Homeಮುಖಪುಟದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

ದೆಹಲಿ ಚಲೋ ಮೆರವಣಿಗೆ: ರೈತ ಮುಖಂಡರೊಂದಿಗೆ ಇಂದು ಕೇಂದ್ರ ಸಚಿವರ 4 ಸುತ್ತಿನ ಮಾತುಕತೆ

- Advertisement -
- Advertisement -

ಪಂಜಾಬ್-ಹರಿಯಾಣ ಗಡಿಯಲ್ಲಿ ನಡೆಯುತ್ತಿರುವ ‘ದೆಹಲಿ ಚಲೋ’ ಪ್ರತಿಭಟನೆಯನ್ನು ಅಂತ್ಯಗೊಳಿಸಲು ಕೇಂದ್ರ ಸರ್ಕಾರವು ಫೆಬ್ರವರಿ 18ರ ಭಾನುವಾರವಾದ ಇಂದು ರೈತ ಸಂಘಟನೆಗಳ ಮುಖಂಡರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲಿದೆ. ತಮ್ಮ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ) ಕಾನೂನು ಖಾತರಿಗಾಗಿ ರೈತರ ಬೇಡಿಕೆಗಳನ್ನು ಪರಿಹರಿಸಲು ವಿಫಲವಾದ ಕಾರಣ ಹಿಂದಿನ ಸುತ್ತಿನ ಮಾತುಕತೆಗಳು ವಿಫಲವಾಗಿವೆ.

ಈ ನಡುವೆ, ಹರಿಯಾಣದಲ್ಲಿ ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಫೆಬ್ರವರಿ 19 ರವರೆಗೆ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಲಾಗಿದೆ. ಸರ್ಕಾರವು ಈ ಹಿಂದೆ ಫೆಬ್ರವರಿ 13 ರಿಂದ ಫೆಬ್ರವರಿ 15 ರವರೆಗೆ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸುವುದನ್ನು ವಿಸ್ತರಿಸಿತ್ತು.

ಎಂಎಸ್‌ಪಿಗೆ ಕಾನೂನು ಮಾನ್ಯತೆ ಮತ್ತು ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಒತ್ತಾಯಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ. ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಪ್ರಾಯೋಗಿಕವಲ್ಲ’ ಎಂದು ಹೇಳಿದ್ದಾರೆ.

ಸಮಸ್ಯೆಗಳ ಪರಿಹಾರಕ್ಕಾಗಿ ನಾಲ್ಕನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ, ಪಿಯೂಷ್ ಗೋಯಲ್ ಮತ್ತು ನಿತ್ಯಾನಂದ್ ರೈ ಅವರನ್ನು ಭೇಟಿ ಮಾಡುವ ಒಂದು ದಿನ ಮೊದಲು ರೈತ ಮುಖಂಡರು ಶನಿವಾರ ‘ಚೆಂಡು ಸರ್ಕಾರದ ಅಂಗಳದಲ್ಲಿದೆ’ ಎಂದು ಹೇಳಿದರು.

ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದಿಂದ ಕರೆ ನೀಡಲಾದ ಅವರ ‘ದೆಹಲಿ ಚಲೋ’ ಮೆರವಣಿಗೆಯ ಐದನೇ ದಿನದಂದು ರೈತರು ಪಂಜಾಬ್-ಹರಿಯಾಣ ಗಡಿಯ ಶಂಭು ಮತ್ತು ಖಾನೌರಿ ಪಾಯಿಂಟ್‌ಗಳಲ್ಲೆ ಬೀಡುಬಿಟ್ಟಿದ್ದಾರೆ. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ಅವರ ಬೇಡಿಕೆಗಳನ್ನು ಕೇಂದ್ರವು ಒಪ್ಪಿಕೊಳ್ಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು ‘ಕಾರ್ಯಸಾಧುವಲ್ಲ’:

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ಮತ್ತು ಬೆಲೆ ವ್ಯವಸ್ಥೆ ಸೇರಿದಂತೆ ಸ್ವಾಮಿನಾಥನ್ ಸಮಿತಿಯ ವರದಿಯ ಅನುಷ್ಠಾನಕ್ಕೆ ಆಗ್ರಹಿಸಿ ರೈತರು ನಡೆಸುತ್ತಿರುವ ಆಂದೋಲನದ ನಡುವೆ, ಪ್ರಮುಖ ಕೃಷಿ ಅರ್ಥಶಾಸ್ತ್ರಜ್ಞ ಡಾ ಸರ್ದಾರಾ ಸಿಂಗ್ ಜೋಲ್ ಅವರು ಎಲ್ಲ ಬೆಳೆಗಳಿಗೆ ಎಂಎಸ್‌ಪಿ ನೀಡುವುದು “ಕಾರ್ಯಸಾಧುವಲ್ಲ” ಎಂದು ಹೇಳಿದ್ದಾರೆ.

