Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...