Homeಮುಖಪುಟ'ದೆಹಲಿ ಚಲೋ' ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

‘ದೆಹಲಿ ಚಲೋ’ ರೈತರ ಪ್ರತಿಭಟನೆ| ಪೊಲೀಸರ ಪೆಪ್ಪರ್ ಸ್ಪ್ರೇನಿಂದ ರಕ್ಷಣೆಗೆ ಕನ್ನಡಕ ಧರಿಸಿದ ಪ್ರತಿಭಟನಾಕಾರರು

- Advertisement -
- Advertisement -

ಎಮ್‌ಎಸ್‌ಪಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌ನ ರೈತರ ಗುಂಪು ದೆಹಲಿಗೆ ತಮ್ಮ ಮೆರವಣಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಂತೆ, ಭಾನುವಾರ ಪೊಲೀಸರು ಬ್ಯಾರಿಕೇಡ್‌ಗಳನ್ನು ಬಲಪಡಿಸುವ ಮೂಲಕ ಅವರನ್ನು ತಡೆದರು. ಲಾಠಿಗಳ ಶಂಭು ಗಡಿಯಿಂದ ಹರಿಯಾಣಕ್ಕೆ ಬರುತ್ತಿರುವ ರೈತರನ್ನು ತಡೆಯಲು ಲಾಠಿ ಚಾರ್ಜ್ ಬದಲಿಗೆ ಭದ್ರತಾ ಸಿಬ್ಬಂದಿ ಕೆಲವು ವಿನೂತನ ತಂತ್ರಗಳನ್ನು ಬಳಸಿದ್ದಾರೆ.

ಬ್ಯಾರಿಕೇಡಿಂಗ್ ಪಾಯಿಂಟ್‌ನಿಂದ ರೈತರನ್ನು ಚದುರಿಸಲು ಹರಿಯಾಣ ಪೊಲೀಸರು ನಿಯಮಿತ ಮಧ್ಯಂತರದಲ್ಲಿ ಅಶ್ರುವಾಯು ಶೆಲ್‌ಗಳನ್ನು ಹಾರಿಸುತ್ತಿದ್ದಾರೆ. ಪ್ರತಿಯೊಬ್ಬ ರೈತರು ಸ್ಥಳಕ್ಕೆ ಬಂದಾಗಲೆಲ್ಲಾ ಪೊಲೀಸರು ಪೆಪ್ಪರ್ ಸ್ಪ್ರೇ ಬಳಸುತ್ತಿದ್ದಾರೆ.

ರೈತರೂ ಸಹ ಸಂಪೂರ್ಣ ಸಜ್ಜಾಗಿ ಬಂದಿದ್ದಾರೆ. ಅಶ್ರುವಾಯು ಪರಿಣಾಮಗಳನ್ನು ತಗ್ಗಿಸಲು ಅವರು ತಮ್ಮ ಮುಖಗಳನ್ನು ಮುಚ್ಚಿಕೊಂಡಿದ್ದಾರೆ. ಅವರು ರಕ್ಷಣಾತ್ಮಕ ಕನ್ನಡಕಗಳನ್ನು ಸಹ ಧರಿಸಿದ್ದು, ನೀರಿನಂದ ನೆನೆಸಿದ ಸೆಣಬಿನ ಚೀಲಗಳಿಂದ ದೇಹ ಮುಚ್ಚಿದ ಮೂಲಕ ಅಶ್ರುವಾಯು ಶೆಲ್‌ಗಳನ್ನು ಎದುರಿಸಲು ಪ್ರಯತ್ನಿಸುತ್ತಿದ್ದಾರೆ.

101 ರೈತರ ಗುಂಪು ಶಂಭು ಗಡಿಯಿಂದ ದೆಹಲಿಗೆ ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಿತು, ಅವರು ಫೆಬ್ರವರಿಯಲ್ಲಿ ರಾಜಧಾನಿಗೆ ಮೆರವಣಿಗೆ ಮಾಡುವ ಮೊದಲ ಪ್ರಯತ್ನ ವಿಫಲವಾದಾಗಿನಿಂದ ಅವರು ಗಡಿಯಲ್ಲಿದ್ದರು. ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಒತ್ತಾಯಿಸುತ್ತಿದ್ದಾರೆ.

