertisement -

ಎಮ್‌ಎಸ್‌ಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ನ ರೈತರ ಗುಂಪು ದೆಹಲಿಗೆ ತಮ್ಮ ಮೆರವಣಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ, ಭಾನುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಬಲಪಡಿಸುವ ಮೂಲಕ ಅವರನ್ನು ತಡೆದರು. ಲಾಠಿಗಳ ಶಂಭು ಗಡಿಯಿಂದ ಹರಿಯಾಣಕ್ಕೆ ಬರುತ್ತಿರುವ ರೈತರನ್ನು ತಡೆಯಲು ಲಾಠಿ ಚಾರ್ಜ್ ಬದಲಿಗೆ ಭದ್ರತಾ ಸಿಬ್ಬಂದಿ ಕೆಲವು ವಿನೂತನ ತಂತ್ರಗಳನ್ನು ಬಳಸಿದ್ದಾರೆ.

ಬ್ಯಾರಿಕೇಡಿಂಗ್ ಪಾಯಿಂಟ್‌ನಿಂದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ನಿಯಮಿತ ಮಧ್ಯಂತರದಲ್ಲಿ ಅಶ್ರುವಾಯು ಶೆಲ್‌ಗಳನ್ನು ಹಾರಿಸುತ್ತಿದ್ದಾರೆ. ಪ್ರತಿಯೊಬ್ಬ ರೈತರು ಸ್ಥಳಕ್ಕೆ ಬಂದಾಗಲೆಲ್ಲಾ ಪೊಲೀಸರು ಪೆಪ್ಪರ್ ಸ್ಪ್ರೇ ಬಳಸುತ್ತಿದ್ದಾರೆ.

ರೈತರೂ ಸಹ ಸಂಪೂರ್ಣ ಸಜ್ಜಾಗಿ ಬಂದಿದ್ದಾರೆ. ಅಶ್ರುವಾಯು ಪರಿಣಾಮಗಳನ್ನು ತಗ್ಗಿಸಲು ಅವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ರಕ್ಷಣಾತ್ಮಕ ಕನ್ನಡಕಗಳನ್ನು ಸಹ ಧರಿಸಿದ್ದು, ನೀರಿನಂದ ನೆನೆಸಿದ ಸೆಣಬಿನ ಚೀಲಗಳಿಂದ ದೇಹ ಮುಚ್ಚಿದ ಮೂಲಕ ಅಶ್ರುವಾಯು ಶೆಲ್‌ಗಳನ್ನು ಎದುರಿಸಲು ಪ್ರಯತ್ನಿಸುತ್ತಿದ್ದಾರೆ.

101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿತು, ಅವರು ಫೆಬ್ರವರಿಯಲ್ಲಿ ರಾಜಧಾನಿಗೆ ಮೆರವಣಿಗೆ ಮಾಡುವ ಮೊದಲ ಪ್ರಯತ್ನ ವಿಫಲವಾದಾಗಿನಿಂದ ಅವರು ಗಡಿಯಲ್ಲಿದ್ದರು. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಒತ್ತಾಯಿಸುತ್ತಿದ್ದಾರೆ.

ದೆಹಲಿಗೆ ಮೆರವಣಿಗೆಗೆ ಲಿಖಿತ ಅನುಮತಿಯನ್ನು ತೋರಿಸಲು ಪೊಲೀಸರು ರೈತರಿಗೆ ಕೇಳಿದರು. ಮೆರವಣಿಗೆಯಲ್ಲಿ ಭಾಗವಹಿಸಲು ಅನುಮತಿಸಲಾದ 101 ರೈತರ ಪಟ್ಟಿಗೆ ರೈತರ ಗುಂಪು ಹೊಂದಿಕೆಯಾಗುತ್ತಿಲ್ಲ ಎಂದು ಅವರು ಹೇಳಿದರು.

“ನಾವು ಮೊದಲು ಅವರನ್ನು (ರೈತರನ್ನು) ಗುರುತಿಸುತ್ತೇವೆ ಮತ್ತು ನಂತರ ನಾವು ಅವರಿಗೆ ಮುಂದುವರಿಯಲು ಅವಕಾಶ ನೀಡಬಹುದು. ನಮ್ಮಲ್ಲಿ 101 ರೈತರ ಹೆಸರುಗಳ ಪಟ್ಟಿ ಇದೆ, ಬಂದವರು ಅವರಲ್ಲ. ಅವರು ನಮ್ಮನ್ನು ಗುರುತಿಸಲು ಬಿಡುತ್ತಿಲ್ಲ, ಮುಂದೆ ಸಾಗುತ್ತಿದ್ದಾರೆ” ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಪೊಲೀಸರು ತಪ್ಪು ಪಟ್ಟಿ ಪಡೆದಿರಬಹುದು ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದರು.

“ನಮ್ಮ 101 ರೈತರು ಮತ್ತು ಕಾರ್ಮಿಕರ ಪಟ್ಟಿಯನ್ನು ಈಗಾಗಲೇ ನೀಡಿದ್ದೇವೆ, ಅವರು (ಪೊಲೀಸರು) ನಮಗೆ ಸ್ಥಳಾಂತರಗೊಳ್ಳಲು ಅನುಮತಿಸುವ ಮೊದಲು ಐಡಿಗಳನ್ನು ಪರಿಶೀಲಿಸುವುದಾಗಿ ನಿರ್ಧರಿಸಿದ್ದರೆ, ನಾವು ಅದಕ್ಕೆ ಸಹಕರಿಸುತ್ತೇವೆ ಎಂದು ಅವರು ನಮಗೆ ತಿಳಿಸಬೇಕು. ನಾವು ಶಿಸ್ತನ್ನು ತೋರಿಸಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ… ಗಾಳಿಯ ದಿಕ್ಕು ನಮ್ಮ ಕಡೆಗೆ ಇರುವುದರಿಂದ ಅವರು ಇಂದು ಹೆಚ್ಚು ಅಶ್ರುವಾಯು ಬಳಸುತ್ತಿದ್ದಾರೆ. ಯಾವುದೇ ರೀತಿಯ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ.. ನಮ್ಮ ಸಮಸ್ಯೆಗಳಿಗೆ ಪ್ರಧಾನಿ ಅವರ ಬಳಿ ಪರಿಹಾರವಿದೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್ ಹೇಳಿದರು.

ಇದನ್ನೂ ಓದಿ; ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...