Homeಮುಖಪುಟದೆಹಲಿ ಚಲೋ ರೈತರ ಪ್ರತಿಭಟನೆ: ತಲೆಗೆ ಪೆಟ್ಟು ಬಿದ್ದು ಪ್ರತಿಭಟನಾನಿರತ ಯುವ ರೈತ ಸಾವು

ದೆಹಲಿ ಚಲೋ ರೈತರ ಪ್ರತಿಭಟನೆ: ತಲೆಗೆ ಪೆಟ್ಟು ಬಿದ್ದು ಪ್ರತಿಭಟನಾನಿರತ ಯುವ ರೈತ ಸಾವು

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತ್ರಿ ಕಾನೂನು ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವಿನ ಹಗ್ಗಜಗ್ಗಾಟ ಮುಂದುವರೆದಿದ್ದು, 23 ವರ್ಷದ ಶುಭಕರನ್ ಸಿಂಗ್ ಎಂಬ ಪ್ರತಿಭಟನಾಕಾರ ಖಾನೌರಿ ಗಡಿಯಲ್ಲಿ ಬುಧವಾರ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿರುವ ಸುದ್ದಿ ವರದಿಯಾಗಿದೆ.

‘ಮಧ್ಯಾಹ್ನ 3 ಗಂಟೆಗೆ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಅವರು ಸಾವನ್ನಪ್ಪಿದ್ದರು. ಅವರ ತಲೆಗೆ ಬುಲೆಟ್ ಗಾಯಗಳಾಗಿವೆ’ ಎಂದು ಪಟಿಯಾಲಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ರಾಜೇಂದ್ರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಹರ್ನಾಮ್ ಸಿಂಗ್ ತಿಳಿಸಿದ್ದಾರೆ ಎಂದು ದಿಕ್ವಿಂಟ್‌ ವರದಿ ಮಾಡಿದೆ.

ಹರ್ಯಾಣ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾವು ಸಂಭವಿಸಿಲ್ಲ ಎಂದು ಹೇಳಿದ್ದಾರೆ. ‘ಇದುವರೆಗೆ ಬಂದಿರುವ ಮಾಹಿತಿಯ ಪ್ರಕಾರ ಇಂದು ರೈತರ ಪ್ರತಿಭಟನೆಯಲ್ಲಿ ಯಾವುದೇ ರೈತ ಸಾವನ್ನಪ್ಪಿಲ್ಲ. ಇದು ಕೇವಲ ವದಂತಿಯಾಗಿದೆ. ಖಾನೌರಿ ಗಡಿಯಲ್ಲಿ ಇಬ್ಬರು ಪೊಲೀಸರು ಮತ್ತು ಒಬ್ಬ ಪ್ರತಿಭಟನಾಕಾರ ಗಾಯಗೊಂಡಿರುವ ಬಗ್ಗೆ ಮಾಹಿತಿ ಇದೆ, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಬುಧವಾರ ಹರ್ಯಾಣ ಪೊಲೀಸರು ಮತ್ತು ಪ್ರತಿಭಟನಾ ನಿರತ ರೈತರ ನಡುವಿನ ತೀವ್ರ ಮುಖಾಮುಖಿಯ ನಡುವೆ ಬಟಿಂಡಾದ ಬಲೋಹ್ ಗ್ರಾಮದ ನಿವಾಸಿ ಶುಭಕರನ್ ಅವರ ತಲೆಗೆ ಗಾಯವಾಗಿದೆ ಎಂದು ಆರೋಪಿಸಲಾಗಿದೆ.

ಭಾರತೀಯ ಕಿಸಾನ್ ಯೂನಿಯನ್ (ಏಕ್ತಾ ಮಾಲ್ವಾ) ಉಪಾಧ್ಯಕ್ಷ ಗುರ್ವಿಂದರ್ ಸಿಂಗ್ ಬಲೋಹ್ ಘಟನೆಯನ್ನು ದೃಢಪಡಿಸಿದ್ದಾರೆ. ‘ನನ್ನ ಗ್ರಾಮದ ಬಲೋಹ್ ನಿವಾಸಿಯಾಗಿರುವ ಶುಭಕರನ್ ಸಿಂಗ್ ಅವರು ಶಂಭು ಗಡಿಯಲ್ಲಿ ಪೊಲೀಸರ ಗುಂಡಿಗೆ ಗಾಯಗೊಂಡು ಸಾವನ್ನಪ್ಪಿದ್ದಾರೆ. ಈ ದುಃಖದ ಕ್ಷಣದಲ್ಲಿ ನಾವು ಅವರ ಕುಟುಂಬದೊಂದಿಗೆ ಇದ್ದೇವೆ’ ಎಂದು ಅವರು ಹೇಳಿದರು.

