Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...