ಆದರೆ. ರೈತರು ಮಾತ್ರ ಸಾಲ ಮನ್ನಾ ಮತ್ತು ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನು ಖಾತ್ರಿ ನೀಡುವುದರ ಜೊತೆಗೆ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನ, ರೈತರು ಮತ್ತು ರೈತ ಕಾರ್ಮಿಕರಿಗೆ ಪಿಂಚಣಿಗಾಗಿ ಒತ್ತಾಯಿಸಿ ಅವರು ನಡೆಸುತ್ತಿರುವ ಹೋರಾಟ ಭಾನುವಾರ ಆರನೇ ದಿನಕ್ಕೆ ಕಾಲಿಟ್ಟಿದೆ.

ಹೆಚ್ಚಿನ ಸಮಯ ಕೇಳಿದ ಕೇಂದ್ರ:

ಶಂಭು ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಈ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚಿಸಲು ಸರ್ಕಾರ ಸ್ವಲ್ಪ ಸಮಯಾವಕಾಶ ಕೇಳಿದೆ ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿ ಮುಖಂಡರು ಭಾನುವಾರ ಹೇಳಿದ್ದಾರೆ.

‘ಶಂಭು ಗಡಿಯಲ್ಲಿ ಇದು ನಮ್ಮ ಆರನೇ ದಿನ, ಇಂದು ನಾವು ಸರ್ಕಾರದ ಜೊತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸುತ್ತಿದ್ದೇವೆ, ಸರ್ಕಾರ ಸ್ವಲ್ಪ ಸಮಯ ಕೇಳಿದೆ ಮತ್ತು ಕೇಂದ್ರ ಸಚಿವರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದೆ. ಎಂದು ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವನ್ ಸಿಂಗ್ ಪಂಧೇರ್ ಭಾನುವಾರ ಹೇಳಿದ್ದಾರೆ.

ಫೆಬ್ರವರಿ 21 ರಂದು 4 ರಾಜ್ಯಗಳಲ್ಲಿ ಧರಣಿ

ಫೆಬ್ರವರಿ 21 ರಂದು ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಉತ್ತರಾಖಂಡದಲ್ಲಿ ರೈತರು ಧರಣಿ ನಡೆಸಲಿದ್ದಾರೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಘೋಷಿಸಿದ್ದಾರೆ.

ಇಂದು ನಾಲ್ಕನೇ ಸುತ್ತಿನ ಮಾತುಕತೆ

ರೈತ ಸಂಘದ ಮುಖಂಡರು ಭಾನುವಾರ ಕೇಂದ್ರ ಸಚಿವರೊಂದಿಗೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದು, ದೆಹಲಿ ಚಲೋ ಮೆರವಣಿಗೆಯನ್ನು ಅಂತ್ಯಗೊಳಿಸಲು ಕೇಂದ್ರವು ಆಶಿಸುತ್ತಿದೆ. ಆದಾಗ್ಯೂ, ರೈತರು ಎಂಎಸ್‌ಪಿಯ ಕಾನೂನು ಖಾತರಿಗಾಗಿ ತಮ್ಮ ಬೇಡಿಕೆಯನ್ನು ಪ್ರತಿಪಾದಿಸಿದ್ದಾರೆ.

ಇದನ್ನೂ ಓದಿ; ಮತಾಂತರ: ಕಠಿಣ ಶಿಕ್ಷೆಗೆ ಅವಕಾಶ ಕಲ್ಪಿಸಬಲ್ಲ ಮಸೂದೆ ಮಂಡಿಸಲು ಛತ್ತೀಸ್‌ಗಢ ಸಜ್ಜು; ಪ್ರಾಸ್ತಾವಿತ ಮಸೂದೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...