Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...