Homeಚಳವಳಿದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ದೆಹಲಿ ಚಲೋ ಲೈವ್ ಅಪ್ಡೇಟ್ಸ್‌: ದೆಹಲಿಯಲ್ಲಿ ಈಗೇನಾಗುತ್ತಿದೆ?

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

- Advertisement -
- Advertisement -

ದೆಹಲಿ ಗಡಿಯಲ್ಲಿ ರೈತರು ಒಳಪ್ರವೇಶಿಸದಂತೆ ತಡೆಯಲು ಉಕ್ಕಿನ ಸರಳುಗಳು, ರೇಜರ್ ಬ್ಲೇಡ್ ಉಳ್ಳ ಮುಳ್ಳು ತಂತಿಗಳು ಮತ್ತು ದೊಡ್ಡ ಬಂಡೆಗಳನ್ನು ತಡೆಗೋಡೆಗಳಾಗಿ ಬಳಸಲಾಗಿದೆ. ಇಂದು ಮಧ್ಯಾಹ್ನ 12:50ರ ಸಮಯದಲ್ಲಿ ಪಟ್ಟು ಬಿಡದ ರೈತರ ದಂಡು ದೆಹಲಿಯತ್ತ ಹೆಜ್ಜೆ ಹಾಕಿದೆ. ದೆಹಲಿಯ ಶಂಭು ಗಡಿಯಲ್ಲಿ ಪೊಲೀಸರು ಅಶ್ರವಾಯು ಮತ್ತು ಜಲಫಿರಂಗಿ ಸಿಡಿಸಿದ್ದಾರೆ.

ನಮಗೆ ಕೊರೊನಾ ಸೋಂಕಿನ ಭಯವಿಲ್ಲ. ಆದರೆ ಸರ್ಕಾರದ ಈ ತಾರತಮ್ಯ, ಬೇಧ ಭಾವದ ಭಯವಿದೆ ಎಂದು ರೈತರು ಹೇಳಿದ್ದಾರೆ. ನಾವು ರೈತರು ಹಾಗಾಗಿ ಇಲ್ಲಿ ಸೇರಿದ್ದೇವೆ. ಇದು ಯಾವ ರಾಜಕೀಯ ಪಕ್ಷದ ಹೋರಾಟವಲ್ಲ. ಬದಲಿಗೆ ಸಮಸ್ತ ರೈತರ ಹೋರಾಟವಾಗಿದೆ. ಯಾರಾದರೂ ಇದನ್ನು ರಾಜಕೀಯ ಪಕ್ಷದ ಹೋರಾಟವೆಂದು ಕರೆದರೆ ಅವರು ರೈತ ವಿರೋಧಿಗಳು ಎಂದು ರೈತರು ಕಿಡಿಕಾರಿದ್ದಾರೆ.

ಈ ನಡುವೆ ರೋಹ್ಟಕ್‌ನಲ್ಲಿ ರೈತರ ಲಾರಿಯೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 40 ವರ್ಷದ ರೈತರೊಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕೂಡಲೇ ಕೇಂದ್ರ ಸರ್ಕಾರ ರೈತ ಸಂಘಟನೆಗಳೊಂದಿಗೆ ಮಾತಕತೆ ನಡೆಸಬೇಕು ಎಂದು ತಾಕೀತು ಮಾಡಿದ್ದಾರೆ. ಕೇಂದ್ರವು ತನ್ನ ರಾಜತಾಂತ್ರಿಕತೆಯನ್ನು ಮೆರೆಯಬೇಕು. ರೈತರ ಕನಿಷ್ಠ ಬೆಂಬಲ ಬೆಲೆ ಹಕ್ಕೊತ್ತಾಯವನ್ನು ಒಪ್ಪಿಕೊಳ್ಳಬೇಕು. ಇದು ಎಲ್ಲಾ ರೈತರ ಮೂಲಭೂತ ಹಕ್ಕು. ಇದನ್ನು ಕೇವಲ ಬಾಯಿಮಾತಿನಲ್ಲಿ ಒಪ್ಪಿಕೊಳ್ಳದೆ ಅದನ್ನೊಂದು ಸರ್ಕಾರಿ ಆದೇಶವನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಯಾರಾದರೂ ಇದನ್ನು ಕಾಂಗ್ರೆಸ್ ಕುಮ್ಮಕ್ಕಿನ ಹೋರಾಟ ಎಂದು ಕರೆದರೆ ಅವರು ಅಂಧರು ಎಂದು ಪರಿಗಣಿಸಬೇಕು. ಏಕೆಂದರೆ ದೇಶದ ಲಕ್ಷಾಂತರ ರೈತರು ದೆಹಲಿ ಪ್ರವೇಶಿಸಲು ಹಾತೊರೆಯುತ್ತಿರುವುದನ್ನು ಅವರ ಕಣ್ಣುಬಿಟ್ಟು ನೋಡಬೇಕು. ಇದು ಅವರ ಜೀವನೋಪಾಯಕ್ಕೆ ನಡೆಯುತ್ತಿರುವ ಜೀವನ್ಮರಣದ ಹೋರಾಟವಾಗಿದೆ. ಅವರಿಗೆ ಯಾವುದೇ ಪ್ರಚೋದನೆ ಅಥವಾ ಪಕ್ಷದ ಬೆಂಬಲ ಬೇಕಿಲ್ಲ ಎಂದು ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

ಇನ್ನೊಂದೆಡೆ ದೆಹಲಿ ಪ್ರವೇಶಿಸಿರುವ ಲಕ್ಷಾಂತರ ರೈತರನ್ನು ಬಂಧಿಸಿಡಲು 09 ಸ್ಟೇಡಿಯಂಗಳನ್ನು ಬಂಧನಕೇಂದ್ರಗಳಾಗಿ ಮಾರ್ಪಡಿಸಬೇಕೆಂಬ ದೆಹಲಿ ಪೊಲೀಸರ ಬೇಡಿಕೆಯನ್ನು ದೆಹಲಿ ಸರ್ಕಾರ ನಿರಾಕರಿಸಿದೆ.

ರೈತ ಮುಖಂಡರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದು ತಾವು ದೆಹಲಿ ಪ್ರವೇಶಿಸಲು ಮತ್ತು ರಾಮಲೀಲಾ ಮೈದಾನದಲ್ಲಿ ಹೋರಾಟ ನಡೆಸಲು ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಅವಕಾಶ ನೀಡಬೇಕೆಂದು ಒತ್ತಾಯಿಸಿದ್ದಾರೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ರಾಜಸ್ಥಾನ ಮತ್ತು ಉತ್ತರಖಂಡ ರಾಜ್ಯಗಳಿಂದ ಹೆಚ್ಚಿನ ಸಂಖ್ಯೆಯಲ್ಲಿದ ರೈತರು ದೆಹಲಿ ಗಡಿಗಳಲ್ಲಿ ಜಮಾಯಿಸಿದ್ದಾರೆ. ಸರ್ಕಾರ ಅವರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡದಿದ್ದರೆ ತಿಂಗಳುಗಟ್ಟಲೇ ಗಡಿಯಲ್ಲಿಯೇ ಅನಿರ್ದಿಷ್ಟ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ಇದನ್ನೂ ಓದಿ: ದೆಹಲಿ ಪ್ರವೇಶಿಸಲು ಶತಪ್ರಯತ್ನ: ಮುಂಜಾನೆಯೆ ರೈತರ ಮೇಲೆ, ಲಾಠೀ ಚಾರ್ಜ್, ಜಲಫಿರಂಗಿ ಸಿಡಿಸಿದ ಪೊಲೀಸರು!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...