ದೆಹಲಿಗೆ ಮೆರವಣಿಗೆಗೆ ಲಿಖಿತ ಅನುಮತಿಯನ್ನು ತೋರಿಸಲು ಪೊಲೀಸರು ರೈತರಿಗೆ ಕೇಳಿದರು. ಮೆರವಣಿಗೆಯಲ್ಲಿ ಭಾಗವಹಿಸಲು ಅನುಮತಿಸಲಾದ 101 ರೈತರ ಪಟ್ಟಿಗೆ ರೈತರ ಗುಂಪು ಹೊಂದಿಕೆಯಾಗುತ್ತಿಲ್ಲ ಎಂದು ಅವರು ಹೇಳಿದರು.

“ನಾವು ಮೊದಲು ಅವರನ್ನು (ರೈತರನ್ನು) ಗುರುತಿಸುತ್ತೇವೆ ಮತ್ತು ನಂತರ ನಾವು ಅವರಿಗೆ ಮುಂದುವರಿಯಲು ಅವಕಾಶ ನೀಡಬಹುದು. ನಮ್ಮಲ್ಲಿ 101 ರೈತರ ಹೆಸರುಗಳ ಪಟ್ಟಿ ಇದೆ, ಬಂದವರು ಅವರಲ್ಲ. ಅವರು ನಮ್ಮನ್ನು ಗುರುತಿಸಲು ಬಿಡುತ್ತಿಲ್ಲ, ಮುಂದೆ ಸಾಗುತ್ತಿದ್ದಾರೆ” ಎಂದು ಹರಿಯಾಣ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ, ಪೊಲೀಸರು ತಪ್ಪು ಪಟ್ಟಿ ಪಡೆದಿರಬಹುದು ಎಂದು ಪ್ರತಿಭಟನಾನಿರತ ರೈತರೊಬ್ಬರು ತಿಳಿಸಿದರು.

“ನಮ್ಮ 101 ರೈತರು ಮತ್ತು ಕಾರ್ಮಿಕರ ಪಟ್ಟಿಯನ್ನು ಈಗಾಗಲೇ ನೀಡಿದ್ದೇವೆ, ಅವರು (ಪೊಲೀಸರು) ನಮಗೆ ಸ್ಥಳಾಂತರಗೊಳ್ಳಲು ಅನುಮತಿಸುವ ಮೊದಲು ಐಡಿಗಳನ್ನು ಪರಿಶೀಲಿಸುವುದಾಗಿ ನಿರ್ಧರಿಸಿದ್ದರೆ, ನಾವು ಅದಕ್ಕೆ ಸಹಕರಿಸುತ್ತೇವೆ ಎಂದು ಅವರು ನಮಗೆ ತಿಳಿಸಬೇಕು. ನಾವು ಶಿಸ್ತನ್ನು ತೋರಿಸಿದ್ದೇವೆ ಮತ್ತು ಹಾಗೆಯೇ ಮುಂದುವರಿಯುತ್ತೇವೆ… ಗಾಳಿಯ ದಿಕ್ಕು ನಮ್ಮ ಕಡೆಗೆ ಇರುವುದರಿಂದ ಅವರು ಇಂದು ಹೆಚ್ಚು ಅಶ್ರುವಾಯು ಬಳಸುತ್ತಿದ್ದಾರೆ. ಯಾವುದೇ ರೀತಿಯ ತ್ಯಾಗಕ್ಕೂ ನಾವು ಸಿದ್ಧರಿದ್ದೇವೆ.. ನಮ್ಮ ಸಮಸ್ಯೆಗಳಿಗೆ ಪ್ರಧಾನಿ ಅವರ ಬಳಿ ಪರಿಹಾರವಿದೆ” ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್ ಹೇಳಿದರು.

ಇದನ್ನೂ ಓದಿ; ಇಂದು ಮತ್ತೆ ರೈತರಿಂದ ದೆಹಲಿಗೆ ಪ್ರತಿಭಟನಾ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...