ಅಖಿಲ ಭಾರತ ಕಿಸಾನ್ ಮಜ್ದೂರ್ ಸಭಾ ಖಂಡನೆ:

ಖಾನೌರಿಯಲ್ಲಿ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ರಬ್ಬರ್ ಗುಂಡು ಹಾರಿಸಿರುವುದನ್ನು ಅಖಿಲ ಭಾರತ ಕಿಸಾನ್ ಮಜ್ದೂರ್ ಸಭಾ (AIKMS) ಖಂಡಿಸಿದೆ. 23 ವರ್ಷ ವಯಸ್ಸಿನ ಶುಭಕರನ್ ಸಿಂಗ್ ಎಂಬ ಯುವಕ ರಬ್ಬರ್ ಗುಂಡುಗಳಿಂದ ಕೊಲ್ಲಲ್ಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

‘ಪ್ರತಿಭಟನಾ ನಿರತ ಯುವಕರು ಮತ್ತು ರೈತರನ್ನು ದೇಶದ ಶತ್ರುಗಳಂತೆ ಪರಿಗಣಿಸುತ್ತಿರುವ ಮೋದಿ ಸರ್ಕಾರವನ್ನು ಎಐಕೆಎಂಎಸ್ ಖಂಡಿಸಿದೆ. ಅವರು ಉತ್ಪಾದಿಸುವ ಮತ್ತು ದೇಶದ ಆರ್ಥಿಕತೆಯ ತಮ್ಮ ಪಾಲನ್ನು ಮಾತ್ರ ಕೇಳುವ ಜನರ ಮೇಲೆ ಅವರು ಸಶಸ್ತ್ರ ದಾಳಿ ನಡೆಸಿದ್ದಾರೆ. ಸರ್ಕಾರ ಮತ್ತು ಅವರ ಆರ್‌ಎಸ್‌ಎಸ್, ಬಿಜೆಪಿ ಭಾರತೀಯ ರೈತರನ್ನು ಶೋಷಿಸಲು ಕಾರ್ಪೊರೇಟ್, ಎಂಎನ್‌ಸಿಗಳು ಮತ್ತು ವಿದೇಶಿ ಶಕ್ತಿಗಳ ಹಿತಾಸಕ್ತಿಗಳನ್ನು ಪೂರೈಸುತ್ತಿವೆ. ಅವರು ತಮ್ಮ “ಕಾರ್ಪೊರೇಟ್ ಅಭಿವೃದ್ಧಿ” ಗುರಿಯೊಂದಿಗೆ ಎಷ್ಟು ಆಳವಾಗಿ ಮದುವೆಯಾಗಿದ್ದಾರೆ ಎಂದರೆ, ಅವರು ಮತ್ತೊಮ್ಮೆ ರೈತರು ಮತ್ತು ಯುವಕರನ್ನು ಕೊಂದಿದ್ದಾರೆ’ ಎಂದು ಆಕ್ರೋಶ ಹೊರಹಾಕಿದೆ.

‘ಇದು ಆರ್‌ಎಸ್‌ಎಸ್ ಮತ್ತು ಮೋದಿಯವರ ಜನವಿರೋಧಿ ಮತ್ತು ರಾಷ್ಟ್ರವಿರೋಧಿ ಗುಣವನ್ನು ಮತ್ತೊಮ್ಮೆ ಬಹಿರಂಗಪಡಿಸುತ್ತದೆ. ಗುಂಡು ಹಾರಿಸಲು ಆದೇಶಿಸಿದ ಪೊಲೀಸ್ ಮುಖ್ಯಸ್ಥ ಮತ್ತು ಅಧಿಕಾರಿಯನ್ನು ತಕ್ಷಣ ಬಂಧಿಸಬೇಕೆಂದು ಎಂದು ಎಐಕೆಎಂಎಸ್ ಒತ್ತಾಯಿಸುತ್ತದೆ. ಹುತಾತ್ಮರಾದ ಶುಭಕರನ್ ಸಿಂಗ್, 23 ವರ್ಷ ವಯಸ್ಸಿನವರು, ಭಟಿಂಡಾ ಜಿಲ್ಲೆಯ ಬಲೂನ್ ಗ್ರಾಮದವರು. ಅವರ ದೇಹವನ್ನು ರಾಜೇಂದ್ರ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಕೀರ್ತಿ ಕಿಸಾನ್ ಯೂನಿಯನ್ ಮುಖಂಡರು, ರಮೀಂದರ್ ಪಟಿಯಾಲ ಮತ್ತು ಇತರರು ಆಸ್ಪತ್ರೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಇದ್ದಾರೆ’ ಎಂದು ಸಂಘಟನೆ ವಿವರಿಸಿದೆ.

ಇದಕ್ಕೂ ಮೊದಲು, ಫೆಬ್ರವರಿ 16 ರಂದು ಶಂಭು ಗಡಿಯಲ್ಲಿ 79 ವರ್ಷದ ರೈತ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ನಡೆಯುತ್ತಿರುವ ಪ್ರತಿಭಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ; ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ; ಕ್ಯುರೇಟಿವ್ ವಿಚಾರಣೆ ಮುಂದೂಡಿದ ದೆಹಲಿ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...