Homeಮುಖಪುಟ'ದೆಹಲಿ ಚಲೋ' ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

‘ದೆಹಲಿ ಚಲೋ’ ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

- Advertisement -
- Advertisement -

ಎಮ್‌ಎಸ್‌ಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ನ ರೈತರ ಗುಂಪು ದೆಹಲಿಗೆ ತಮ್ಮ ಮೆರವಣಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ, ಭಾನುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಬಲಪಡಿಸುವ ಮೂಲಕ ಅವರನ್ನು ತಡೆದರು. ಲಾಠಿಗಳ ಶಂಭು ಗಡಿಯಿಂದ ಹರಿಯಾಣಕ್ಕೆ ಬರುತ್ತಿರುವ ರೈತರನ್ನು ತಡೆಯಲು ಲಾಠಿ ಚಾರ್ಜ್ ಬದಲಿಗೆ ಭದ್ರತಾ ಸಿಬ್ಬಂದಿ ಕೆಲವು ವಿನೂತನ ತಂತ್ರಗಳನ್ನು ಬಳಸಿದ್ದಾರೆ.

ಬ್ಯಾರಿಕೇಡಿಂಗ್ ಪಾಯಿಂಟ್‌ನಿಂದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ನಿಯಮಿತ ಮಧ್ಯಂತರದಲ್ಲಿ ಅಶ್ರುವಾಯು ಶೆಲ್‌ಗಳನ್ನು ಹಾರಿಸುತ್ತಿದ್ದಾರೆ. ಪ್ರತಿಯೊಬ್ಬ ರೈತರು ಸ್ಥಳಕ್ಕೆ ಬಂದಾಗಲೆಲ್ಲಾ ಪೊಲೀಸರು ಪೆಪ್ಪರ್ ಸ್ಪ್ರೇ ಬಳಸುತ್ತಿದ್ದಾರೆ.

ರೈತರೂ ಸಹ ಸಂಪೂರ್ಣ ಸಜ್ಜಾಗಿ ಬಂದಿದ್ದಾರೆ. ಅಶ್ರುವಾಯು ಪರಿಣಾಮಗಳನ್ನು ತಗ್ಗಿಸಲು ಅವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ರಕ್ಷಣಾತ್ಮಕ ಕನ್ನಡಕಗಳನ್ನು ಸಹ ಧರಿಸಿದ್ದು, ನೀರಿನಂದ ನೆನೆಸಿದ ಸೆಣಬಿನ ಚೀಲಗಳಿಂದ ದೇಹ ಮುಚ್ಚಿದ ಮೂಲಕ ಅಶ್ರುವಾಯು ಶೆಲ್‌ಗಳನ್ನು ಎದುರಿಸಲು ಪ್ರಯತ್ನಿಸುತ್ತಿದ್ದಾರೆ.

101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿತು, ಅವರು ಫೆಬ್ರವರಿಯಲ್ಲಿ ರಾಜಧಾನಿಗೆ ಮೆರವಣಿಗೆ ಮಾಡುವ ಮೊದಲ ಪ್ರಯತ್ನ ವಿಫಲವಾದಾಗಿನಿಂದ ಅವರು ಗಡಿಯಲ್ಲಿದ್ದರು. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಒತ್ತಾಯಿಸುತ್ತಿದ್ದಾರೆ.

ದೆಹಲಿಗೆ ಮೆರವಣಿಗೆಗೆ ಲಿಖಿತ ಅನುಮತಿಯನ್ನು ತೋರಿಸಲು ಪೊಲೀಸರು ರೈತರಿಗೆ ಕೇಳಿದರು. ಮೆರವಣಿಗೆಯಲ್ಲಿ ಭಾಗವಹಿಸಲು ಅನುಮತಿಸಲಾದ 101 ರೈತರ ಪಟ್ಟಿಗೆ ರೈತರ ಗುಂಪು ಹೊಂದಿಕೆಯಾಗುತ್ತಿಲ್ಲ ಎಂದು ಅವರು ಹೇಳಿದರು.

“ನಾವು ಮೊದಲು ಅವರನ್ನು (ರೈತರನ್ನು) ಗುರುತಿಸುತ್ತೇವೆ ಮತ್ತು ನಂತರ ನಾವು ಅವರಿಗೆ ಮುಂದುವರಿಯಲು ಅವಕಾಶ ನೀಡಬಹುದು. ನಮ್ಮಲ್ಲಿ 101 ರೈತರ ಹೆಸರುಗಳ ಪಟ್ಟಿ ಇದೆ, ಬಂದವರು ಅವರಲ್ಲ. ಅವರು ನಮ್ಮನ್ನು ಗುರುತಿಸಲು ಬಿಡುತ್ತಿಲ್ಲ, ಮುಂದೆ ಸಾಗುತ್ತಿದ್ದಾರೆ” ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಪೊಲೀಸರು ತಪ್ಪು ಪಟ್ಟಿ ಪಡೆದಿರಬಹುದು ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದರು.

“ನಮ್ಮ 101 ರೈತರು ಮತ್ತು ಕಾರ್ಮಿಕರ ಪಟ್ಟಿಯನ್ನು ಈಗಾಗಲೇ ನೀಡಿದ್ದೇವೆ, ಅವರು (ಪೊಲೀಸರು) ನಮಗೆ ಸ್ಥಳಾಂತರಗೊಳ್ಳಲು ಅನುಮತಿಸುವ ಮೊದಲು ಐಡಿಗಳನ್ನು ಪರಿಶೀಲಿಸುವುದಾಗಿ ನಿರ್ಧರಿಸಿದ್ದರೆ, ನಾವು ಅದಕ್ಕೆ ಸಹಕರಿಸುತ್ತೇವೆ ಎಂದು ಅವರು ನಮಗೆ ತಿಳಿಸಬೇಕು. ನಾವು ಶಿಸ್ತನ್ನು ತೋರಿಸಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ… ಗಾಳಿಯ ದಿಕ್ಕು ನಮ್ಮ ಕಡೆಗೆ ಇರುವುದರಿಂದ ಅವರು ಇಂದು ಹೆಚ್ಚು ಅಶ್ರುವಾಯು ಬಳಸುತ್ತಿದ್ದಾರೆ. ಯಾವುದೇ ರೀತಿಯ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ.. ನಮ್ಮ ಸಮಸ್ಯೆಗಳಿಗೆ ಪ್ರಧಾನಿ ಅವರ ಬಳಿ ಪರಿಹಾರವಿದೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್ ಹೇಳಿದರು.

ಇದನ್ನೂ ಓದಿ; ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...