Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...