Homeಮುಖಪುಟ'ದೆಹಲಿ ಚಲೋ' ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

‘ದೆಹಲಿ ಚಲೋ’ ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

- Advertisement -
- Advertisement -

ಎಮ್‌ಎಸ್‌ಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ನ ರೈತರ ಗುಂಪು ದೆಹಲಿಗೆ ತಮ್ಮ ಮೆರವಣಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ, ಭಾನುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಬಲಪಡಿಸುವ ಮೂಲಕ ಅವರನ್ನು ತಡೆದರು. ಲಾಠಿಗಳ ಶಂಭು ಗಡಿಯಿಂದ ಹರಿಯಾಣಕ್ಕೆ ಬರುತ್ತಿರುವ ರೈತರನ್ನು ತಡೆಯಲು ಲಾಠಿ ಚಾರ್ಜ್ ಬದಲಿಗೆ ಭದ್ರತಾ ಸಿಬ್ಬಂದಿ ಕೆಲವು ವಿನೂತನ ತಂತ್ರಗಳನ್ನು ಬಳಸಿದ್ದಾರೆ.

ಬ್ಯಾರಿಕೇಡಿಂಗ್ ಪಾಯಿಂಟ್‌ನಿಂದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ನಿಯಮಿತ ಮಧ್ಯಂತರದಲ್ಲಿ ಅಶ್ರುವಾಯು ಶೆಲ್‌ಗಳನ್ನು ಹಾರಿಸುತ್ತಿದ್ದಾರೆ. ಪ್ರತಿಯೊಬ್ಬ ರೈತರು ಸ್ಥಳಕ್ಕೆ ಬಂದಾಗಲೆಲ್ಲಾ ಪೊಲೀಸರು ಪೆಪ್ಪರ್ ಸ್ಪ್ರೇ ಬಳಸುತ್ತಿದ್ದಾರೆ.

ರೈತರೂ ಸಹ ಸಂಪೂರ್ಣ ಸಜ್ಜಾಗಿ ಬಂದಿದ್ದಾರೆ. ಅಶ್ರುವಾಯು ಪರಿಣಾಮಗಳನ್ನು ತಗ್ಗಿಸಲು ಅವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ರಕ್ಷಣಾತ್ಮಕ ಕನ್ನಡಕಗಳನ್ನು ಸಹ ಧರಿಸಿದ್ದು, ನೀರಿನಂದ ನೆನೆಸಿದ ಸೆಣಬಿನ ಚೀಲಗಳಿಂದ ದೇಹ ಮುಚ್ಚಿದ ಮೂಲಕ ಅಶ್ರುವಾಯು ಶೆಲ್‌ಗಳನ್ನು ಎದುರಿಸಲು ಪ್ರಯತ್ನಿಸುತ್ತಿದ್ದಾರೆ.

101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿತು, ಅವರು ಫೆಬ್ರವರಿಯಲ್ಲಿ ರಾಜಧಾನಿಗೆ ಮೆರವಣಿಗೆ ಮಾಡುವ ಮೊದಲ ಪ್ರಯತ್ನ ವಿಫಲವಾದಾಗಿನಿಂದ ಅವರು ಗಡಿಯಲ್ಲಿದ್ದರು. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಒತ್ತಾಯಿಸುತ್ತಿದ್ದಾರೆ.

ದೆಹಲಿಗೆ ಮೆರವಣಿಗೆಗೆ ಲಿಖಿತ ಅನುಮತಿಯನ್ನು ತೋರಿಸಲು ಪೊಲೀಸರು ರೈತರಿಗೆ ಕೇಳಿದರು. ಮೆರವಣಿಗೆಯಲ್ಲಿ ಭಾಗವಹಿಸಲು ಅನುಮತಿಸಲಾದ 101 ರೈತರ ಪಟ್ಟಿಗೆ ರೈತರ ಗುಂಪು ಹೊಂದಿಕೆಯಾಗುತ್ತಿಲ್ಲ ಎಂದು ಅವರು ಹೇಳಿದರು.

“ನಾವು ಮೊದಲು ಅವರನ್ನು (ರೈತರನ್ನು) ಗುರುತಿಸುತ್ತೇವೆ ಮತ್ತು ನಂತರ ನಾವು ಅವರಿಗೆ ಮುಂದುವರಿಯಲು ಅವಕಾಶ ನೀಡಬಹುದು. ನಮ್ಮಲ್ಲಿ 101 ರೈತರ ಹೆಸರುಗಳ ಪಟ್ಟಿ ಇದೆ, ಬಂದವರು ಅವರಲ್ಲ. ಅವರು ನಮ್ಮನ್ನು ಗುರುತಿಸಲು ಬಿಡುತ್ತಿಲ್ಲ, ಮುಂದೆ ಸಾಗುತ್ತಿದ್ದಾರೆ” ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಪೊಲೀಸರು ತಪ್ಪು ಪಟ್ಟಿ ಪಡೆದಿರಬಹುದು ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದರು.

“ನಮ್ಮ 101 ರೈತರು ಮತ್ತು ಕಾರ್ಮಿಕರ ಪಟ್ಟಿಯನ್ನು ಈಗಾಗಲೇ ನೀಡಿದ್ದೇವೆ, ಅವರು (ಪೊಲೀಸರು) ನಮಗೆ ಸ್ಥಳಾಂತರಗೊಳ್ಳಲು ಅನುಮತಿಸುವ ಮೊದಲು ಐಡಿಗಳನ್ನು ಪರಿಶೀಲಿಸುವುದಾಗಿ ನಿರ್ಧರಿಸಿದ್ದರೆ, ನಾವು ಅದಕ್ಕೆ ಸಹಕರಿಸುತ್ತೇವೆ ಎಂದು ಅವರು ನಮಗೆ ತಿಳಿಸಬೇಕು. ನಾವು ಶಿಸ್ತನ್ನು ತೋರಿಸಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ… ಗಾಳಿಯ ದಿಕ್ಕು ನಮ್ಮ ಕಡೆಗೆ ಇರುವುದರಿಂದ ಅವರು ಇಂದು ಹೆಚ್ಚು ಅಶ್ರುವಾಯು ಬಳಸುತ್ತಿದ್ದಾರೆ. ಯಾವುದೇ ರೀತಿಯ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ.. ನಮ್ಮ ಸಮಸ್ಯೆಗಳಿಗೆ ಪ್ರಧಾನಿ ಅವರ ಬಳಿ ಪರಿಹಾರವಿದೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್ ಹೇಳಿದರು.

ಇದನ್ನೂ ಓದಿ; ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...